AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಪಿಎಫ್ಐ ಕಾರ್ಯಕರ್ತರಿಗೆ ಜೀವ ರಕ್ಷಣಾ ಕೌಶಲ್ಯ ತರಬೇತಿ ನೀಡಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಸಾಧ್ಯತೆ

ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿಗಳು ವಿಪತ್ತಿನ ಸಂದರ್ಭದಲ್ಲಿ ವಿವಿಧ ಕಾರ್ಯಾಚರಣೆಗಳನ್ನು ಹೇಗೆ ಕೈಗೊಳ್ಳಬೇಕು ಎಂಬ ತರಬೇತಿಯನ್ನು ಬಿಜೆಪಿಯು ಘೋರ ಅಪರಾಧವೆಂದು ಪರಿಗಣಿಸುತ್ತಿದೆ ಎಂದು ಪಿಎಫ್‌ಐ ಪದಾಧಿಕಾರಿಗಳು ಹೇಳಿದರು.

ಕೇರಳ: ಪಿಎಫ್ಐ ಕಾರ್ಯಕರ್ತರಿಗೆ ಜೀವ ರಕ್ಷಣಾ ಕೌಶಲ್ಯ ತರಬೇತಿ ನೀಡಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಸಾಧ್ಯತೆ
ಪಿಎಫ್ಐಗೆ ತರಬೇತಿ ನೀಡುತ್ತಿರುವ ಅಧಿಕಾರಿಗಳು Image Credit source: ಪಿಎಫ್ಐ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Apr 03, 2022 | 7:14 PM

Share

ತಿರುವನಂತಪುರಂ: ಎರ್ನಾಕುಲಂನ (Ernakulam) ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಸೇರಿದಂತೆ ಐವರು ಅಧಿಕಾರಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಾರ್ಯಕರ್ತರಿಗೆ ತರಬೇತಿ ನೀಡಿರುವ ಕುರಿತು ಇಲಾಖೆಯ ಮುಖ್ಯಸ್ಥರ ವರದಿಯನ್ನು ಆಧರಿಸಿ ಕ್ರಮ ಎದುರಿಸುವ ಸಾಧ್ಯತೆಯಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಡಿಜಿಪಿ ಮತ್ತು ಕಮಾಂಡೆಂಟ್ ಜನರಲ್ ಬಿ ಸಂಧ್ಯಾ ಅವರು ಘಟನೆಯ ಬಗ್ಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ ವ್ಯವಹಾರಗಳು) ಟಿ ಕೆ ಜೋಸ್ (T K Jose) ಅವರಿಗೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಧ್ಯಾ ಅವರು ಐವರು ಅಧಿಕಾರಿಗಳ ಗಂಭೀರ ಲೋಪವನ್ನು ಎತ್ತಿ ತೋರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.  ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಯ ಲಿಖಿತ ಆದೇಶದ ಆಧಾರದ ಮೇಲೆ ಜೀವ ಉಳಿಸುವ ಕೌಶಲ್ಯಗಳ ಕುರಿತು ಪಿಎಫ್ಐ ಕಾರ್ಯಕರ್ತರಿಗೆ ತರಬೇತಿ ನೀಡಲಾಯಿತು. ಪಿಎಫ್ಐ ತನ್ನ ಹೊಸದಾಗಿ ಸ್ಥಾಪಿಸಲಾದ ರಕ್ಷಣಾ ಮತ್ತು ಪರಿಹಾರ ಪಾಪ್ಯುಲರ್ ಫ್ರಂಟ್‌ನ ಸದಸ್ಯರಿಗೆ ಜೀವ ಉಳಿಸುವ ಕೌಶಲ್ಯಗಳ ತರಬೇತಿಯನ್ನು ಕೋರಿ ಲಿಖಿತ ವಿನಂತಿಯನ್ನು ನೀಡಿತ್ತು.

ಮಾರ್ಚ್ 30 ರಂದು ನಡೆದ ಕಾರ್ಯಕ್ರಮದ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ . ಗುಪ್ತಚರ ಸಂಸ್ಥೆಗಳಿಂದ ತೀವ್ರ  ಕೋಮುವಾದಿ ಎಂದು ಕರೆಯಲ್ಪಟ್ಟ ಸಂಘಟನೆಯ ಸದಸ್ಯರಿಗೆ ತರಬೇತಿಯನ್ನು ನೀಡಿದ್ದಕ್ಕಾಗಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಇಲಾಖೆ ಟೀಕೆಗೆ ಗುರಿಯಾಗಿದೆ. ವರದಿಯಲ್ಲಿ ಹೆಸರಿಸಲಾದ ಅಧಿಕಾರಿಗಳನ್ನು ಅಮಾನತುಗೊಳಿಸುವ ಸಾಧ್ಯತೆಯಿದೆ ಮತ್ತು ಅವರ ವಿರುದ್ಧ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಬಲ್ಲಮೂಲಗಳು ಹೇಳಿವೆ.

ಇತ್ತೀಚೆಗಷ್ಟೇ ಪಿಎಫ್‌ಐ ಮುಖ್ಯವಾಹಿನಿ ಸಮಾಜದಲ್ಲಿ ತಮ್ಮನ್ನು ಒಪ್ಪಿಕೊಳ್ಳುವಂತೆ ಮಾಡಲು ಪ್ರಯತ್ನಿಸುತ್ತಿದೆ ಎಂದು ರಾಜ್ಯ ಪೊಲೀಸ್ ಮೂಲಗಳು ತಿಳಿಸಿವೆ. ತರಬೇತಿಯ ಸುದ್ದಿ ಹೊರಬಿದ್ದ ನಂತರ ಸರ್ಕಾರದ ವಿರುದ್ಧ ಬಿಜೆಪಿ ಕಟು ಟೀಕೆಗಳನ್ನು ಮಾಡಿತ್ತು.  ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವುದರಿಂದ ಜಿಹಾದಿ ಶಕ್ತಿಗಳಿಗೆ ಸರ್ಕಾರ ರೆಡ್ ಕಾರ್ಪೆಟ್ ನೀಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ.

ತನ್ನ ಕೋಮು ಧ್ರುವೀಕರಣ ತಂತ್ರದ ಭಾಗವಾಗಿ ಸಂಘ ಶಕ್ತಿಗಳು ಪಿಎಫ್ಐ ವಿರುದ್ಧ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿವೆ ಎಂದು ಪಿಎಫ್ಐ ಹೇಳಿಕೆ ನೀಡಿದೆ.

ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿಗಳು ವಿಪತ್ತಿನ ಸಂದರ್ಭದಲ್ಲಿ ವಿವಿಧ ಕಾರ್ಯಾಚರಣೆಗಳನ್ನು ಹೇಗೆ ಕೈಗೊಳ್ಳಬೇಕು ಎಂಬ ತರಬೇತಿಯನ್ನು ಬಿಜೆಪಿಯು ಘೋರ ಅಪರಾಧವೆಂದು ಪರಿಗಣಿಸುತ್ತಿದೆ ಎಂದು ಪಿಎಫ್‌ಐ ಪದಾಧಿಕಾರಿಗಳು ಹೇಳಿದರು. ಪಿಎಫ್ಐ ಯಾವಾಗಲೂ ವಿವಿಧ ವಿಪತ್ತುಗಳ ಸಂದರ್ಭದಲ್ಲಿ ಪರಿಹಾರ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದೆ ಮತ್ತು ಅದರ ಪ್ರಯತ್ನಗಳಿಗಾಗಿ ಗುರುತಿಸಲ್ಪಟ್ಟಿದೆ. ಪೊಲೀಸ್ ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು ಇಂತಹ ವಿಪತ್ತುಗಳ ಸಮಯದಲ್ಲಿ ಸಾರ್ವಜನಿಕರನ್ನು ಸಜ್ಜುಗೊಳಿಸಲು ತರಬೇತಿ ನೀಡಬೇಕಾಗಿದೆ. ಅಂತಹ ಸೇವೆಯನ್ನು ಪಿಎಫ್‌ಐ ಸಹ ಬಳಸಿಕೊಂಡಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಾಶ್ಮೀರಿ ಪಂಡಿತರು ವಾಪಸ್ ಬಂದರೆ ಅವರನ್ನು ಯಾರೂ ಸ್ಥಳಾಂತರ ಮಾಡುವುದಿಲ್ಲ: ಮೋಹನ್ ಭಾಗವತ್

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ