AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ವಿ.ಪ್ರಕಾಶ್ ನಿಧನ

VV Prakash: ಮಲಪ್ಪುರಂ ಜಿಲ್ಲೆಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಪ್ರಕಾಶ್ ಅವರಿಗೆ ಎದೆ ನೋವು ನೋವು ಕಾಣಿಸಿಕೊಂಡ ಕಾರಣ ಮಂಜೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ 3 ಗಂಟೆಗೆ ಅವರು ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ.

ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ವಿ.ಪ್ರಕಾಶ್ ನಿಧನ
ವಿವಿ ಪ್ರಕಾಶ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 29, 2021 | 4:01 PM

Share

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ವಿ. ಪ್ರಕಾಶ್ ಗುರುವಾರ ಬೆಳಗ್ಗೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಮಲಪ್ಪುರಂ ಜಿಲ್ಲೆಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಪ್ರಕಾಶ್ ಅವರಿಗೆ ಎದೆ ನೋವು ನೋವು ಕಾಣಿಸಿಕೊಂಡ ಕಾರಣ ಮಂಜೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ 3 ಗಂಟೆಗೆ ಅವರು ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ. ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಸುಮಾರು ಒಂದು ಗಂಟೆಗಳ ಕಾಲ ಕಾಂಗ್ರೆಸ್ ಕಚೇರಿಯಲ್ಲಿರಿಸಿ, ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಅಂತಿಮ ನಮನ ಸಲ್ಲಿಸಿದ್ದಾರೆ. ಇದಾದ ನಂತರ ಕೊವಿಡ್ ನಿಯಮಾವಳಿಗಳನ್ನು ಪಾಲಿಸಿ ಎಡಕ್ಕರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ನಿಲಂಬೂರ್ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಪ್ರಕಾಶ್ ಅವರು ಇತ್ತೀಚೆಗೆ ಸ್ಥಳೀಯ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ಪ್ರಸ್ತುತ ಈ ಕ್ಷೇತ್ರದಲ್ಲಿಎಲ್​ಡಿಎಫ್ ಬೆಂಬಲಿತ ಪಕ್ಷೇತರ ಪಿ.ವಿ ಅನ್ವರ್ ಶಾಸಕರಾಗಿದ್ದಾರೆ. ಹಲವು ವರ್ಷಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ನಿಲಂಬೂರ್ ನಲ್ಲಿ 2016 ರಲ್ಲಿ ಎಲ್ ಡಿಎಫ್ ಗೆದ್ದಿತ್ತು. ಚುನಾವಣಾ ಫಲಿತಾಂಶ ಪ್ರಕಟವಾಗಲು ಇನ್ನೇನು ಮೂರು ದಿನಗಳು ಬಾಕಿ ಇರುವಾಗ ಪ್ರಕಾಶ್ ವಿಯೋಗ ಕಾಂಗ್ರೆಸ್ ಪಾಲಿಗೆ ಅತೀವ ದುಃಖವನ್ನುಂಟು ಮಾಡಿದೆ.

ಅನುಭವಿ ರಾಜಕಾರಣಿ ಆಗಿದ್ದ ಪ್ರಕಾಶ್ ತಿರುವನಂತಪುರಂನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯಾಗಿದ್ದರು. ಕೆಎಸ್ಯು​ ಮತ್ತು ಯೂತ್ ಕಾಂಗ್ರೆಸ್ ನಾಯಕನಾಗಿ ಕಾರ್ಯ ನಿರ್ವಹಿಸಿದ್ದ ಇವರು 2011ರಲ್ಲಿ ಚುನಾವಣೆ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಎಲ್​ಡಿಎಫ್ ಅಭ್ಯರ್ಥಿ ಕೆ.ಟಿ.ಜಲೀಲ್, ಪ್ರಕಾಶ್ ವಿರುದ್ಧ ಗೆಲುವು ಸಾಧಿಸಿದ್ದರು.

ಕಂಬನಿ ಮಿಡಿದ ನಾಯಕರು

ವಿ.ವಿ  ಪ್ರಕಾಶ್ ಅವರ ಆಕಸ್ಮಿಕ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಅವರಿಗಾಗಿ ನಾನು ಚುನಾವಣಾ ಪ್ರಚಾರ ಮಾಡಿದ್ದು, ಅವರ ಗೆಲುವಿಗಾಗಿ ಕಾಯುತ್ತಿದ್ದೆವು.  ಉತ್ತಮ  ಸಾಮಾಜಿಕ ಮತ್ತು  ರಾಜಕೀಯ ಕಾರ್ಯಕರ್ತರಾಗಿದ್ದರು ಅವರು . ಡಿಸಿಸಿ  ಅಧ್ಯಕ್ಷರೂ ಆಗಿದ್ದರು. ಓಂ ಶಾಂತಿ  ಎಂದು ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ .

ಮಲಪ್ಪುಂ ಡಿಸಿಸಿ ಅಧ್ಯಕ್ಷ , ನಿಲಂಬೂರ್ ಯುಡಿಎಫ್ ಅಭ್ಯರ್ಥಿ ವಿ.ವಿ. ಪ್ರಕಾಶ್ ಅವರ ಸಾವಿನ ಸುದ್ದಿ ಕೇಳಿ  ಆಘಾತಗೊಂಡಿದ್ದೇನೆ . ಶಾಲಾ ದಿನಗಳಿಂದಲೇ  ನಾವು ಜತೆಯಾಗಿದ್ದೆವು. ಶ್ರದ್ಧಾಂಜಲಿ  ಎಂದು  ಕೇರಳದ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಟ್ವೀಟ್ ಮಾಡಿದ್ದಾರೆ.

ಮಲಪ್ಪುಂ ಡಿಸಿಸಿ ಅಧ್ಯಕ್ಷ , ನಿಲಂಬೂರ್ ಯುಡಿಎಫ್ ಅಭ್ಯರ್ಥಿ ವಿ.ವಿ. ಪ್ರಕಾಶ್ ಅವರ ಸಾವು ದುರಂತ. ಅವರ ಪ್ರಾಮಾಣಿಕ ಮತ್ತು ಪರಿಶ್ರಮದ ಕಾರ್ಯಕರ್ತರಾಗಿದ್ದರು.  ಇತರರಿಗೆ ಸಹಾಯ ಮಾಡಲು ಅವರು ಸದಾ ಸಿದ್ದರಿರುತ್ತಿದ್ದರು. ನನ್ನ ಸಂತಾಪಗಳು ಎಂದು  ಕಾಂಗ್ರೆಸ್ ನಾಯಕ ರಾಹುಲ್  ಗಾಂಧಿ  ಟ್ವಿಟರ್​ ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kerala Assembly Elections 2021: ಬಿಜೆಪಿಯವರು ಸೃಷ್ಟಿಸುವ ಲವ್ ಜಿಹಾದ್ ಭೀತಿ, ಕೋಮುವಾದ ಕೇರಳದಲ್ಲಿ ನಡೆಯಲ್ಲ: ಶಶಿ ತರೂರ್

ಕೇರಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸದೇ ಇರುವುದಕ್ಕೆ ಕಾರಣ ಅಲ್ಲಿ ಶೇ.90 ಸಾಕ್ಷರತೆ ಇದೆ: ಒ.ರಾಜಗೋಪಾಲ್

Published On - 3:52 pm, Thu, 29 April 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ