AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಜೆಕ್ಷನ್ ನೀಡುವಾಗ ಪಶು ವೈದ್ಯರಿಗೇ ಕಚ್ಚಿದ ನಾಯಿ; ಕೇರಳದಲ್ಲಿ ಹೆಚ್ಚುತ್ತಿದೆ ಶ್ವಾನದ ದಾಳಿ

ನಾಯಿಯ ದಾಳಿಯನ್ನು ತಡೆಯಲು ಮುಂದಾದಾಗ ಆ ಸಾಕು ನಾಯಿ ತನ್ನ ಮಾಲೀಕರ ಮೇಲೂ ದಾಳಿ ಮಾಡಿದೆ. ಈ ನಡುವೆ ವೈದ್ಯರು ಮನೆಯಿಂದ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂಜೆಕ್ಷನ್ ನೀಡುವಾಗ ಪಶು ವೈದ್ಯರಿಗೇ ಕಚ್ಚಿದ ನಾಯಿ; ಕೇರಳದಲ್ಲಿ ಹೆಚ್ಚುತ್ತಿದೆ ಶ್ವಾನದ ದಾಳಿ
ನಾಯಿಗಳುImage Credit source: Paws Rescue Qatar
TV9 Web
| Updated By: ಸುಷ್ಮಾ ಚಕ್ರೆ|

Updated on:Sep 22, 2022 | 10:15 AM

Share

ತಿರುವನಂತಪುರಂ: ಕೇರಳದಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಕೇರಳದ ತಿರುವನಂತಪುರಂ (Tiruvanantapuram) ಜಿಲ್ಲೆಯ ತಿರುಪುರಂನಲ್ಲಿ ಪಶು ವೈದ್ಯರು (Veterinary Doctor) ನಾಯಿಗೆ ಆ್ಯಂಟಿ ರೇಬಿಸ್ ಲಸಿಕೆ (Anti-Rabies Vaccine) ನೀಡುತ್ತಿದ್ದಾಗ ಆ ನಾಯಿ ಅವರ ಮೇಲೆ ದಾಳಿ ಮಾಡಿದೆ. ಬಿಜೇಶ್ ಎಂಬ ಪಶು ವೈದ್ಯರ ಮುಖ ಮತ್ತು ಎಡಗೈಗೆ ನಾಯಿ ಕಚ್ಚಿದ್ದರಿಂದ ತೀವ್ರವಾದ ಗಾಯಗಳಾಗಿವೆ. ವೈದ್ಯರು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾರೆ.

ತಿರುಪುರಂನ ಮನೆಯೊಂದರಲ್ಲಿ ಪಶುವೈದ್ಯರು ಸಾಕು ನಾಯಿಗಳಿಗೆ ರೇಬಿಸ್ ಇಂಜೆಕ್ಷನ್ ನೀಡುತ್ತಿದ್ದಾಗ ಈ ಘಟನೆ ನಡೆದಿದೆ. ತಮ್ಮ ಮೇಲೆ ದಾಳಿ ನಡೆಸಿದ ನಾಯಿಗೆ ವೈದ್ಯರು ಲಸಿಕೆ ನೀಡುವಾಗ ಆ ನಾಯಿಯ ಮುಖಕ್ಕೆ ಮಾಸ್ಕ್ ಹಾಕಲಾಗಿತ್ತು. ಆದರೂ ಮಾಲೀಕನ ಹಿಡಿತದಿಂದ ಬಿಡಿಸಿಕೊಂಡ ಆ ಸಾಕು ನಾಯಿ ವೈದ್ಯ ಬಿಜೇಶ್ ಮೇಲೆ ಹಲ್ಲೆ ನಡೆಸಿದೆ. ನಾಯಿ ತನ್ನ ಮಾಸ್ಕ್ ತೆಗೆದುಕೊಂಡು ವೈದ್ಯರ ಕೈ, ಮುಖಕ್ಕೆ ಕಚ್ಚಿದೆ.

ಇದನ್ನೂ ಓದಿ: Viral Video: ನಾಯಿಯನ್ನು ಕಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ವೈದ್ಯನ ವಿಡಿಯೋ ವೈರಲ್

ನಾಯಿಯ ದಾಳಿಯನ್ನು ತಡೆಯಲು ಮುಂದಾದಾಗ ಆ ಸಾಕು ನಾಯಿ ತನ್ನ ಮಾಲೀಕರ ಮೇಲೂ ದಾಳಿ ಮಾಡಿದೆ. ಈ ನಡುವೆ ವೈದ್ಯರು ಮನೆಯಿಂದ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೆಪ್ಟೆಂಬರ್ 13ರಂದು ಕೇರಳದ ಕೋಳಿಕ್ಕೋಡ್ ಜಿಲ್ಲೆಯ ಅರಕ್ಕಿನಾರ್ ಗ್ರಾಮದಲ್ಲಿ 12 ವರ್ಷದ ಬಾಲಕನ ಮೇಲೆ ನಾಯಿ ಹಲ್ಲೆ ನಡೆಸಿತ್ತು. ನಾಯಿಯ ದಾಳಿಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆಗೂ ಮೊದಲು ಆ ಗ್ರಾಮದಲ್ಲಿ ಬೀದಿ ನಾಯಿಗಳ ಹಿಂಡು ಇಬ್ಬರು ಮಕ್ಕಳು ಸೇರಿದಂತೆ ಐವರ ಮೇಲೆ ದಾಳಿ ನಡೆಸಿತ್ತು. ಸೆಪ್ಟೆಂಬರ್ 5ರಂದು ಹಾಲು ಖರೀದಿಸಲು ತೆರಳುತ್ತಿದ್ದ 12 ವರ್ಷದ ಬಾಲಕಿಯನ್ನು ನಾಯಿ ಕಚ್ಚಿ, ಕೊಂದು ಹಾಕಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:14 am, Thu, 22 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್