AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆಯಾಗಿ ಬಿಎಂಡಬ್ಲ್ಯೂ ಕಾರು ಕೊಡಲಿಲ್ಲ ಎನ್ನುವ ಕಾರಣಕ್ಕೆ ನಿಂತ ಮದುವೆ, ವೈದ್ಯೆ ಆತ್ಮಹತ್ಯೆ

ಮದುವೆ ನಿಂತಿದ್ದಕ್ಕೆ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಆಕೆಯ ಬಾಯ್ ಫ್ರೆಂಡ್ ಜೊತೆ ಮದುವೆ ನಿಶ್ಚಯವಾಗಿತ್ತು. ಆದರೆ ವರದಕ್ಷಿಣೆ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು, ಕೇಳಿದ್ದನ್ನೆಲ್ಲಾ ಕೊಡದ ಕಾರಣ ಮದುವೆಯಾಗದಿರಲು ಗೆಳೆಯ ನಿರ್ಧರಿಸಿದ್ದ.

ವರದಕ್ಷಿಣೆಯಾಗಿ ಬಿಎಂಡಬ್ಲ್ಯೂ ಕಾರು ಕೊಡಲಿಲ್ಲ ಎನ್ನುವ ಕಾರಣಕ್ಕೆ ನಿಂತ ಮದುವೆ, ವೈದ್ಯೆ ಆತ್ಮಹತ್ಯೆ
ಕೇರಳ ವೈದ್ಯೆImage Credit source: NDTV
ನಯನಾ ರಾಜೀವ್
|

Updated on: Dec 07, 2023 | 12:25 PM

Share

ಮದುವೆ ನಿಂತಿದ್ದಕ್ಕೆ 26 ವರ್ಷದ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಅವರ ಬಾಯ್ ಫ್ರೆಂಡ್ ಜೊತೆ ಮದುವೆ ನಿಶ್ಚಯವಾಗಿತ್ತು. ಆದರೆ ವರದಕ್ಷಿಣೆ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು, ಕೇಳಿದ್ದನ್ನೆಲ್ಲಾ ಕೊಡದ ಕಾರಣ ಮದುವೆಯಾಗದಿರಲು ಗೆಳೆಯ ನಿರ್ಧರಿಸಿದ್ದ.

ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವರನ ಮನೆಯವರು ವರದಕ್ಷಿಣೆಯಾಗಿ 150 ಚಿನ್ನದ ನಾಣ್ಯಗಳು, 15 ಎಕರೆ ಭೂಮಿ ಮತ್ತು ಬಿಎಂಡಬ್ಲ್ಯು ಕಾರಿಗೆ ಬೇಡಿಕೆ ಇಟ್ಟಿದ್ದರು ಎಂದು ಸಹನಾ ಕುಟುಂಬ ಆರೋಪಿಸಿದೆ. ಅಷ್ಟು ಕೊಡಲು ಸಾಧ್ಯವಿಲ್ಲ ಎಂದಾಗ ಸಿಟ್ಟಿನಿಂದ ಮದುವೆ ರದ್ದು ಮಾಡಿದ್ದಾರೆ. ಇದರಿಂದ ಸಹನಾ ದಿಢೀರ್ ಖಿನ್ನತೆಗೆ ಒಳಗಾಗಿದ್ದರು. ಘಟನೆ ಕುರಿತು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯಿಸಿದ್ದಾರೆ. ತನಿಖೆಗೆ ಆದೇಶಿಸಲಾಗಿದೆ, ಮೃತ ಡಾ.ಸಹನಾ ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಪಿಜಿ ಮಾಡುತ್ತಿದ್ದರು.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆಕೆಯ ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆ ಕಾಯ್ದೆಯಡಿ ವರದಕ್ಷಿಣೆ ಬೇಡಿಕೆ, ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ಪ್ರಕರಣ ದಾಖಲಿಸಲಾಗಿದೆ.

ಡಾ.ಸಹನಾ ತನ್ನ ತಾಯಿಯೊಂದಿಗೆ ತಿರುವನಂತಪುರಂನಲ್ಲಿ ನೆಲೆಸಿದ್ದಾರೆ. ಗಲ್ಫ್‌ನಲ್ಲಿ ಕೆಲಸ ಮಾಡುತ್ತಿದ್ದ ಆಕೆಯ ತಂದೆ ಎರಡು ವರ್ಷಗಳ ಹಿಂದೆ ನಿಧನರಾದರು. ಕೆಲವು ದಿನಗಳ ನಂತರ, ಅವರು ಡಾ. ರುವೈಸ್ ಅವರ ಸಂಪರ್ಕಕ್ಕೆ ಬಂದರು. ಇಬ್ಬರೂ ಮದುವೆಯಾಗಲು ನಿರ್ಧರಿಸಿದರು. ವರದಕ್ಷಿಣೆ ವಿಚಾರದಲ್ಲಿ ಗಲಾಟೆ ಶುರುವಾಗಿತ್ತು.

ಮತ್ತಷ್ಟು ಓದಿ: ಬೆಂಗಳೂರು: ಬಾರ್​ನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!

ಡಿಸೆಂಬರ್ 14ರೊಳಗೆ ಸಂಪೂರ್ಣ ವರದಿಯೊಂದಿಗೆ ಆಯೋಗದ ಮುಂದೆ ಹಾಜರಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ವೀಣಾ ಚಾರ್ಜ್​ ಹೇಳಿದ್ದಾರೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಂತ್ರಸ್ತೆಯ ಮನೆಗೆ ತೆರಳಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ