AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲು ‘ಭಾರತ್’; ಎನ್‌ಸಿಇಆರ್‌ಟಿ ಪ್ರಸ್ತಾಪ ತಿರಸ್ಕರಿಸಿದ ಕೇರಳ

ಎನ್‌ಸಿಇಆರ್‌ಟಿಯು ಮಕ್ಕಳಿಗೆ ಅಸಂವಿಧಾನಿಕ, ಅವೈಜ್ಞಾನಿಕ ಮತ್ತು ತಿರುಚಿದ ಇತಿಹಾಸದ ವಿಷಯಗಳನ್ನು ಕಲಿಸಲು ಬಯಸಿದರೆ, ಕೇರಳ ಅದನ್ನು ವಿರೋಧಿಸುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಪ್ರಸ್ತುತ ಬಳಸುತ್ತಿರುವ 44 ಪಠ್ಯಪುಸ್ತಕಗಳನ್ನು ಸಿದ್ಧಪಡಿಸುವ ಕೆಲಸವನ್ನು ವಿವರವಾಗಿ ಚರ್ಚಿಸಲು ಕೇರಳ ಸರ್ಕಾರವು ರಾಜ್ಯ ಪಠ್ಯಕ್ರಮ ಸಮಿತಿಯನ್ನು ಕರೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ಶಾಲಾ ಪಠ್ಯಪುಸ್ತಕಗಳಲ್ಲಿ 'ಇಂಡಿಯಾ' ಬದಲು 'ಭಾರತ್'; ಎನ್‌ಸಿಇಆರ್‌ಟಿ ಪ್ರಸ್ತಾಪ ತಿರಸ್ಕರಿಸಿದ ಕೇರಳ
ವಿ.ಶಿವನ್ ಕುಟ್ಟಿ
ರಶ್ಮಿ ಕಲ್ಲಕಟ್ಟ
|

Updated on: Oct 26, 2023 | 8:00 PM

Share

ತಿರುವನಂತಪುರಂ ಅಕ್ಟೋಬರ್ 26: ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲಿಗೆ ‘ಭಾರತ್’ (Bharat)ಎಂದು ದೇಶದ ಹೆಸರನ್ನಾಗಿ ಮಾಡಬೇಕು ಎಂಬ ಎನ್‌ಸಿಇಆರ್‌ಟಿ (NCERT) ಉನ್ನತ ಮಟ್ಟದ ಸಮಿತಿಯ ಶಿಫಾರಸನ್ನು ರಾಜ್ಯ ಸರ್ಕಾರ ಒಪ್ಪಿಕೊಳ್ಳುವುದಿಲ್ಲ ಎಂದು ಕೇರಳ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ (V Sivankutty) ಗುರುವಾರ ಹೇಳಿದ್ದಾರೆ. ಸಂವಿಧಾನದಲ್ಲಿ ಹೇಳಿರುವಂತೆ ಇಂಡಿಯಾ ಅಥವಾ ಭಾರತವನ್ನು ಬಳಸುವ ಹಕ್ಕು ನಾಗರಿಕರಿಗೆ ಇದೆ. ಅವರು ಈಗ ಭಾರತವನ್ನು ಮಾತ್ರ ದೇಶದ ಹೆಸರಾಗಿ ಬಳಸಬೇಕು ಎಂದು ಹೇಳುತ್ತಿರುವುದು ಸಂಕುಚಿತ ರಾಜಕೀಯ, ಇದನ್ನು ಕೇರಳ ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿ ಶಿವನ್‌ಕುಟ್ಟಿ ಹೇಳಿದ್ದಾರೆ.

ಐತಿಹಾಸಿಕ ಸತ್ಯಗಳನ್ನು ತಿರುಚಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿದೆ ಎಂದು ಶಿವನ್‌ಕುಟ್ಟಿ ಆರೋಪಿಸಿದ್ದಾರೆ.

“ಮೊದಲು, ಎನ್‌ಸಿಇಆರ್‌ಟಿ ಕೆಲವು ಭಾಗಗಳನ್ನು ತೆಗೆದುಹಾಕಿದ ನಂತರ, ನಾವು ಅವುಗಳನ್ನು ಹೆಚ್ಚುವರಿ ಪಠ್ಯಪುಸ್ತಕಗಳ ಮೂಲಕ ರಾಜ್ಯದಲ್ಲಿ ಕಲಿಸುವ ಪಠ್ಯಕ್ರಮದಲ್ಲಿ ಸೇರಿಸಿದ್ದೇವೆ” ಎಂದು ವಿ ಶಿವನ್‌ಕುಟ್ಟಿ ಹೇಳಿದ್ದಾರೆ. ಎನ್‌ಸಿಇಆರ್‌ಟಿಯು ಮಕ್ಕಳಿಗೆ ಅಸಂವಿಧಾನಿಕ, ಅವೈಜ್ಞಾನಿಕ ಮತ್ತು ತಿರುಚಿದ ಇತಿಹಾಸದ ವಿಷಯಗಳನ್ನು ಕಲಿಸಲು ಬಯಸಿದರೆ, ಕೇರಳ ಅದನ್ನು ವಿರೋಧಿಸುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಪ್ರಸ್ತುತ ಬಳಸುತ್ತಿರುವ 44 ಪಠ್ಯಪುಸ್ತಕಗಳನ್ನು ಸಿದ್ಧಪಡಿಸುವ ಕೆಲಸವನ್ನು ವಿವರವಾಗಿ ಚರ್ಚಿಸಲು ಕೇರಳ ಸರ್ಕಾರವು ರಾಜ್ಯ ಪಠ್ಯಕ್ರಮ ಸಮಿತಿಯನ್ನು ಕರೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ಇತಿಹಾಸಕಾರ ಸಿಐ ಇಸಾಕ್ ನೇತೃತ್ವದ ಎನ್‌ಸಿಇಆರ್‌ಟಿ ಸಮಿತಿಯು ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ ಬದಲು ಭಾರತ’ ಎಂದು ಬದಲಿಸಲು ಶಿಫಾರಸು ಮಾಡಿದೆ.

ಇದನ್ನೂ ಓದಿ: ನಮ್ಮ ಸರ್ಕಾರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರ ಅನುಸರಿಸುತ್ತದೆ: ಶಿರಡಿಯಲ್ಲಿ ಮೋದಿ

ಸಮಾಜ ವಿಜ್ಞಾನಕ್ಕಾಗಿ ಏಳು ಸದಸ್ಯರ ಸಮಿತಿಯು ಶಿಫಾರಸುಗಳನ್ನು ಮಾಡಿದ್ದು ಇದು ವಿವಿಧ ವಿಷಯಗಳ ಕುರಿತು ಪೊಸಿಷನ್ ಪೇಪರ್ ತಯಾರಿಸಲು ಎನ್‌ಸಿಇಆರ್‌ಟಿಯಿಂದ ರಚಿಸಲ್ಪಟ್ಟ ಸಮಿತಿಗಳಲ್ಲಿ ಒಂದಾಗಿದೆ.

ದೂರವಾಣಿಯಲ್ಲಿ ಎಎನ್ಐಯೊಂದಿಗೆ ಮಾತನಾಡಿದ ಐಸಾಕ್, “ಈಸ್ಟ್ ಇಂಡಿಯಾ ಕಂಪನಿಯ ಸ್ಥಾಪನೆ ಮತ್ತು 1757 ರಲ್ಲಿ ಪ್ಲಾಸಿ ಯುದ್ಧದ ನಂತರವೇ ಭಾರತ ಎಂಬ ಪದವನ್ನು ಸಾಮಾನ್ಯವಾಗಿ ಬಳಸಲಾರಂಭಿಸಿತು” ಎಂದು ಹೇಳಿದರು.” ಪಠ್ಯಪುಸ್ತಕಗಳಲ್ಲಿ ‘ಭಾರತ್’ ಅನ್ನು ಬಳಸಬೇಕೆಂದು ನಾವು ಸರ್ವಾನುಮತದಿಂದ ಶಿಫಾರಸು ಮಾಡಿದ್ದೇವೆ ಎಂದು ಹೇಳಿದ್ದಾರೆ.

ಸಮಿತಿಯ ಶಿಫಾರಸಿಗೆ ಪ್ರತಿಕ್ರಿಯಿಸಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರವು ಜನರನ್ನು ಗೊಂದಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಬುಧವಾರ ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ