AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಅತ್ಯಾಚಾರ ಮಾಡಲು ಬಯಸಿದ್ದ, ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ತೃತೀಯಲಿಂಗಿ ದೂರು

ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ(Sexual Harassment) ಆರೋಪಹೊರಿಸಿದ್ದಾರೆ. ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ ನನ್ನನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸಿದ್ದ, ಬೆಂಗಳೂರು ಅಥವಾ ಹೈದರಾಬಾದ್​ಗೆ ಹೋಗೋಣ ಬಾ ಎಂದು ಕರೆದಿದ್ದ ಎಂದು ತೃತೀಯಲಿಂಗಿ ಎಂದು ಹೇಳಿದ್ದಾರೆ.

ನನ್ನ ಅತ್ಯಾಚಾರ ಮಾಡಲು ಬಯಸಿದ್ದ, ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ತೃತೀಯಲಿಂಗಿ ದೂರು
ಶಾಸಕ
ನಯನಾ ರಾಜೀವ್
|

Updated on: Aug 22, 2025 | 9:55 AM

Share

ಪಾಲಕ್ಕಾಡ್, ಆಗಸ್ಟ್​ 22: ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ(Sexual Harassment) ಆರೋಪಹೊರಿಸಿದ್ದಾರೆ. ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದ ಎಂದು ಆರೋಪಿಸಿದ್ದಾರೆ. ನನ್ನನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸಿದ್ದ, ಬೆಂಗಳೂರು ಅಥವಾ ಹೈದರಾಬಾದ್​ಗೆ ಹೋಗೋಣ ಬಾ ಎಂದು ಕರೆದಿದ್ದ ಎಂದು ತೃತೀಯಲಿಂಗಿ ಎಂದು ಹೇಳಿದ್ದಾರೆ.

ಚುನಾವಣಾ ಚರ್ಚೆಯ ಸಮಯದಲ್ಲಿ ಅವರು ಮೊದಲು ಭೇಟಿಯಾಗಿದ್ದರು. ಸಾಮಾನ್ಯ ಸ್ನೇಹವಾಗಿ ಪ್ರಾರಂಭವಾದದ್ದು ಸಾಮಾಜಿಕ ಮಾಧ್ಯಮದಲ್ಲಿನ ಸಂದೇಶಗಳ ಮೂಲಕ ಅಸಹ್ಯಕರ ಅನುಭವವಾಗಿ ಬದಲಾಯಿತು ಎಂದು ಅವಂತಿಕಾ ಹೇಳಿದ್ದಾರೆ.

ಮಲಯಾಳಂ ನಟಿ ರಿನಿ  ಜಾರ್ಜ್ ಮತ್ತು ನಂತರ ಬರಹಗಾರ ಹನಿ ಭಾಸ್ಕರನ್ ಅವರು ನೀಡಿದ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ರಾಹುಲ್ ಗುರುವಾರ ಕೇರಳ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ . ಪ್ರಮುಖ ರಾಜಕೀಯ ಪಕ್ಷದ ನಾಯಕಿಯೊಬ್ಬರು ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿ ಹೋಟೆಲ್‌ಗೆ ಆಹ್ವಾನಿಸಿದ್ದಾರೆ ಎಂದು ರಿನಿ ಆರೋಪಿಸಿದ್ದರು . ಅವರು ಯಾರನ್ನೂ ಹೆಸರಿಸದಿದ್ದರೂ, ಬಿಜೆಪಿ ಮತ್ತು ಡಿವೈಎಫ್‌ಐ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಮ್‌ಕೂಟತಿಲ್ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ್ದವು.

ಮತ್ತಷ್ಟು ಓದಿ: ಒಡಿಶಾ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ತಪ್ಪಿಸಿಕೊಂಡು ಬಂದು ಟ್ರಕ್​ ಚಾಲಕನ ಕೈಗೆ ಸಿಕ್ಕಿ ನರಳಿದ ಬಾಲಕಿ

ಹನಿ ಭಾಸ್ಕರನ್, ರಾಹುಲ್ ಅವರನ್ನು ಹೆಸರಿಸಿ , ಪದೇ ಪದೇ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ಆರೋಪಿಸಿದ್ದಾರೆ, ಯುವ ಕಾಂಗ್ರೆಸ್‌ನೊಳಗಿನ ದೂರುಗಳು ಬಗೆಹರಿಯದೆ ಉಳಿದಿವೆ ಎಂದು ಹೇಳಿದರು.

ತಮ್ಮ ರಾಜೀನಾಮೆಯಲ್ಲಿ, ರಾಹುಲ್ ಅವರು ತಾವು ರಾಜೀನಾಮೆ ನೀಡುತ್ತಿರುವುದು ತಪ್ಪು ಕಾರಣದಿಂದಲ್ಲ, ಬದಲಾಗಿ ಪಕ್ಷದ ಕಾರ್ಯಕರ್ತರು ಮುಂಬರುವ ಚುನಾವಣೆಗಳತ್ತ ಗಮನಹರಿಸಲು ಅವಕಾಶ ನೀಡುವ ಉದ್ದೇಶದಿಂದ ಎಂದು ಹೇಳಿದ್ದಾರೆ. ಪಕ್ಷದ ಯಾವುದೇ ನಾಯಕರು ರಾಜೀನಾಮೆ ನೀಡುವಂತೆ ತಮ್ಮನ್ನು ಕೇಳಿಲ್ಲ ಎಂದು ಅವರು ಒತ್ತಿ ಹೇಳಿದರು ಮತ್ತು ಅದು ತಮ್ಮ ವೈಯಕ್ತಿಕ ಜವಾಬ್ದಾರಿ ಎಂದು ಹೇಳಿದರು.

ರಾಜೀನಾಮೆ ಬಗ್ಗೆ ಕೇರಳ ಸಚಿವೆ ಆರ್ ಬಿಂದು ಪ್ರತಿಕ್ರಿಯೆ ನೀಡಿದ್ದು, ಯುವ ಶಾಸಕ ರಾಹುಲ್ ವಿರುದ್ಧ ಅನೇಕ ಮಹಿಳೆಯರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ಯುವ ಕಾಂಗ್ರೆಸ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಸಮಾಜವನ್ನು ರಕ್ಷಿಸಲು ಅವರು ಶಾಸಕ ಸ್ಥಾನದಿಂದ ಕೆಳಗಿಳಿಯುವುದು ಸೂಕ್ತ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ