AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಕಾಂಗ್ರೆಸ್ ಚುನಾವಣೆ ಚಿಹ್ನೆ ವಿವಾದ: ಎರಡೆಲೆ ಚಿಹ್ನೆಯಲ್ಲಿ ಸ್ಪರ್ಧಿಸಲು ಕೇರಳ ಕಾಂಗ್ರೆಸ್ ಎಂ ಪಕ್ಷಕ್ಕೆ ಸುಪ್ರೀಂ ಕೋರ್ಟ್ ಅನುಮತಿ

Jose K Mani: ಕಾಂಗ್ರೆಸ್ (ಎಂ) ಪಕ್ಷದ ಸಂಸ್ಥಾಪಕ ಕೆ.ಎಂ.ಮಾಣಿ ಅವರ ನಿಧನದ ನಂತರ ಕಾಂಗ್ರೆಸ್ ನಾಯಕ ಜೋಸೆಫ್ ಮತ್ತು ಜೋಸ್.ಕೆ.ಮಾಣಿ ಗುಂಪುಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಜೋಸ್.ಕೆ. ಮಾಣಿ ಪಕ್ಷಕ್ಕೆ ಎರಡೆಲೆ ಚಿಹ್ನೆ ನೀಡಿದ್ದನ್ನು ಪ್ರಶ್ನಿಸಿ ಜೋಸೆಫ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಕೇರಳ ಕಾಂಗ್ರೆಸ್ ಚುನಾವಣೆ ಚಿಹ್ನೆ ವಿವಾದ: ಎರಡೆಲೆ ಚಿಹ್ನೆಯಲ್ಲಿ ಸ್ಪರ್ಧಿಸಲು ಕೇರಳ ಕಾಂಗ್ರೆಸ್ ಎಂ ಪಕ್ಷಕ್ಕೆ ಸುಪ್ರೀಂ ಕೋರ್ಟ್ ಅನುಮತಿ
ಜೋಸ್.ಕೆ.ಮಾಣಿ
ರಶ್ಮಿ ಕಲ್ಲಕಟ್ಟ
|

Updated on:Mar 15, 2021 | 3:27 PM

Share

ನವದೆಹಲಿ: ಜೋಸ್.ಕೆ. ಮಾಣಿ ನೇತೃತ್ವದ ಕಾಂಗ್ರೆಸ್ (ಎಂ) ಪಕ್ಷ ಎರಡೆಲೆ ಚಿಹ್ನೆಯಲ್ಲಿ ಸ್ಪರ್ಧಿಸಬಹುದು ಸುಪ್ರೀಂಕೋರ್ಟ್  ಹೇಳಿದೆ. ಕಾಂಗ್ರೆಸ್ (ಎಂ) ಪಕ್ಷಕ್ಕೆ ಚುನಾವಣಾ ಆಯೋಗ ಎರಡೆಲೆ ಚಿಹ್ನೆಯನ್ನು ನೀಡಿತ್ತು. ಇದನ್ನು ಪ್ರಶ್ನಿಸಿ  ಕೇರಳ ಕಾಂಗ್ರೆಸ್ ನಾಯಕ ಪಿ.ಜೆ.ಜೋಸೆಫ್ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿದೆ. ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ, ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಣಿಯನ್ ಅವರ ನ್ಯಾಯಪೀಠ ಪಿಜೆ ಜೋಸೆಫ್ ಅವರ ಮೇಲ್ಮನವಿ ಅರ್ಜಿಯನ್ನು ನಿರಾಕರಿಸಿದೆ .

ಸೋಮವಾರ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಪಿಜೆ ಜೋಸೆಫ್ ಪರ ವಾದಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, 450 ಸದಸ್ಯರಿರುವ ರಾಜ್ಯ ಸಮಿತಿಯಲ್ಲಿ 255 ಸದಸ್ಯರ ಬೆಂಬಲ ನಮಗಿದೆ. ಇವರ ಬೆಂಬಲವನ್ನು ತೋರಿಸುವ ದಾಖಲೆಗಳನ್ನು ಪರಿಶೀಲಿಸದೆ ಚುನಾವಣಾ ಆಯೋಗ ಜೋಸ್.ಕೆ. ಮಾಣಿ ಅವರ ಪರವಾಗಿ ತೀರ್ಪು ನೀಡಿತ್ತು ಎಂದಿದ್ದಾರೆ. ಈ ವಿಷಯಗಳನ್ನು ಹೈಕೋರ್ಟ್ ಕೂಡಾ ಪರಿಗಣಿಸಿಲ್ಲ ಎಂದಿದ್ದಾರೆ ದಿವಾನ್. ಆದರೆ ಚುನಾವಣಾ ಚಿಹ್ನೆ ನೀಡುವ ಅಧಿಕಾರ ಚುನಾವಣಾ ಆಯೋಗದ್ದು. ಹೈಕೋರ್ಟ್ ತೀರ್ಪು ಬಗ್ಗೆ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿ ಸುಪ್ರೀಂಕೋರ್ಟ್ ಮೇಲ್ಮನವಿಯನ್ನು ತಳ್ಳಿದೆ.

ಪಿಜೆ ಜೋಸೆಫ್ ಪರವಾಗಿ ಶ್ಯಾಮ್​ ದಿವಾನ್, ರೋಮಿ ಚಾಕೊ ಹಾಜರಾಗಿದ್ದರು. ಜೋಸ್.ಕೆ.ಮಾಣಿ ಪರವಾಗಿ ಹಿರಿಯ ವಕೀಲ ಕೃಷ್ಣನ್ ವೇಣುಗೋಪಾಲ್ ಹಾಜರಾಗಿದ್ದರು. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಚುನಾವಣಾ ಆಯೋಗವು ಜೋಸ್.ಕೆ. ಮಾಣಿ ಪಕ್ಷಕ್ಕೆ ಎರಡೆಲೆ ಚಿಹ್ನೆ ನೀಡಿತ್ತು.

ಕಾಂಗ್ರೆಸ್ (ಎಂ) ಪಕ್ಷದ ಸಂಸ್ಥಾಪಕ ಕೆ.ಎಂ.ಮಾಣಿ ಅವರ ನಿಧನದ ನಂತರ ಕಾಂಗ್ರೆಸ್ ನಾಯಕ ಜೋಸೆಫ್ ಮತ್ತು ಜೋಸ್.ಕೆ.ಮಾಣಿ ಗುಂಪುಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಜೋಸ್.ಕೆ. ಮಾಣಿ ಪಕ್ಷಕ್ಕೆ ಎರಡೆಲೆ ಚಿಹ್ನೆ ನೀಡಿದ್ದನ್ನು ಪ್ರಶ್ನಿಸಿ ಜೋಸೆಫ್ ಹೈಕೋರ್ಟ್ ಮೆಟ್ಟಿಲೇರಿದ್ದರು. ನವೆಂಬರ್​ನಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ನಗರೇಶ್ ಅವರ ಏಕಸದಸ್ಯ ಪೀಠವು ಜೋಸೆಫ್ ಅವರ ಅರ್ಜಿಯನ್ನು ತಳ್ಳಿಹಾಕಿತ್ತು. ಪಕ್ಷದ ಚಿಹ್ನೆಯ ವಿವಾದದಲ್ಲಿ ತೀರ್ಪು ನೀಡುವ ಹಕ್ಕು ಚುನಾವಣೆ ಆಯೋಗಕ್ಕಿಲ್ಲ ಎಂದು ಜೋಫೆಸ್ ನ್ಯಾಯಾಲಯದಲ್ಲಿ ವಾದಿಸಿದ್ದರು.

ಎಲ್ ಡಿಎಫ್ ಜತೆ ಕೈ ಜೋಡಿಸಿದ ಕೇರಳ ಕಾಂಗ್ರೆಸ್ (ಎಂ) ಯುಡಿಎಫ್​ನಿಂದ ಎಲ್​ಡಿಎಫ್​ಗೆ ಬಂದಿರುವ ಜೋಸ್.ಕೆ. ಮಾಣಿ ನೇತೃತ್ವದ ಕೇರಳ ಕಾಂಗ್ರೆಸ್ (ಎಂ) ಪಕ್ಷ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಯುಡಿಎಫ್ ಮತಗಳನ್ನು ಇಳಿಸಿ ಎಲ್​ಡಿಎಫ್ ವಿಜಯ ಪತಾಕೆ ಹಾರಿಸಲು ಪ್ರಧಾನ ಪಾತ್ರ ವಹಿಸಿತ್ತು. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸಿಪಿಐ ಸೇರಿದಂತೆ ಮೈತ್ರಿ ಪಕ್ಷಗಳ ಅಸಮಾಧಾನವನ್ನು ಕಡೆಗಣಿಸಿ ಸಿಪಿಎಂ, ಕೇರಳ ಕಾಂಗ್ರೆಸ್ (ಎಂ) ಪಕ್ಷಕ್ಕೆ 13 ಸೀಟುಗಳನ್ನು ನೀಡಿದೆ.

ಕುಟ್ಯಾಡಿ ಸೀಟು ಸಿಪಿಎಂಗೆ ಬಿಟ್ಟುಕೊಟ್ಟ ಕಾಂಗ್ರೆಸ್ (ಎಂ) ಕೋಯಿಕ್ಕೋಡ್ ಜಿಲ್ಲೆ ಕುಟ್ಯಾಡಿ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಎಂ ಅಭ್ಯರ್ಥಿ ಸ್ಪರ್ಧಿಸಲಿ ಎಂದು ಕೇರಳ ಕಾಂಗ್ರೆಸ್ (ಎಂ) ಅಧ್ಯಕ್ಷ ಜೋಸ್.ಕೆ.ಮಾಣಿ ಹೇಳಿದ್ದಾರೆ. ಕುಟ್ಯಾಡಿ ಸಿಪಿಎಂ ಪ್ರಾತಿನಿಧ್ಯವಿರುವ ಕ್ಷೇತ್ರವಾಗಿದೆ. ಹಾಗಾಗಿ ಆ ಸೀಟಿನಲ್ಲಿ ಕೇರಳ ಕಾಂಗ್ರೆಸ್ (ಎಂ) ಸ್ಪರ್ಧಿಸುವುದಿಲ್ಲ. ಎಲ್​ಡಿಎಫ್ ಜತೆ ಮಾತುಕತೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದಿದ್ದಾರೆ ಜೋಸ್.ಕೆ.ಮಾಣಿ.

ಪಾಲಾ ವಿಧಾನಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಪಾಲಾ ಕ್ಷೇತ್ರದಿಂದ ಎಲ್​ಡಿಎಫ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜೋಸ್.ಕೆ. ಮಾಣಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ:  Kerala Assembly Elections 2021: ಕೇರಳ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ 

ಕೇರಳ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನಿರಾಕರಣೆ; ತಲೆಕೂದಲು ಬೋಳಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಲಲಿತಾ ಸುಭಾಶ್

Published On - 3:24 pm, Mon, 15 March 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ