AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಲ್ಲಪೆರಿಯಾರ್ ಡ್ಯಾಮ್ ನೀರಿನ ಮಟ್ಟ ಹೆಚ್ಚಳ: ಮುಂಜಾಗ್ರತೆಗಾಗಿ ಎಂಕೆ ಸ್ಟಾಲಿನ್​ಗೆ ಪತ್ರ ಬರೆದ ಪಿಣರಾಯಿ ವಿಜಯನ್

Mullaperiyar Dam: ಮುಲ್ಲಪೆರಿಯಾರ್ ಡ್ಯಾಮ್ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಇದ್ದು ಉಸ್ತುವಾರಿಯನ್ನು ತಮಿಳುನಾಡು ಸರ್ಕಾರ ನೋಡಿಕೊಳ್ಳುತ್ತಿದೆ. ಈ ಡ್ಯಾಮ್​ 1895 ರಲ್ಲಿ ಬ್ರಿಟೀಷರು ನಿರ್ಮಿಸಿದ್ದಾಗಿದೆ. ತಮಿಳುನಾಡಿನ ಮಧುರೈಗೆ ನೀರಿನ ಪೂರೈಕೆ ನೋಡಿಕೊಳ್ಳಲು ಈ ಡ್ಯಾಮ್ ಕಟ್ಟಲಾಗಿದೆ.

ಮುಲ್ಲಪೆರಿಯಾರ್ ಡ್ಯಾಮ್ ನೀರಿನ ಮಟ್ಟ ಹೆಚ್ಚಳ: ಮುಂಜಾಗ್ರತೆಗಾಗಿ ಎಂಕೆ ಸ್ಟಾಲಿನ್​ಗೆ ಪತ್ರ ಬರೆದ ಪಿಣರಾಯಿ ವಿಜಯನ್
ಎಂಕೆ ಸ್ಟಾಲಿನ್​ಗೆ ಪತ್ರ ಬರೆದ ಪಿಣರಾಯಿ ವಿಜಯನ್
TV9 Web
| Updated By: ganapathi bhat|

Updated on:Oct 24, 2021 | 9:00 PM

Share

ತಿರುವನಂತಪುರ: ಮುಲ್ಲಪೆರಿಯಾರ್ ಡ್ಯಾಮ್​ನಿಂದ ಹಂತಹಂತವಾಗಿ ನೀರು ಬಿಡುಗಡೆ ಮಾಡುವಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ಗೆ ಪತ್ರ ಬರೆದಿದ್ದಾರೆ. ಡ್ಯಾಮ್​ನ ನೀರಿನ ಮಟ್ಟ ಏರಿಕೆ ಆಗುತ್ತಿದೆ. ಈ ಬಗ್ಗೆ ತಮಿಳುನಾಡಿನಿಂದ ಮೊದಲ ಎಚ್ಚರಿಕೆ ಅಕ್ಟೋಬರ್ 23 ರಂದು ಹೇಳಲಾಗಿತ್ತು.

ಇಂದು (ಅಕ್ಟೋಬರ್ 24) ಪಿಣರಾಯಿ ವಿಜಯನ್ ತಮ್ಮ ಪತ್ರದಲ್ಲಿ, ಕೇರಳದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹ ಪರಿಸ್ಥಿತಿ, ಭೂಕುಸಿತ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡ್ಯಾಮ್​ನ ನೀರಿನ ಮಟ್ಟವನ್ನು ಗಮನಿಸಬೇಕು. ಅದರಿಂದಾಗಿ ಅಹಿತಕರ ಘಟನೆಗಳು ಆಗದಂತೆ ತಡೆಯಬೇಕು ಎಂದು ಕೇಳಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದೂ ಹೇಳಿದ್ದಾರೆ.

ಮುಲ್ಲಪೆರಿಯಾರ್ ಡ್ಯಾಮ್ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಇದ್ದು ಉಸ್ತುವಾರಿಯನ್ನು ತಮಿಳುನಾಡು ಸರ್ಕಾರ ನೋಡಿಕೊಳ್ಳುತ್ತಿದೆ. ಈ ಡ್ಯಾಮ್​ 1895 ರಲ್ಲಿ ಬ್ರಿಟೀಷರು ನಿರ್ಮಿಸಿದ್ದಾಗಿದೆ. ತಮಿಳುನಾಡಿನ ಮಧುರೈಗೆ ನೀರಿನ ಪೂರೈಕೆ ನೋಡಿಕೊಳ್ಳಲು ಈ ಡ್ಯಾಮ್ ಕಟ್ಟಲಾಗಿದೆ.

ಅಕ್ಟೋಬರ್ 23ರಂದು ಮುಲ್ಲಪೆರಿಯಾರ್ ಡ್ಯಾಮ್​ನ ನೀರಿನ ಮಟ್ಟ 136 ಅಡಿಗಳಷ್ಟು ಆಗಿತ್ತು. ಹಾಗೂ ಈ ಬಗ್ಗೆ ತಮಿಳುನಾಡು ಸರ್ಕಾರ ಇಡುಕ್ಕಿ ಜಿಲ್ಲಾಡಳಿತಕ್ಕೆ ಎಚ್ಚರಿಕೆಯನ್ನೂ ನೀಡಿತ್ತು. ಡ್ಯಾಮ್​ನ ಹೊರಹರಿವಿನ ಭಾಗದಲ್ಲಿ ವಾಸಿಸುವ ಜನರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಲಾಗಿತ್ತು. ಭಾನುವಾರ 5 ಗಂಟೆಯಂತೆ, ಇಲ್ಲಿನ ನೀರಿನ ಮಟ್ಟ 136.90 ಅಡಿ ಆಗಿದೆ.

ಭಾರತೀಯ ಹವಾಮಾನ ಇಲಾಖೆ(India Meteorological Department) ಅಕ್ಟೋಬರ್​ 25ರವರೆಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಆರೆಂಜ್​ ಮತ್ತು ಯೆಲ್ಲೋ ಅಲರ್ಟ್​​ ಘೋಷಿಸಿದೆ. ಅದರಲ್ಲಿ ಕೊಟ್ಟಾಯಂ, ಇಡುಕ್ಕಿ, ಪಲಕ್ಕಾಡ್​​, ಮಲಪ್ಪುರಂ, ಕೊಯಿಕ್ಕೊಡ್​, ವಯಾನಾಡ್​ ಮತ್ತು ಕಣ್ಣೂರು, ಪಥನಂತಿಟ್ಟ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಹೇರಲಾಗಿದ್ದು, ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ, ತ್ರಿಶೂರ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ  ಹಳದಿ ಎಚ್ಚರಿಕೆ ನೀಡಲಾಗಿದೆ. ಆರೆಂಜ್​ ಅಲರ್ಟ್​ ಎಂದರೆ 6 ಸಿಎಂನಿಂದ 20 ಸಿಎಂನವರೆಗೆ ಮಳೆಯಾಗಬಹುದು ಎಂಬ ಎಚ್ಚರಿಕೆಯಾಗಿದೆ. ಹಾಗೇ ಹಳದಿ ಅಲರ್ಟ್​ ಎಂದರೆ 6ಸಿಎಂನಿಂದ 11 ಸಿಎಂವರೆಗೆ ಮಳೆಯಾಗಬಹುದು ಎಂಬ ಮುನ್ಸೂಚನೆಯಾಗಿದೆ.

ಸದ್ಯ ಕೇರಳದಲ್ಲಿ ನೈಋತ್ಯ ಮಾನ್ಸೂನ್​ ಸಕ್ರಿಯವಾಗಿದೆ. ಹೀಗಾಗಿ ಕೇರಳದ ಬಹುತೇಕ ಪ್ರದೇಶಗಳಲ್ಲಿ ಮತ್ತು ಲಕ್ಷದ್ವೀಪದ ವಿವಿಧ ಕಡೆಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೇ, ಇಂದು ಕೇರಳದ ಕರಾವಳಿ ತೀರದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ಇರಬಹುದಾದ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯಬಾರದೆಂದು ಸೂಚಿಸಲಾಗಿದೆ.

ಇದನ್ನೂ ಓದಿ: Kerala Floods: ಕರ್ನಾಟಕ ಬಿಜೆಪಿಯಿಂದ ಕೇರಳಕ್ಕೆ ಅಗತ್ಯ ವಸ್ತುಗಳ ರವಾನೆ

ಇದನ್ನೂ ಓದಿ: ಕೇರಳದಲ್ಲಿ ಅ.25ರವರೆಗೂ ಮಳೆಯ ಎಚ್ಚರಿಕೆ; 8 ಜಿಲ್ಲೆಗಳಲ್ಲಿ ಐಎಂಡಿಯಿಂದ ಆರೆಂಜ್​ ಅಲರ್ಟ್​​

Published On - 8:57 pm, Sun, 24 October 21

ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ