AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಮನೆಗೆ ಬೆಂಕಿ, ವೃದ್ಧ ದಂಪತಿ ಸಾವು, ಮಗನ ಬಂಧನ

ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ವೃದ್ಧ ದಂಪತಿ ಸಾವನ್ನಪ್ಪಿದ್ದಾರೆ. ಮೃತರನ್ನು ರಾಘವನ್ (96) ಮತ್ತು ಅವರ ಪತ್ನಿ ಭಾರತಿ (86) ಎಂದು ಗುರುತಿಸಲಾಗಿದ್ದು, ಚೆನ್ನಿತಲ ಗ್ರಾಮದಲ್ಲಿ ವಾಸವಿದ್ದರು. ಮನೆಗೆ ಬೆಂಕಿ ಹಚ್ಚಿದ ಶಂಕೆ ಮೇರೆಗೆ ಅವರ ಪುತ್ರ ವಿಜಯನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ ವಿಜಯನ್ ಆಸ್ತಿ ವಿಚಾರದಲ್ಲಿ ಪೋಷಕರೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ

ಕೇರಳ: ಮನೆಗೆ ಬೆಂಕಿ, ವೃದ್ಧ ದಂಪತಿ ಸಾವು, ಮಗನ ಬಂಧನ
ಬೆಂಕಿImage Credit source: RSC education
ನಯನಾ ರಾಜೀವ್
|

Updated on:Feb 01, 2025 | 3:44 PM

Share

ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ವೃದ್ಧ ದಂಪತಿ ಸಾವನ್ನಪ್ಪಿದ್ದಾರೆ. ಮೃತರನ್ನು ರಾಘವನ್ (96) ಮತ್ತು ಅವರ ಪತ್ನಿ ಭಾರತಿ (86) ಎಂದು ಗುರುತಿಸಲಾಗಿದ್ದು, ಚೆನ್ನಿತಲ ಗ್ರಾಮದಲ್ಲಿ ವಾಸವಿದ್ದರು.

ಮನೆಗೆ ಬೆಂಕಿ ಹಚ್ಚಿದ ಶಂಕೆ ಮೇರೆಗೆ ಅವರ ಪುತ್ರ ವಿಜಯನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ ವಿಜಯನ್ ಆಸ್ತಿ ವಿಚಾರದಲ್ಲಿ ಪೋಷಕರೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಬೆಳಗಿನ ಜಾವ 3.30ರ ಸುಮಾರಿಗೆ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಚಾಲಕ ಗಮನಿಸಿದ್ದಾನೆ. ಕೂಡಲೇ ಪೊಲೀಸ್, ಅಗ್ನಿಶಾಮಕ ಅಧಿಕಾರಿಗಳು, ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದರು. ಕೂಡಲೇ ಬೆಂಕಿ ನಂದಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ದಂಪತಿಯ ಸುಟ್ಟು ಕರಕಲಾದ ದೇಹಗಳು ಪತ್ತೆಯಾಗಿವೆ. ಮನ್ನಾರ್ ಪೊಲೀಸರು ವಿಜಯನ್ ಅವರನ್ನು ಸಮೀಪದ ಪ್ಲಾಟ್‌ನಿಂದ ಬಂಧಿಸಿದ್ದು, ಬೆಂಕಿಯ ಕಾರಣವನ್ನು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಯಾದಗಿರಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯನ್ನೇ ಹತ್ಯೆಗೈದ ಪತ್ನಿ

ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಆ ಸಮಯದಲ್ಲಿ ಮಗ ಮನೆಯಲ್ಲಿಲ್ಲದೆ ಯಾವುದೋ ಫ್ಲಾಟ್​ನಲ್ಲಿದ್ದುದು ಮತ್ತಷ್ಟು ಅನುಮಾನವನ್ನು ಹುಟ್ಟುಹಾಕಿದೆ. ಬೆಂಕಿ ಹೇಗೆ ಹೊತ್ತಿಕೊಂಡಿತ್ತು ಎಂಬುದರ ಕುರಿತು ಸಮರ್ಪಕ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:43 pm, Sat, 1 February 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ