AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಪ್ಯುಲರ್ ಫ್ರಂಟ್ ಆಫ್​ ಇಂಡಿಯಾ ಸದಸ್ಯರಿಗೆ ತರಬೇತಿ ನೀಡಿದ ಕೇರಳ ಫೈರ್ ಫೋರ್ಸ್ !​​; ವಿವಾದಕ್ಕೆ ಕಾರಣವಾದ ಫೋಟೋಗಳು

ಫೋಟೋಗಳು ವೈರಲ್ ಆಗುತ್ತಿದ್ದಂತೆ ಈ ಬಗ್ಗೆ ಕೇರಳ ಸರ್ಕಾರ, ಅಗ್ನಿ ಶಾಮಕ ದಳದ ಡಿಜಿಪಿ ಬಿ.ಸಂಧ್ಯಾ ಅವರ ಬಳಿ ವರದಿ ಕೇಳಿತ್ತು. ಅಂತೆಯೇ ವರದಿ ಸಲ್ಲಿಸಿದ ಸಂಧ್ಯಾ,  ಇದು ನಿಜಕ್ಕೂ ಫೈರ್ ಫೋರ್ಸ್​ ಕಡೆಯಿಂದ ಆದ ಬಹುದೊಡ್ಡ ತಪ್ಪು ಎಂದಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್​ ಇಂಡಿಯಾ ಸದಸ್ಯರಿಗೆ ತರಬೇತಿ ನೀಡಿದ ಕೇರಳ ಫೈರ್ ಫೋರ್ಸ್ !​​; ವಿವಾದಕ್ಕೆ ಕಾರಣವಾದ ಫೋಟೋಗಳು
ವೈರಲ್ ಆದ ಫೋಟೋ
TV9 Web
| Edited By: |

Updated on: Apr 02, 2022 | 4:18 PM

Share

ಭಾರತದ ಇಸ್ಲಾಮಿಕ್​ ಉಗ್ರಗಾಮಿ ಸಂಘಟನೆಯೆನಿಸಿಕೊಂಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರಿಗೆ ಕೇರಳದ ಅಗ್ನಿಶಾಮಕ ದಳದ ಸಿಬ್ಬಂದಿ ತರಬೇತಿ ನೀಡುತ್ತಿರುವ ವಿಡಿಯೋ, ಫೋಟೋಗಳು ಕಳೆದವಾರದಿಂದ ಭರ್ಜರಿ ವೈರಲ್ ಆಗುತ್ತಿದ್ದು, ವಿವಾದ ಸೃಷ್ಟಿಸಿದೆ. ಇದು ಕೋಝಿಕ್ಕೋಡ್​​ನಲ್ಲಿ ನಡೆದದ್ದು ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಈ ಅಗ್ನಿಶಾಮಕದಳ ಸಿಬ್ಬಂದಿ ಶಾಲೆ ಮತ್ತಿತರ ಸಂಘ-ಸಂಸ್ಥೆಗಳಲ್ಲಿ ಈ ತರಬೇತಿ ಕಾರ್ಯ ಹಮ್ಮಿಕೊಳ್ಳುತ್ತಾರೆ. ಅಂದರೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಾಗ ಏನು ಮಾಡಬೇಕು? ಅದನ್ನು ಶಮನ ಮಾಡಲು, ಬೆಂಕಿಯಿಂದ ಪಾರಾಗಲು ಪ್ರಾಥಮಿಕವಾಗಿ ಏನೆಲ್ಲ ಕ್ರಮ ವಹಿಸಬೇಕು ಎಂಬಿತ್ಯಾದಿ ವಿಷಯಗಳ ಕುರಿತು ತರಬೇತಿಯಲ್ಲಿ ವಿವರಿಸಲಾಗುತ್ತದೆ. ಆದರೆ ಕೇರಳದಲ್ಲಿ ಪಿಎಫ್​ಐ ಕಾರ್ಯಕರ್ತರಿಗೆ ಈ ತರಬೇತಿ ನೀಡಿದ್ದು ಅನೇಕರ ಕೆಂಗಣ್ಣಿಗೆ ಗುರಿಯಾಗಿದೆ. ಪಿಎಫ್​ಐ ಎಂದು ಬರೆದಿರುವ ಅಂಗಿಯನ್ನು ಹಾಕಿಕೊಂಡಿರುವ ಅನೇಕರು ಕುರ್ಚಿಯ ಮೇಲೆ ಕುಳಿತಿದ್ದರೆ, ಅಗ್ನಿಶಾಮಕದಳದ ಸಿಬ್ಬಂದಿ ವೇದಿಕೆಯಲ್ಲಿ ನಿಂತು ಅವರಿಗೆ ಪರಿಹಾರ ಕ್ರಮಗಳ ಬಗ್ಗೆ ವಿವರಿಸಿ, ತರಬೇತಿ ನೀಡಿದ್ದಾರೆ.

ಈ ಬಗ್ಗೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್​ ಟ್ವೀಟ್ ಮಾಡಿ, ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಿಎಫ್​ಐ ಮತ್ತು ಎಸ್​ಡಿಪಿಐ ಸಂಘಟನೆಗಳು ವಿವಿಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿವೆ. ಆದರೆ ಇಂಥ ಜಿಹಾದಿ ಹೋರಾಟಗಾರರಿಗೆ ಕೇರಳ  ಪಿಣರಾಯಿ ವಿಜಯನ್ ಸರ್ಕಾರ ರೆಡ್​ಕಾರ್ಪೆಟ್​ ಹಾಸುತ್ತಿದೆ. ಕೇರಳದ ಅಗ್ನಿಶಾಮಕ ಮತ್ತು ರಕ್ಷಣಾ ದಳಗಳಿಂದ ಪಿಎಫ್​ಐ ಸಂಘಟನೆ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ ಎಂದು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಗೃಹ ಸಚಿವ ಅಮಿತ್​ ಶಾ ಅವರನ್ನೂ ಟ್ಯಾಗ್ ಮಾಡಿದ್ದಾರೆ.

ಫೋಟೋಗಳು ವೈರಲ್ ಆಗುತ್ತಿದ್ದಂತೆ ಈ ಬಗ್ಗೆ ಕೇರಳ ಸರ್ಕಾರ, ಅಗ್ನಿ ಶಾಮಕ ದಳದ ಡಿಜಿಪಿ ಬಿ.ಸಂಧ್ಯಾ ಅವರ ಬಳಿ ವರದಿ ಕೇಳಿತ್ತು. ಅಂತೆಯೇ ವರದಿ ಸಲ್ಲಿಸಿದ ಸಂಧ್ಯಾ,  ಇದು ನಿಜಕ್ಕೂ ಫೈರ್ ಫೋರ್ಸ್​ ಕಡೆಯಿಂದ ಆದ ಬಹುದೊಡ್ಡ ತಪ್ಪು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಹಾಗೇ, ತರಬೇತಿಯಲ್ಲಿ ಭಾಗಿಯಾದ ಅಧಿಕಾರಗಳ ಬಗ್ಗೆ ಸ್ಪಷ್ಟನೆ ಕೇಳಿದಾಗ, ಕೊಝಿಕ್ಕೊಡ್​​ನಲ್ಲಿ ಪಿಎಫ್​​ಐನಿಂದ ಒಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದಕ್ಕೆ ನಮ್ಮನ್ನು ಆಹ್ವಾನಿಸಲಾಗಿತ್ತು. ಆ ಕಾರ್ಯಕ್ರಮಕ್ಕೆ ಹೋದಾಗ ವೇದಿಕೆ ಮೇಲೆ ಮಾತನಾಡಿದ್ದೇವೆ. ಬೆಂಕಿ ಬಿದ್ದಾಗ ತೆಗೆದುಕೊಳ್ಳಬಹುದಾದ ಕೆಲವು ಟಿಪ್ಸ್​​ಗಳನ್ನು ನೀಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಪಿಎಫ್​ಐ ಒಂದು ಮೂಲಭೂತವಾದಿಗಳ ಸಂಘಟನೆಯಾಗಿದ್ದು, 2006ರಲ್ಲಿ ಸ್ಥಾಪನೆಗೊಂಡಿದೆ. ಇದು ಕೇರಳ ಮತ್ತು ಹಲವು ರಾಜ್ಯಗಳಲ್ಲಿ ಸಕ್ರಿಯವಾಗಿದೆ. ಇತ್ತೀಚೆಗೆ ನಡೆಯುತ್ತಿರುವ ಹಿಜಾಬ್​ ವಿವಾದ ಸೇರಿ, ಹಲವು ವಿಚಾರಗಳಲ್ಲಿ ಪಿಎಫ್​ಐ ಕೈವಾಡವಿದೆ. ಇದು ಸಮಾಜದಲ್ಲಿ ಅಸ್ಥಿರತೆ ಉಂಟು ಮಾಡುವ ಸಂಘಟನೆಯಾಗಿದೆ ಎಂಬ ಆರೋಪವಿದೆ. ಸೋಶಿಯಲ್ ಡೆಮಾಕ್ರಟಿಕ್​ ಫ್ರಂಟ್​ ಆಫ್​ ಇಂಡಿಯಾ ಎಂಬುದು ಪಿಎಫ್​ಐನ ರಾಜಕೀಯ ವಿಭಾಗವಾಗಿದ್ದು, ಕಳೆದ ವಾರ ಇಡುಕ್ಕಿಯ ಪೊಲೀಸ್ ಸಿಬ್ಬಂದಿಯೊಬ್ಬ, ಪೊಲೀಸ್​ ಡಾಟಾಬೇಸ್​​ನ ಮಹತ್ವದ ಸಂಗತಿಗಳನ್ನು ಎಸ್​ಡಿಪಿಐನೊಟ್ಟಿಗೆ ಹಂಚಿಕೊಂಡಿದ್ದಕ್ಕೆ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು.

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದವಳ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆ ಯತ್ನ; 26 ದಿನಗಳ ಹೋರಾಟದ ಬಳಿಕ ಪ್ರಾಣಬಿಟ್ಟ ಮಹಿಳೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್