AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರಿಂದ ನಿಂದನೆಗೊಳಗಾಗಿ, ವರ್ಗಾವಣೆ ಶಿಕ್ಷೆ ಪಡೆದಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕ ಸಾವು

ಸಚಿವರ ನಿಂದನೆಗೆ ಗುರಿಯಾಗಿದ್ದ ಕೆಎಸ್​ಆರ್​ಟಿಸಿ ಚಾಲಕ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕಾಂಜೀರಪಲ್ಲಿಯಲ್ಲಿ ನಡೆದಿದೆ. ಡ್ರೈವರ್ ಸೀಟಿನ ಕಿಟಕಿ ಪಕ್ಕ ಪ್ಲಾಸ್ಟಿಕ್ ಬಾಟಲಿಗಳನ್ನುಇಟ್ಟುಕೊಂಡು ಪ್ರಯಾಣಿಸುತ್ತಿರುವುದಕ್ಕೆ ಕೋಪಗೊಂಡ ಸಚಿವರು ಗದರಿದ್ದರು, ಜತೆಗೆ ಅವರನ್ನು ಬೇರೆಡೆ ವರ್ಗಾಯಿಸಿದ್ದರು. ಬಸ್ ಚಲಾಯಿಸುತ್ತಿರುವಾಗಲೇ ಪೊನ್ಕುನ್ನಂ ಡಿಪೋದ ಚಾಲಕ ಜೈಮನ್ ಜೋಸೆಫ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಸಚಿವರಿಂದ ನಿಂದನೆಗೊಳಗಾಗಿ, ವರ್ಗಾವಣೆ ಶಿಕ್ಷೆ ಪಡೆದಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕ ಸಾವು
ಬಸ್ ಚಾಲಕ
ನಯನಾ ರಾಜೀವ್
|

Updated on:Oct 07, 2025 | 12:18 PM

Share

ಕಾಂಜೀರಪಳ್ಳಿ, ಅಕ್ಟೋಬರ್ 07: ಸಚಿವರ ನಿಂದನೆಗೆ ಗುರಿಯಾಗಿದ್ದ ಕೆಎಸ್​ಆರ್​ಟಿಸಿ ಚಾಲಕ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕಾಂಜೀರಪಲ್ಲಿಯಲ್ಲಿ ನಡೆದಿದೆ. ಡ್ರೈವರ್ ಸೀಟಿನ ಕಿಟಕಿ ಪಕ್ಕ ಪ್ಲಾಸ್ಟಿಕ್ ಬಾಟಲಿಗಳನ್ನುಇಟ್ಟುಕೊಂಡು ಪ್ರಯಾಣಿಸುತ್ತಿರುವುದಕ್ಕೆ ಕೋಪಗೊಂಡ ಸಚಿವರು ಗದರಿದ್ದರು, ಜತೆಗೆ ಅವರನ್ನು ಬೇರೆಡೆ ವರ್ಗಾಯಿಸಿದ್ದರು. ಬಸ್ ಚಲಾಯಿಸುತ್ತಿರುವಾಗಲೇ ಪೊನ್ಕುನ್ನಂ ಡಿಪೋದ ಚಾಲಕ ಜೈಮನ್ ಜೋಸೆಫ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಕಾಂಜೀರಪಳ್ಳಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಬಳಿಕ ಜೈಮನ್ ಅವರನ್ನು ವಿಶೇಷ ಚಿಕಿತ್ಸೆಗಾಗಿ ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಜೈಮನ್ ಸೇರಿದಂತೆ ನೌಕರರನ್ನು ತ್ರಿಶೂರ್‌ಗೆ ವರ್ಗಾಯಿಸುವ ಬಗ್ಗೆ ವಿವಾದ ಉಂಟಾದ ನಂತರ ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ಮುಂಡಕ್ಕಯಂ-ಪಾಲಾ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕಾಂಜೀರಪ್ಪಳ್ಳಿಯ ಪೂತಕುಳಿಯಲ್ಲಿ ಈ ಘಟನೆ ನಡೆದಿದೆ. 1ನೇ ತಾರೀಖಿನಂದು ಬೆಳಗ್ಗೆ, ಮುಂಡಕ್ಕಯಂನಿಂದ ತಿರುವನಂತಪುರಕ್ಕೆ ಬರುತ್ತಿದ್ದ ಬಸ್ಸಿನ ಮುಂಭಾಗದ ಕಿಟಕಿಯ ಮುಂದೆ ಬಾಟಲಿಗಳು ಸಾಲುಗಟ್ಟಿ ನಿಂತಿರುವುದನ್ನು ನೋಡಿದ ಸಚಿವ ಕೆ.ಬಿ. ಗಣೇಶ್ ಕುಮಾರ್ ಬಸ್ ನಿಲ್ಲಿಸಿ ಚಾಲಕನನ್ನು ಗದರಿಸಿದ್ದರು.

ಮತ್ತಷ್ಟು ಓದಿ: ಸಾವಿನಲ್ಲೂ ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಚಾಲಕ: ಹೃದಯಾಘಾತವಾದರೂ ಬಸ್ ನಿಲ್ಲಿಸಿ ಪ್ರಯಾಣಿಕರ ರಕ್ಷಣೆ!

ನಂತರ ಸಚಿವರು ಜೈಮನ್ ಸೇರಿದಂತೆ ಮೂವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ನಂತರ ವರ್ಗಾವಣೆ ಆದೇಶ ಹೊರಡಿಸಲಾಯಿತು. ಜೈಮನ್ ಅವರಿಗೆ ಮಧುಮೇಹ ಮತ್ತು ರಕ್ತದೊತ್ತಡಕ್ಕೆ ಔಷಧಿ ತೆಗೆದುಕೊಳ್ಳುತ್ತಿರುವುದಾಗಿ ಮತ್ತು ಘಟನೆಯ ದಿನ ಬಸ್ ಮುಂದೆ ಇಡಲಾಗಿದ್ದ ಬಾಟಲಿಗಳನ್ನು ಕುಡಿಯುವ ನೀರನ್ನು ಹಿಡಿದಿಡಲು ಬಳಸಲಾಗುತ್ತಿತ್ತು ಎಂದು ಹೇಳಿಕೆ ನೀಡಿದ್ದರು. ಆದರೂ ವರ್ಗಾವಣೆಯನ್ನು ಹಿಂತೆಗೆದುಕೊಂಡಿರಲಿಲ್ಲ. ಇದೀಗ ಪ್ರಾಣವನ್ನೇ ಬಿಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:16 pm, Tue, 7 October 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ