AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಾತಿ ವಿವಾಹ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಪಿಣರಾಯಿ ವಿಜಯನ್

ಅಂತರ್ಜಾತಿ ವಿವಾಹವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಯುವಕ-ಯುವತಿ ಒಬ್ಬರನ್ನೊಬ್ಬರು ಇಷ್ಟಪಟ್ಟು ಮದುವೆಯಾಗಲು ನಿರ್ಧರಿಸಿದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಈ ಸಮಯದಲ್ಲಿ ಯಾವುದೇ ಜಾತಿ ಅಥವಾ ಧರ್ಮ ಅಡ್ಡಿಯಾಗುವುದಿಲ್ಲ ಎಂದಿರುವ ಅವರು ಇದನ್ನು ಬದಲಾವಣೆಯ ಭಾಗ ಎಂದು ಕರೆದಿದ್ದಾರೆ.

ಅಂತರ್ಜಾತಿ ವಿವಾಹ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್Image Credit source: The Economic Times
ನಯನಾ ರಾಜೀವ್
|

Updated on: Dec 08, 2023 | 10:57 AM

Share

ಅಂತರ್ಜಾತಿ ವಿವಾಹ(Inter-Caste Marriage) ವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಯುವಕ-ಯುವತಿ ಒಬ್ಬರನ್ನೊಬ್ಬರು ಇಷ್ಟಪಟ್ಟು ಮದುವೆಯಾಗಲು ನಿರ್ಧರಿಸಿದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಈ ಸಮಯದಲ್ಲಿ ಯಾವುದೇ ಜಾತಿ ಅಥವಾ ಧರ್ಮ ಅಡ್ಡಿಯಾಗುವುದಿಲ್ಲ ಎಂದಿರುವ ಅವರು ಇದನ್ನು ಬದಲಾವಣೆಯ ಭಾಗ ಎಂದು ಕರೆದಿದ್ದಾರೆ.

ಇಂತಹ ಮದುವೆಗಳಿಗೆ ಮೊದಲಿನಿಂದಲೂ ವಿರೋಧವಿದೆ, ಕೆಲವೊಮ್ಮೆ ಒಂದು ಕಡೆಯವರು ಮಾತ್ರ ವಿರೋಧಿಸುತ್ತಾರೆ, ಕೆಲವೊಮ್ಮೆ ಎರಡೂ ಕಡೆಯಿಂದಲೂ ವಿರೋಧವಿರುತ್ತದೆ. ಆದರೆ ಅಂತಹ ಮದುವೆಗಳು ನಿಂತಿಲ್ಲ. ಮುಸ್ಲಿಂ ಮುಖಂಡರೊಬ್ಬರು ತಮ್ಮ ಪಕ್ಷದ ಮೇಲೆ ಮಾಡಿರುವ ಆರೋಪದ ಕುರಿತು ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿ ಉತ್ತರಿಸಿದರು.

ಸುನ್ನಿ ಯುವಜನ ಸಂಘದ ಕಾರ್ಯದರ್ಶಿ ನಾಸರ್ ಫೈಝಿ ಬುಧವಾರ ಈ ಆರೋಪ ಮಾಡಿದ್ದರು. ಆರೋಪಗಳ ಪ್ರಕಾರ, ಪಿಣರಾಯಿ ವಿಜಯನ್ ನೇತೃತ್ವದ ರಾಜ್ಯದ ಎಡ ಸಮ್ಮಿಶ್ರ ಸರ್ಕಾರವು ಅಂತರ್ ಧರ್ಮೀಯ ವಿವಾಹಗಳನ್ನು ಉತ್ತೇಜಿಸುತ್ತಿದೆ. ಇದಕ್ಕೆ ನಾಸರ್ ಫೈಝಿ ಎಡಪಕ್ಷಕ್ಕೆ ಸಂಬಂಧಿಸಿದ ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳನ್ನು ದೂರಿದ್ದರು. ಪಕ್ಷದ ಮೇಲಿನ ಈ ಆರೋಪ ನಿರಾಧಾರ ಎಂದು ಮುಖ್ಯಮಂತ್ರಿ ವಿಜಯನ್ ಹೇಳಿದ್ದಾರೆ.

ಮತ್ತಷ್ಟು ಓದಿ: ಚಾಮರಾಜನಗರ: ಅಂತರ್ಜಾತಿ ವಿವಾಹ ಆಗಿದ್ದಕ್ಕೆ ದಂಪತಿಗೆ 6 ಲಕ್ಷ ದಂಡ, ಗ್ರಾಮದಿಂದ ಬಹಿಷ್ಕಾರ ಶಿಕ್ಷೆ; ದೂರು ದಾಖಲು

ಕೋಳಿಕ್ಕೋಡ್ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಾಸರ್ ಫೈಝಿ ಎಡ ಸಮ್ಮಿಶ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ಎಡ ಸರ್ಕಾರದ ಜಾತ್ಯತೀತತೆ ಭ್ರಮೆಯಾಗಿದ್ದು, ಜಾತ್ಯತೀತತೆಯ ಹೆಸರಿನಲ್ಲಿ ಸಿಪಿಎಂ ಮುಸ್ಲಿಮರಿಗೆ ಏನು ಮಾಡುತ್ತಿದ್ದರೂ ಅದನ್ನು ಎಚ್ಚರಿಕೆಯಿಂದ ನೋಡಬೇಕು ಎಂದು ನಾಸರ್ ಹೇಳಿದ್ದರು.

ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐ ಅಥವಾ ಯುವ ಸಂಘಟನೆ ಡಿವೈಎಫ್‌ಐ ಆಗಲಿ ಇದನ್ನು ಮಾಡುತ್ತಿಲ್ಲ ಎಂದು ವಿಜಯನ್ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಪ್ರಕಾರ, ಈ ವಿದ್ಯಾರ್ಥಿ ಸಂಘಟನೆಗಳು ಅಂತರ್ಜಾತಿ ವಿವಾಹದ ಬ್ಯೂರೋ ಆಗಿ ಕೆಲಸ ಮಾಡುತ್ತಿಲ್ಲ. ಇದು ಸಮಯದೊಂದಿಗೆ ನಡೆಯುತ್ತಿರುವ ಬದಲಾವಣೆಯ ಸೂಚಕವಾಗಿದೆ ಮತ್ತು ಸರ್ಕಾರ ಅಥವಾ ಸಂಸ್ಥೆಗಳು ಅಂತಹ ಯಾವುದೇ ಬದಲಾವಣೆಗಾಗಿ ಕೆಲಸ ಮಾಡುತ್ತಿಲ್ಲ. ಅಂತಹ ಬದಲಾವಣೆಗಳನ್ನು ನಿಲ್ಲಿಸುತ್ತಾರೆ ಎಂದು ಯಾರಾದರೂ ಭಾವಿಸಿದರೆ ಅದು ತಪ್ಪಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್