AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರಿಂದ ನಿಂದನೆಗೊಳಗಾಗಿ, ವರ್ಗಾವಣೆ ಶಿಕ್ಷೆ ಪಡೆದಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕ ಸಾವು

ಸಚಿವರ ನಿಂದನೆಗೆ ಗುರಿಯಾಗಿದ್ದ ಕೆಎಸ್​ಆರ್​ಟಿಸಿ ಚಾಲಕ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕಾಂಜೀರಪಲ್ಲಿಯಲ್ಲಿ ನಡೆದಿದೆ. ಡ್ರೈವರ್ ಸೀಟಿನ ಕಿಟಕಿ ಪಕ್ಕ ಪ್ಲಾಸ್ಟಿಕ್ ಬಾಟಲಿಗಳನ್ನುಇಟ್ಟುಕೊಂಡು ಪ್ರಯಾಣಿಸುತ್ತಿರುವುದಕ್ಕೆ ಕೋಪಗೊಂಡ ಸಚಿವರು ಗದರಿದ್ದರು, ಜತೆಗೆ ಅವರನ್ನು ಬೇರೆಡೆ ವರ್ಗಾಯಿಸಿದ್ದರು. ಬಸ್ ಚಲಾಯಿಸುತ್ತಿರುವಾಗಲೇ ಪೊನ್ಕುನ್ನಂ ಡಿಪೋದ ಚಾಲಕ ಜೈಮನ್ ಜೋಸೆಫ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಸಚಿವರಿಂದ ನಿಂದನೆಗೊಳಗಾಗಿ, ವರ್ಗಾವಣೆ ಶಿಕ್ಷೆ ಪಡೆದಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕ ಸಾವು
ಬಸ್ ಚಾಲಕ
ನಯನಾ ರಾಜೀವ್
|

Updated on:Oct 07, 2025 | 12:18 PM

Share

ಕಾಂಜೀರಪಳ್ಳಿ, ಅಕ್ಟೋಬರ್ 07: ಸಚಿವರ ನಿಂದನೆಗೆ ಗುರಿಯಾಗಿದ್ದ ಕೆಎಸ್​ಆರ್​ಟಿಸಿ ಚಾಲಕ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕಾಂಜೀರಪಲ್ಲಿಯಲ್ಲಿ ನಡೆದಿದೆ. ಡ್ರೈವರ್ ಸೀಟಿನ ಕಿಟಕಿ ಪಕ್ಕ ಪ್ಲಾಸ್ಟಿಕ್ ಬಾಟಲಿಗಳನ್ನುಇಟ್ಟುಕೊಂಡು ಪ್ರಯಾಣಿಸುತ್ತಿರುವುದಕ್ಕೆ ಕೋಪಗೊಂಡ ಸಚಿವರು ಗದರಿದ್ದರು, ಜತೆಗೆ ಅವರನ್ನು ಬೇರೆಡೆ ವರ್ಗಾಯಿಸಿದ್ದರು. ಬಸ್ ಚಲಾಯಿಸುತ್ತಿರುವಾಗಲೇ ಪೊನ್ಕುನ್ನಂ ಡಿಪೋದ ಚಾಲಕ ಜೈಮನ್ ಜೋಸೆಫ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಕಾಂಜೀರಪಳ್ಳಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಬಳಿಕ ಜೈಮನ್ ಅವರನ್ನು ವಿಶೇಷ ಚಿಕಿತ್ಸೆಗಾಗಿ ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಜೈಮನ್ ಸೇರಿದಂತೆ ನೌಕರರನ್ನು ತ್ರಿಶೂರ್‌ಗೆ ವರ್ಗಾಯಿಸುವ ಬಗ್ಗೆ ವಿವಾದ ಉಂಟಾದ ನಂತರ ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ಮುಂಡಕ್ಕಯಂ-ಪಾಲಾ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕಾಂಜೀರಪ್ಪಳ್ಳಿಯ ಪೂತಕುಳಿಯಲ್ಲಿ ಈ ಘಟನೆ ನಡೆದಿದೆ. 1ನೇ ತಾರೀಖಿನಂದು ಬೆಳಗ್ಗೆ, ಮುಂಡಕ್ಕಯಂನಿಂದ ತಿರುವನಂತಪುರಕ್ಕೆ ಬರುತ್ತಿದ್ದ ಬಸ್ಸಿನ ಮುಂಭಾಗದ ಕಿಟಕಿಯ ಮುಂದೆ ಬಾಟಲಿಗಳು ಸಾಲುಗಟ್ಟಿ ನಿಂತಿರುವುದನ್ನು ನೋಡಿದ ಸಚಿವ ಕೆ.ಬಿ. ಗಣೇಶ್ ಕುಮಾರ್ ಬಸ್ ನಿಲ್ಲಿಸಿ ಚಾಲಕನನ್ನು ಗದರಿಸಿದ್ದರು.

ಮತ್ತಷ್ಟು ಓದಿ: ಸಾವಿನಲ್ಲೂ ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಚಾಲಕ: ಹೃದಯಾಘಾತವಾದರೂ ಬಸ್ ನಿಲ್ಲಿಸಿ ಪ್ರಯಾಣಿಕರ ರಕ್ಷಣೆ!

ನಂತರ ಸಚಿವರು ಜೈಮನ್ ಸೇರಿದಂತೆ ಮೂವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ನಂತರ ವರ್ಗಾವಣೆ ಆದೇಶ ಹೊರಡಿಸಲಾಯಿತು. ಜೈಮನ್ ಅವರಿಗೆ ಮಧುಮೇಹ ಮತ್ತು ರಕ್ತದೊತ್ತಡಕ್ಕೆ ಔಷಧಿ ತೆಗೆದುಕೊಳ್ಳುತ್ತಿರುವುದಾಗಿ ಮತ್ತು ಘಟನೆಯ ದಿನ ಬಸ್ ಮುಂದೆ ಇಡಲಾಗಿದ್ದ ಬಾಟಲಿಗಳನ್ನು ಕುಡಿಯುವ ನೀರನ್ನು ಹಿಡಿದಿಡಲು ಬಳಸಲಾಗುತ್ತಿತ್ತು ಎಂದು ಹೇಳಿಕೆ ನೀಡಿದ್ದರು. ಆದರೂ ವರ್ಗಾವಣೆಯನ್ನು ಹಿಂತೆಗೆದುಕೊಂಡಿರಲಿಲ್ಲ. ಇದೀಗ ಪ್ರಾಣವನ್ನೇ ಬಿಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:16 pm, Tue, 7 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ