AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹೆಚ್ಚಿನ ದೇಣಿಗೆ ನೀಡದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ತರಕಾರಿ ಅಂಗಡಿ ಧ್ವಂಸ

ಕೇರಳದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ಹೆಚ್ಚಿನ ದೇಣಿಗೆ ನೀಡದಿದ್ದಕ್ಕಾಗಿ, ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ಅಂಗಡಿಯನ್ನು ಧ್ವಂಸ ಮಾಡಿರುವ ಘಟನೆ ವರದಿಯಾಗಿದೆ.

Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹೆಚ್ಚಿನ ದೇಣಿಗೆ ನೀಡದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ತರಕಾರಿ ಅಂಗಡಿ ಧ್ವಂಸ
Bharat Jodo
TV9 Web
| Updated By: ನಯನಾ ರಾಜೀವ್|

Updated on:Sep 16, 2022 | 12:18 PM

Share

ಕೇರಳದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ಹೆಚ್ಚಿನ ದೇಣಿಗೆ ನೀಡದಿದ್ದಕ್ಕಾಗಿ, ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ಅಂಗಡಿಯನ್ನು ಧ್ವಂಸ ಮಾಡಿರುವ ಘಟನೆ ವರದಿಯಾಗಿದೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ದಕ್ಷಿಣದ ರಾಜ್ಯಗಳ ಮೂಲಕ ಈ ಯಾತ್ರೆ ಉತ್ತರ ರಾಜ್ಯಗಳನ್ನು ತಲುಪಲಿದೆ.

ಅಂದಹಾಗೆ, ಈ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರ ದಂಡೇ ಕಂಡು ಬರುತ್ತಿದೆ. ಆದರೆ ಇದೇ ವೇಳೆ ಕಾಂಗ್ರೆಸ್ ವಿರುದ್ಧವೂ ಆರೋಪಗಳು ಕೇಳಿ ಬರುತ್ತಿವೆ. ಕೇರಳದಲ್ಲಿಯೇ ಈ ವಿಷಯ ಮುನ್ನೆಲೆಗೆ ಬಂದಿದೆ. ಕೇರಳದ ಕೊಲ್ಲಂನ ತರಕಾರಿ ಮಾರಾಟಗಾರರೊಬ್ಬರು ಭಾರತ ಜೋಡೋ ಯಾತ್ರೆಗೆ ಕಾಂಗ್ರೆಸ್ ಕಾರ್ಯಕರ್ತರು ಬಲವಂತವಾಗಿ 2000 ರೂ. ಕೇಳಿದ್ದರು, ಕೊಡದಿದ್ದಕ್ಕೆ ಅಂಗಡಿ ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಕ್ರಮ ಕೈಗೊಂಡಿರುವ ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ ಸುಧಾಕರನ್ ಅವರು ಪಕ್ಷದ ಮೂವರು ಕಾರ್ಯಕರ್ತರನ್ನು ಅಮಾನತುಗೊಳಿಸಿದ್ದಾರೆ. ಎಸ್ ಫವಾಜ್ ಎಂಬ ವ್ಯಕ್ತಿ ಕೇರಳದ ಕೊಲ್ಲಂನಲ್ಲಿ ತರಕಾರಿ ಅಂಗಡಿ ಹೊಂದಿದ್ದಾರೆ. ಎಂದಿನಂತೆ ತನ್ನ ಅಂಗಡಿಯಲ್ಲಿದ್ದೆ . ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಆಗಮಿಸಿ ಭಾರತ ಜೋಡೋ ಯಾತ್ರೆಯಲ್ಲಿ ಆರ್ಥಿಕ ಸಹಕಾರದ ಹೆಸರಿನಲ್ಲಿ ಬಲವಂತವಾಗಿ ಹಣಕ್ಕಾಗಿ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

2000 ರೂ. ನೀಡಲು ನಿರಾಕರಿಸಿದಾಗ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎಂದು ತರಕಾರಿ ಮಾರಾಟಗಾರ ಆರೋಪಿಸಿದ್ದಾರೆ. ಅಂಗಡಿಯಲ್ಲಿ ಇಟ್ಟಿದ್ದ ಎಲ್ಲ ತರಕಾರಿಗಳನ್ನೂ ಬಿಸಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ಕೇರಳ ಘಟಕದ ಮುಖ್ಯಸ್ಥ ಕೆ ಸುಧಾಕರನ್ ಅವರು ಪ್ರಕರಣದಲ್ಲಿ ಮೂವರು ಕಾರ್ಯಕರ್ತರನ್ನು ಅಮಾನತುಗೊಳಿಸಿದ್ದಾರೆ.

ಪಕ್ಷವು ಸ್ವಯಂಪ್ರೇರಿತವಾಗಿ ಸಣ್ಣ ದೇಣಿಗೆ ತೆಗೆದುಕೊಳ್ಳುತ್ತದೆ ಮತ್ತು ಇತರರಂತೆ ಕಾರ್ಪೊರೇಟ್ ವಲಯದಿಂದ ದೊಡ್ಡ ದೇಣಿಗೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು. ಭಾರತ್ ಜೋಡೋ ಯಾತ್ರೆ ಕೇರಳದ ಕೊಲ್ಲಂ ಜಿಲ್ಲೆಯ ಪೊಲಯಾತೋಡು ಎಂಬಲ್ಲಿ ಒಂದು ದಿನದ ವಿಶ್ರಾಂತಿಯ ನಂತರ ಶುಕ್ರವಾರ ಪುನರಾರಂಭವಾಗಿದೆ.

ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೇಶನ್, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಹಿರಿಯ ಕಾಂಗ್ರೆಸ್ ನಾಯಕರಾದ ರಮೇಶ್ ಚೆನ್ನಿತ್ತಲ ಮತ್ತು ಕೆ ಮುರಳೀಧರ್, ಕ್ರಾಂತಿಕಾರಿ ಸಮಾಜವಾದಿ ಪಕ್ಷದ (ಆರ್‌ಎಸ್‌ಪಿ) ನಾಯಕ ಎನ್‌ಕೆ ಪ್ರೇಮಚಂದ್ರನ್ ಅವರು ಪಾದಯಾತ್ರೆಯಲ್ಲಿ ಗಾಂಧಿಯವರ ಜೊತೆಗಿದ್ದರು. ಜಿಲ್ಲೆಯ ಸ್ಲೀಪಕರದಲ್ಲಿ ರಾಹುಲ್ ಗಾಂಧಿ ಕೆಲಕಾಲ ವಾಸ್ತವ್ಯ ಹೂಡಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Fri, 16 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್