AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಹೊಸ ಸೋಂಕು: ಕೇರಳದಲ್ಲಿ ಪತ್ತೆಯಾಯ್ತು ‘ಆಫ್ರಿಕಾ’ ಮಲೇರಿಯಾ

ಸಾಧಾರಣವಾಗಿ ಆಫ್ರಿಕಾ ಪ್ರಾಂತ್ಯದಲ್ಲಿ ಕಂಡು ಬರುವ ಪ್ಲಾಸ್ಮೋಡಿಯಂ ಓವಲ್ ಕೇರಳದಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಜನರಲ್ಲಿ ಭಯ ಮೂಡಿಸಿದೆ.

ಮತ್ತೊಂದು ಹೊಸ ಸೋಂಕು: ಕೇರಳದಲ್ಲಿ ಪತ್ತೆಯಾಯ್ತು ‘ಆಫ್ರಿಕಾ’ ಮಲೇರಿಯಾ
ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ
Skanda
| Edited By: |

Updated on: Dec 11, 2020 | 7:28 PM

Share

ಕೊಚ್ಚಿ: ಕೊವಿಡ್​ ಹೊಡೆತದಿಂದ ತತ್ತರಿಸಿ ಕೊಂಚ ಚೇತರಿಸಿಕೊಳ್ಳುತ್ತಿರುವ ಕೇರಳದಲ್ಲಿ ಮತ್ತೊಂದು ಹೊಸ ಸೋಂಕು ಪತ್ತೆಯಾಗಿದೆ. ಮಲೇರಿಯಾಕ್ಕೆ ಕಾರಣವಾಗಿರುವ ಪರಾವಲಂಬಿ ಪ್ಲಾಸ್ಮೋಡಿಯಂನ ರೂಪಾಂತರ ‘ಪ್ಲಾಸ್ಮೋಡಿಯಂ ಓವಲ್​’ (Plasmodium ovale) ಕಂಡುಬಂದಿದೆ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ.ಸೈಲಜಾ ಟ್ವೀಟ್ ಮಾಡಿದ್ದಾರೆ.

ಅತ್ಯಂತ ಅಪರೂಪದ ಸೋಂಕು ಇದಾಗಿದ್ದು ಸುಡಾನ್​ನಿಂದ ಆಗಮಿಸಿದ ಒಬ್ಬ ಸೈನಿಕನಲ್ಲಿ ಕಂಡುಬಂದಿದೆ. ಸದ್ಯ ಆತನನ್ನು ಕಣ್ಣೂರಿನ ಜಿಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಧಾರಣವಾಗಿ ಆಫ್ರಿಕಾ ಪ್ರಾಂತ್ಯದಲ್ಲಿ ಕಂಡು ಬರುವ ಪ್ಲಾಸ್ಮೋಡಿಯಂ ಓವಲ್ ಕೇರಳದಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಜನರಲ್ಲಿ ಭಯ ಮೂಡಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಆರೋಗ್ಯ ಸಚಿವರು ರೋಗಕ್ಕೆ ಭಯಪಡುವ ಅಗತ್ಯವಿಲ್ಲ. ಸೂಕ್ತ ವೈದ್ಯಕೀಯ ಚಿಕಿತ್ಸೆಯ ಮೂಲಕ ಗುಣಪಡಿಸಬಹುದು. ಎಲ್ಲದಕ್ಕೂ ಮುನ್ನ ಇದು ಹರಡದಂತೆ ಎಚ್ಚರಿಕೆ ವಹಿಸುವತ್ತ ಗಮನ ಹರಿಸುವುದು ಒಳ್ಳೆಯದು ಎಂದು ಹೇಳಿದ್ದಾರೆ.

ಈ ಹಿಂದೆ ಕೊರೊನಾ ಹಾಗೂ ನಿಫಾ ವೈರಸ್​ನ ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಮಲೇರಿಯಾ ವಿರುದ್ಧ ಭಾರತದ ಪ್ರಬಲ ಹೋರಾಟ; ಸಾವಿನ ಸಂಖ್ಯೆ ಇಳಿಮುಖ

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ