AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ವಿ.ಪ್ರಕಾಶ್ ನಿಧನ

VV Prakash: ಮಲಪ್ಪುರಂ ಜಿಲ್ಲೆಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಪ್ರಕಾಶ್ ಅವರಿಗೆ ಎದೆ ನೋವು ನೋವು ಕಾಣಿಸಿಕೊಂಡ ಕಾರಣ ಮಂಜೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ 3 ಗಂಟೆಗೆ ಅವರು ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ.

ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ವಿ.ಪ್ರಕಾಶ್ ನಿಧನ
ವಿವಿ ಪ್ರಕಾಶ್
ರಶ್ಮಿ ಕಲ್ಲಕಟ್ಟ
|

Updated on:Apr 29, 2021 | 4:01 PM

Share

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ವಿ. ಪ್ರಕಾಶ್ ಗುರುವಾರ ಬೆಳಗ್ಗೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಮಲಪ್ಪುರಂ ಜಿಲ್ಲೆಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಪ್ರಕಾಶ್ ಅವರಿಗೆ ಎದೆ ನೋವು ನೋವು ಕಾಣಿಸಿಕೊಂಡ ಕಾರಣ ಮಂಜೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ 3 ಗಂಟೆಗೆ ಅವರು ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ. ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಸುಮಾರು ಒಂದು ಗಂಟೆಗಳ ಕಾಲ ಕಾಂಗ್ರೆಸ್ ಕಚೇರಿಯಲ್ಲಿರಿಸಿ, ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಅಂತಿಮ ನಮನ ಸಲ್ಲಿಸಿದ್ದಾರೆ. ಇದಾದ ನಂತರ ಕೊವಿಡ್ ನಿಯಮಾವಳಿಗಳನ್ನು ಪಾಲಿಸಿ ಎಡಕ್ಕರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ನಿಲಂಬೂರ್ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಪ್ರಕಾಶ್ ಅವರು ಇತ್ತೀಚೆಗೆ ಸ್ಥಳೀಯ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ಪ್ರಸ್ತುತ ಈ ಕ್ಷೇತ್ರದಲ್ಲಿಎಲ್​ಡಿಎಫ್ ಬೆಂಬಲಿತ ಪಕ್ಷೇತರ ಪಿ.ವಿ ಅನ್ವರ್ ಶಾಸಕರಾಗಿದ್ದಾರೆ. ಹಲವು ವರ್ಷಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ನಿಲಂಬೂರ್ ನಲ್ಲಿ 2016 ರಲ್ಲಿ ಎಲ್ ಡಿಎಫ್ ಗೆದ್ದಿತ್ತು. ಚುನಾವಣಾ ಫಲಿತಾಂಶ ಪ್ರಕಟವಾಗಲು ಇನ್ನೇನು ಮೂರು ದಿನಗಳು ಬಾಕಿ ಇರುವಾಗ ಪ್ರಕಾಶ್ ವಿಯೋಗ ಕಾಂಗ್ರೆಸ್ ಪಾಲಿಗೆ ಅತೀವ ದುಃಖವನ್ನುಂಟು ಮಾಡಿದೆ.

ಅನುಭವಿ ರಾಜಕಾರಣಿ ಆಗಿದ್ದ ಪ್ರಕಾಶ್ ತಿರುವನಂತಪುರಂನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯಾಗಿದ್ದರು. ಕೆಎಸ್ಯು​ ಮತ್ತು ಯೂತ್ ಕಾಂಗ್ರೆಸ್ ನಾಯಕನಾಗಿ ಕಾರ್ಯ ನಿರ್ವಹಿಸಿದ್ದ ಇವರು 2011ರಲ್ಲಿ ಚುನಾವಣೆ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಎಲ್​ಡಿಎಫ್ ಅಭ್ಯರ್ಥಿ ಕೆ.ಟಿ.ಜಲೀಲ್, ಪ್ರಕಾಶ್ ವಿರುದ್ಧ ಗೆಲುವು ಸಾಧಿಸಿದ್ದರು.

ಕಂಬನಿ ಮಿಡಿದ ನಾಯಕರು

ವಿ.ವಿ  ಪ್ರಕಾಶ್ ಅವರ ಆಕಸ್ಮಿಕ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಅವರಿಗಾಗಿ ನಾನು ಚುನಾವಣಾ ಪ್ರಚಾರ ಮಾಡಿದ್ದು, ಅವರ ಗೆಲುವಿಗಾಗಿ ಕಾಯುತ್ತಿದ್ದೆವು.  ಉತ್ತಮ  ಸಾಮಾಜಿಕ ಮತ್ತು  ರಾಜಕೀಯ ಕಾರ್ಯಕರ್ತರಾಗಿದ್ದರು ಅವರು . ಡಿಸಿಸಿ  ಅಧ್ಯಕ್ಷರೂ ಆಗಿದ್ದರು. ಓಂ ಶಾಂತಿ  ಎಂದು ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ .

ಮಲಪ್ಪುಂ ಡಿಸಿಸಿ ಅಧ್ಯಕ್ಷ , ನಿಲಂಬೂರ್ ಯುಡಿಎಫ್ ಅಭ್ಯರ್ಥಿ ವಿ.ವಿ. ಪ್ರಕಾಶ್ ಅವರ ಸಾವಿನ ಸುದ್ದಿ ಕೇಳಿ  ಆಘಾತಗೊಂಡಿದ್ದೇನೆ . ಶಾಲಾ ದಿನಗಳಿಂದಲೇ  ನಾವು ಜತೆಯಾಗಿದ್ದೆವು. ಶ್ರದ್ಧಾಂಜಲಿ  ಎಂದು  ಕೇರಳದ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಟ್ವೀಟ್ ಮಾಡಿದ್ದಾರೆ.

ಮಲಪ್ಪುಂ ಡಿಸಿಸಿ ಅಧ್ಯಕ್ಷ , ನಿಲಂಬೂರ್ ಯುಡಿಎಫ್ ಅಭ್ಯರ್ಥಿ ವಿ.ವಿ. ಪ್ರಕಾಶ್ ಅವರ ಸಾವು ದುರಂತ. ಅವರ ಪ್ರಾಮಾಣಿಕ ಮತ್ತು ಪರಿಶ್ರಮದ ಕಾರ್ಯಕರ್ತರಾಗಿದ್ದರು.  ಇತರರಿಗೆ ಸಹಾಯ ಮಾಡಲು ಅವರು ಸದಾ ಸಿದ್ದರಿರುತ್ತಿದ್ದರು. ನನ್ನ ಸಂತಾಪಗಳು ಎಂದು  ಕಾಂಗ್ರೆಸ್ ನಾಯಕ ರಾಹುಲ್  ಗಾಂಧಿ  ಟ್ವಿಟರ್​ ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kerala Assembly Elections 2021: ಬಿಜೆಪಿಯವರು ಸೃಷ್ಟಿಸುವ ಲವ್ ಜಿಹಾದ್ ಭೀತಿ, ಕೋಮುವಾದ ಕೇರಳದಲ್ಲಿ ನಡೆಯಲ್ಲ: ಶಶಿ ತರೂರ್

ಕೇರಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸದೇ ಇರುವುದಕ್ಕೆ ಕಾರಣ ಅಲ್ಲಿ ಶೇ.90 ಸಾಕ್ಷರತೆ ಇದೆ: ಒ.ರಾಜಗೋಪಾಲ್

Published On - 3:52 pm, Thu, 29 April 21

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!