Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆಯಾಗಿ ಬಿಎಂಡಬ್ಲ್ಯೂ ಕಾರು ಕೊಡಲಿಲ್ಲ ಎನ್ನುವ ಕಾರಣಕ್ಕೆ ನಿಂತ ಮದುವೆ, ವೈದ್ಯೆ ಆತ್ಮಹತ್ಯೆ

ಮದುವೆ ನಿಂತಿದ್ದಕ್ಕೆ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಆಕೆಯ ಬಾಯ್ ಫ್ರೆಂಡ್ ಜೊತೆ ಮದುವೆ ನಿಶ್ಚಯವಾಗಿತ್ತು. ಆದರೆ ವರದಕ್ಷಿಣೆ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು, ಕೇಳಿದ್ದನ್ನೆಲ್ಲಾ ಕೊಡದ ಕಾರಣ ಮದುವೆಯಾಗದಿರಲು ಗೆಳೆಯ ನಿರ್ಧರಿಸಿದ್ದ.

ವರದಕ್ಷಿಣೆಯಾಗಿ ಬಿಎಂಡಬ್ಲ್ಯೂ ಕಾರು ಕೊಡಲಿಲ್ಲ ಎನ್ನುವ ಕಾರಣಕ್ಕೆ ನಿಂತ ಮದುವೆ, ವೈದ್ಯೆ ಆತ್ಮಹತ್ಯೆ
ಕೇರಳ ವೈದ್ಯೆImage Credit source: NDTV
Follow us
ನಯನಾ ರಾಜೀವ್
|

Updated on: Dec 07, 2023 | 12:25 PM

ಮದುವೆ ನಿಂತಿದ್ದಕ್ಕೆ 26 ವರ್ಷದ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಅವರ ಬಾಯ್ ಫ್ರೆಂಡ್ ಜೊತೆ ಮದುವೆ ನಿಶ್ಚಯವಾಗಿತ್ತು. ಆದರೆ ವರದಕ್ಷಿಣೆ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು, ಕೇಳಿದ್ದನ್ನೆಲ್ಲಾ ಕೊಡದ ಕಾರಣ ಮದುವೆಯಾಗದಿರಲು ಗೆಳೆಯ ನಿರ್ಧರಿಸಿದ್ದ.

ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವರನ ಮನೆಯವರು ವರದಕ್ಷಿಣೆಯಾಗಿ 150 ಚಿನ್ನದ ನಾಣ್ಯಗಳು, 15 ಎಕರೆ ಭೂಮಿ ಮತ್ತು ಬಿಎಂಡಬ್ಲ್ಯು ಕಾರಿಗೆ ಬೇಡಿಕೆ ಇಟ್ಟಿದ್ದರು ಎಂದು ಸಹನಾ ಕುಟುಂಬ ಆರೋಪಿಸಿದೆ. ಅಷ್ಟು ಕೊಡಲು ಸಾಧ್ಯವಿಲ್ಲ ಎಂದಾಗ ಸಿಟ್ಟಿನಿಂದ ಮದುವೆ ರದ್ದು ಮಾಡಿದ್ದಾರೆ. ಇದರಿಂದ ಸಹನಾ ದಿಢೀರ್ ಖಿನ್ನತೆಗೆ ಒಳಗಾಗಿದ್ದರು. ಘಟನೆ ಕುರಿತು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯಿಸಿದ್ದಾರೆ. ತನಿಖೆಗೆ ಆದೇಶಿಸಲಾಗಿದೆ, ಮೃತ ಡಾ.ಸಹನಾ ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಪಿಜಿ ಮಾಡುತ್ತಿದ್ದರು.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆಕೆಯ ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆ ಕಾಯ್ದೆಯಡಿ ವರದಕ್ಷಿಣೆ ಬೇಡಿಕೆ, ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ಪ್ರಕರಣ ದಾಖಲಿಸಲಾಗಿದೆ.

ಡಾ.ಸಹನಾ ತನ್ನ ತಾಯಿಯೊಂದಿಗೆ ತಿರುವನಂತಪುರಂನಲ್ಲಿ ನೆಲೆಸಿದ್ದಾರೆ. ಗಲ್ಫ್‌ನಲ್ಲಿ ಕೆಲಸ ಮಾಡುತ್ತಿದ್ದ ಆಕೆಯ ತಂದೆ ಎರಡು ವರ್ಷಗಳ ಹಿಂದೆ ನಿಧನರಾದರು. ಕೆಲವು ದಿನಗಳ ನಂತರ, ಅವರು ಡಾ. ರುವೈಸ್ ಅವರ ಸಂಪರ್ಕಕ್ಕೆ ಬಂದರು. ಇಬ್ಬರೂ ಮದುವೆಯಾಗಲು ನಿರ್ಧರಿಸಿದರು. ವರದಕ್ಷಿಣೆ ವಿಚಾರದಲ್ಲಿ ಗಲಾಟೆ ಶುರುವಾಗಿತ್ತು.

ಮತ್ತಷ್ಟು ಓದಿ: ಬೆಂಗಳೂರು: ಬಾರ್​ನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!

ಡಿಸೆಂಬರ್ 14ರೊಳಗೆ ಸಂಪೂರ್ಣ ವರದಿಯೊಂದಿಗೆ ಆಯೋಗದ ಮುಂದೆ ಹಾಜರಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ವೀಣಾ ಚಾರ್ಜ್​ ಹೇಳಿದ್ದಾರೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಂತ್ರಸ್ತೆಯ ಮನೆಗೆ ತೆರಳಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ