AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಗುರುತಿನ ಚೀಟಿ ವಿವಾದ: ಕೇರಳ ಯೂತ್​​ ಕಾಂಗ್ರೆಸ್‌ನಿಂದ ವಿವರಣೆ ಕೇಳಿದ ಚುನಾವಣಾ ಆಯೋಗ

ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಗೆ ಕಾಂಗ್ರೆಸ್ 1.25 ಲಕ್ಷ ನಕಲಿ ಗುರುತಿನ ಚೀಟಿಗಳನ್ನು ತಯಾರಿಸಿದೆ ಎಂದು ಸುರೇಂದ್ರನ್ ಆರೋಪಿಸಿದ್ದರು. ಈ ಕಾರ್ಡ್‌ಗಳನ್ನು ಯುವ ಕಾಂಗ್ರೆಸ್‌ನ ಸಾಂಸ್ಥಿಕ ಚುನಾವಣೆಗೆ ಬಳಸಲಾಗಿದ್ದರೂ, ಇದು ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ಸಮಸ್ಯೆಯಾಗಿದೆ ಎಂದು ಸುರೇಂದ್ರನ್ ಹೇಳಿದ್ದಾರೆ.

ನಕಲಿ ಗುರುತಿನ ಚೀಟಿ ವಿವಾದ: ಕೇರಳ ಯೂತ್​​ ಕಾಂಗ್ರೆಸ್‌ನಿಂದ ವಿವರಣೆ ಕೇಳಿದ ಚುನಾವಣಾ ಆಯೋಗ
ಸಂಜಯ್ ಕೌಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Nov 17, 2023 | 9:32 PM

Share

ತಿರುವನಂತಪುರಂ ನವೆಂಬರ್ 17: ಕೇರಳದ (Kerala) ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ (K Surendran) ಆರೋಪಿಸಿದಂತೆ ನಕಲಿ ಗುರುತಿನ ಚೀಟಿ ಪ್ರಕರಣ ಕುರಿತು ತನಿಖೆ ನಡೆಸುವಂತೆ ಚುನಾವಣಾ ಆಯೋಗವು ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ ಎಂದು ಕೇರಳದ ಮುಖ್ಯ ಚುನಾವಣಾ ಅಧಿಕಾರಿ ಸಂಜಯ್ ಕೌಲ್ (Sanjay Kaul) ಶುಕ್ರವಾರ ಹೇಳಿದ್ದಾರೆ. ‘ಪತ್ರಿಕೆಯಿಂದ ಆರೋಪದ ಬಗ್ಗೆ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷದಿಂದ ದೂರು ದಾಖಲಾಗಿದೆ. ಯುವ ಕಾಂಗ್ರೆಸ್ ಚುನಾವಣೆಯ ಅಂಗವಾಗಿ ಇಂತಹ ಬೋಗಸ್ ಕಾರ್ಡ್‌ಗಳನ್ನು ಮುದ್ರಿಸಲಾಗಿದೆಯೇ ಎಂದು ನಾವು ಪರಿಶೀಲಿಸುತ್ತಿದ್ದೇವೆ. ನಿಜವಾಗಿದ್ದರೆ, ಯಾರು ಇದನ್ನು ಮಾಡಿದ್ದಾರೆ ಎಂದು ತಿಳಿಯಲು ತನಿಖೆ ನಡೆಸಲಾಗುವುದು ಎಂದು ಕೌಲ್ ಹೇಳಿದರು.

ಈ ಬಗ್ಗೆ ಚುನಾವಣಾ ಆಯೋಗ ಯೂತ್ ಕಾಂಗ್ರೆಸ್‌ನಿಂದ ವಿವರಣೆ ಕೇಳಿದೆ ಎಂದು ಅವರು ಹೇಳಿದರು. ಹೊಲೊಗ್ರಾಮ್‌ನಂತಹ ದೃಢೀಕರಣ ವೈಶಿಷ್ಟ್ಯಗಳೊಂದಿಗೆ ಹೊಸ ಮತದಾರರ ಗುರುತಿನ ಚೀಟಿಗಳನ್ನು ರಚಿಸುವುದು ಅಸಾಧ್ಯವೆಂದು ಮುಖ್ಯ ಚುನಾವಣಾಧಿಕಾರಿ ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಗೆ ಕಾಂಗ್ರೆಸ್ 1.25 ಲಕ್ಷ ನಕಲಿ ಗುರುತಿನ ಚೀಟಿಗಳನ್ನು ತಯಾರಿಸಿದೆ ಎಂದು ಸುರೇಂದ್ರನ್ ಆರೋಪಿಸಿದ್ದರು. ಈ ಕಾರ್ಡ್‌ಗಳನ್ನು ಯುವ ಕಾಂಗ್ರೆಸ್‌ನ ಸಾಂಸ್ಥಿಕ ಚುನಾವಣೆಗೆ ಬಳಸಲಾಗಿದ್ದರೂ, ಇದು ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ಸಮಸ್ಯೆಯಾಗಿದೆ ಎಂದು ಸುರೇಂದ್ರನ್ ಹೇಳಿದ್ದಾರೆ.

ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಳಸಿ ನಕಲಿ ಗುರುತಿನ ಚೀಟಿಗಳನ್ನು ತಯಾರಿಸಲಾಗಿದೆ. ಇದರ ಹಿಂದೆ ಪಾಲಕ್ಕಾಡ್‌ನ ಕಾಂಗ್ರೆಸ್ ಶಾಸಕರ ಕೈವಾಡವಿದೆ. ಘಟನೆಗೆ ಸಂಬಂಧಿಸಿದಂತೆ ಡಿಜಿಪಿ ಮತ್ತು ಕೇಂದ್ರ ಏಜೆನ್ಸಿಗಳಿಗೆ ದೂರು ನೀಡಲಾಗಿದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ನಾಯಕರು ಈ ವಿಷಯವನ್ನು ಮರೆಮಾಚುತ್ತಿದ್ದಾರೆ ಎಂದು ಸುರೇಂದ್ರನ್ ಆರೋಪಿಸಿದರು.

ಪಾಲಕ್ಕಾಡ್ ಶಾಸಕ ಶಾಫಿ ಪರಂಪೀಲ್ ಅವರು ಆರೋಪಗಳನ್ನು ನಿರಾಕರಿಸಿದ್ದು, ಇದು ರಾಜಕೀಯವಾಗಿ ಪ್ರಸ್ತುತವಾಗಲು ಸುರೇಂದ್ರನ್ ಅವರ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ. ತಜ್ಞರೊಂದಿಗೆ ಸಮಾಲೋಚಿಸಿದ ನಂತರ ನಾಯಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಚಿಂತಿಸುತ್ತಿದ್ದೇನೆ ಎಂದು ಶಾಫಿ ತಿಳಿಸಿದ್ದಾರೆ.

ಇದನ್ನೂ ಓದಿ: ಮರಣದಂಡನೆ ವಿರುದ್ಧ ಕೇರಳದ ನರ್ಸ್‌ನ ಮೇಲ್ಮನವಿ ವಜಾಗೊಳಿಸಿದ ಯೆಮೆನ್ ನ್ಯಾಯಾಲಯ

ನವೆಂಬರ್ 14 ರಂದು ಇಂಡಿಯನ್ ಯೂತ್ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷರಾಗಿ ರಾಹುಲ್ ಮಾಂಕೂಟ್ಟತ್ತಿಲ್  ಆಯ್ಕೆಯಾಗಿದ್ದು, ಅಬಿನ್ ವರ್ಕಿ ಎರಡನೇ ಸ್ಥಾನ ಪಡೆದರು. ಶಾಫಿ ಪರಂಬಿಲ್ ನೇತೃತ್ವದ ಹಿಂದಿನ ರಾಜ್ಯ ಸಮಿತಿಯಲ್ಲಿ ರಾಹುಲ್ ಮತ್ತು ಅಬಿನ್ ಇಬ್ಬರೂ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಸುರೇಂದ್ರನ್ ಎತ್ತಿರುವ ಆರೋಪಗಳನ್ನು ರಾಹುಲ್ ಮತ್ತು ಅಬಿನ್ ತಳ್ಳಿ ಹಾಕಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ