AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಹೊಸ ಸೋಂಕು: ಕೇರಳದಲ್ಲಿ ಪತ್ತೆಯಾಯ್ತು ‘ಆಫ್ರಿಕಾ’ ಮಲೇರಿಯಾ

ಸಾಧಾರಣವಾಗಿ ಆಫ್ರಿಕಾ ಪ್ರಾಂತ್ಯದಲ್ಲಿ ಕಂಡು ಬರುವ ಪ್ಲಾಸ್ಮೋಡಿಯಂ ಓವಲ್ ಕೇರಳದಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಜನರಲ್ಲಿ ಭಯ ಮೂಡಿಸಿದೆ.

ಮತ್ತೊಂದು ಹೊಸ ಸೋಂಕು: ಕೇರಳದಲ್ಲಿ ಪತ್ತೆಯಾಯ್ತು ‘ಆಫ್ರಿಕಾ’ ಮಲೇರಿಯಾ
ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ
Skanda
| Edited By: |

Updated on: Dec 11, 2020 | 7:28 PM

Share

ಕೊಚ್ಚಿ: ಕೊವಿಡ್​ ಹೊಡೆತದಿಂದ ತತ್ತರಿಸಿ ಕೊಂಚ ಚೇತರಿಸಿಕೊಳ್ಳುತ್ತಿರುವ ಕೇರಳದಲ್ಲಿ ಮತ್ತೊಂದು ಹೊಸ ಸೋಂಕು ಪತ್ತೆಯಾಗಿದೆ. ಮಲೇರಿಯಾಕ್ಕೆ ಕಾರಣವಾಗಿರುವ ಪರಾವಲಂಬಿ ಪ್ಲಾಸ್ಮೋಡಿಯಂನ ರೂಪಾಂತರ ‘ಪ್ಲಾಸ್ಮೋಡಿಯಂ ಓವಲ್​’ (Plasmodium ovale) ಕಂಡುಬಂದಿದೆ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ.ಸೈಲಜಾ ಟ್ವೀಟ್ ಮಾಡಿದ್ದಾರೆ.

ಅತ್ಯಂತ ಅಪರೂಪದ ಸೋಂಕು ಇದಾಗಿದ್ದು ಸುಡಾನ್​ನಿಂದ ಆಗಮಿಸಿದ ಒಬ್ಬ ಸೈನಿಕನಲ್ಲಿ ಕಂಡುಬಂದಿದೆ. ಸದ್ಯ ಆತನನ್ನು ಕಣ್ಣೂರಿನ ಜಿಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಧಾರಣವಾಗಿ ಆಫ್ರಿಕಾ ಪ್ರಾಂತ್ಯದಲ್ಲಿ ಕಂಡು ಬರುವ ಪ್ಲಾಸ್ಮೋಡಿಯಂ ಓವಲ್ ಕೇರಳದಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಜನರಲ್ಲಿ ಭಯ ಮೂಡಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಆರೋಗ್ಯ ಸಚಿವರು ರೋಗಕ್ಕೆ ಭಯಪಡುವ ಅಗತ್ಯವಿಲ್ಲ. ಸೂಕ್ತ ವೈದ್ಯಕೀಯ ಚಿಕಿತ್ಸೆಯ ಮೂಲಕ ಗುಣಪಡಿಸಬಹುದು. ಎಲ್ಲದಕ್ಕೂ ಮುನ್ನ ಇದು ಹರಡದಂತೆ ಎಚ್ಚರಿಕೆ ವಹಿಸುವತ್ತ ಗಮನ ಹರಿಸುವುದು ಒಳ್ಳೆಯದು ಎಂದು ಹೇಳಿದ್ದಾರೆ.

ಈ ಹಿಂದೆ ಕೊರೊನಾ ಹಾಗೂ ನಿಫಾ ವೈರಸ್​ನ ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಮಲೇರಿಯಾ ವಿರುದ್ಧ ಭಾರತದ ಪ್ರಬಲ ಹೋರಾಟ; ಸಾವಿನ ಸಂಖ್ಯೆ ಇಳಿಮುಖ

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ