AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ವಿಡಿಯೊ | ಬಲೆಗೆ ಬಿದ್ದ ಶಾರ್ಕ್ ಮೀನನ್ನು ಮತ್ತೆ ಸಮುದ್ರಕ್ಕೆ ಸೇರಿಸಿದ ಮೀನುಗಾರರು

ಕೇರಳದ ಶಂಖುಮುಖಂ ಕಡಲ ಕಿನಾರೆಯಲ್ಲಿ ಮೀನುಗಾರರ ಬಲೆಗೆ ಸಿಕ್ಕಿ ಬಿದ್ದಿದ್ದ ಶಾರ್ಕ್​ವೊಂದನ್ನು ರಕ್ಷಿಸಿ ಪ್ರಾಣ ಉಳಿಸಿದ ಘಟನೆ ಡಿ.4ರಂದು ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ವಿಡಿಯೊ | ಬಲೆಗೆ ಬಿದ್ದ ಶಾರ್ಕ್ ಮೀನನ್ನು ಮತ್ತೆ ಸಮುದ್ರಕ್ಕೆ ಸೇರಿಸಿದ ಮೀನುಗಾರರು
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 06, 2020 | 2:24 PM

Share

ಕೊಚ್ಚಿ: ಹವಾಮಾನ ವೈಪರೀತ್ಯದಿಂದಾಗಿ ದಿನೇದಿನೇ ತಾಪಮಾನ ವ್ಯತ್ಯಾಸ ಉಂಟಾಗುತ್ತಿದೆ. ಇದರಿಂದ ಸಮುದ್ರಗಳಲ್ಲಿ ಕಂಡುಬರುತ್ತಿದ್ದ ಶಾರ್ಕ್ ಮೀನಿನ ಪ್ರಭೇದಗಳು ಅಲ್ಲೋ ಇಲ್ಲೋ ಎಂಬಂತಾಗಿದೆ. ಮೀನುಗಾರರ ಬಲೆಗೆ ಸಿಕ್ಕಿ ಅನೇಕ ಶಾರ್ಕ್ ಮೀನು ಬಲಿಯಾಗಿವೆ.

ಕೇರಳದ ಶಂಖುಮುಖಂ ಕಡಲ ಕಿನಾರೆಯಲ್ಲಿ ಮೀನುಗಾರರ ಬಲೆಗೆ ಸಿಕ್ಕಿ ಬಿದ್ದಿದ್ದ ಶಾರ್ಕ್​ವೊಂದನ್ನು ರಕ್ಷಿಸಿ ಪ್ರಾಣ ಉಳಿಸಿದ ಘಟನೆ ಡಿಸೆಂಬರ್ 4ರಂದು ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆದ ವಿಡಿಯೋ ಒಂದೂವರೆ ನಿಮಿಷದಷ್ಟಿದೆ. ಬಲೆಯಿಂದ ಶಾರ್ಕ್ ಮೀನನ್ನು ಹೊರತೆಗೆದು ಸಮುದ್ರಕ್ಕೆ ಮರಳಿಸಿದ ಘಟನೆಯನ್ನು ವಿಡಿಯೋದಲ್ಲಿ ನೋಡಬಹುದು.

ಮೀನುಗಾರರ ಗುಂಪಿನಲ್ಲಿ ಸುಮಾರು 60 ಜನರು ಸೇರಿದ್ದಾರೆ. ಬಲೆಯಿಂದ ಶಾರ್ಕ್ ಮೀನು ಹೊರತೆಗೆದು ಹಗ್ಗದ ಸಹಾಯದಿಂದ ಮರಳಿ ತನ್ನ ವಾಸಸ್ಥಾನಕ್ಕೆ ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು ಮೀನುಗಾರರು ಪ್ರಶಂಸೆಗಿಟ್ಟಿಸಿಕೊಂಡಿದ್ದಾರೆ.

ಮೀನುಗಾರರ ಪರಿಶ್ರಮವನ್ನು ಅಭಿನಂದಿಸಿರುವ ವನ್ಯಜೀವಿ ಸಂರಕ್ಷಣೆಗಾಗಿ ದುಡಿಯುತ್ತಿರುವ ವೈಲ್ಡ್​ಲೈಫ್​ ಟ್ರಸ್ಟ್​ ಇಂಡಿಯಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿವೇಕ್ ಮೆನನ್​ ಈ ಮೀನುಗಾರರಿಗೆ ವಿಶೇಷ ಪ್ರಶಸ್ತಿ ಘೋಷಿಸಿದ್ದಾರೆ.

ಕೇರಳದ ವನ್ಯಜೀವಿ ಸಂರಕ್ಷಣಾ ಅಧಿಕಾರಿಗಳು ಈ ಕಾರ್ಯವನ್ನು ಶ್ಲಾಘಿಸಿದ್ದಾರೆ.

Published On - 2:23 pm, Sun, 6 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ