AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ವಿಡಿಯೊ | ಬಲೆಗೆ ಬಿದ್ದ ಶಾರ್ಕ್ ಮೀನನ್ನು ಮತ್ತೆ ಸಮುದ್ರಕ್ಕೆ ಸೇರಿಸಿದ ಮೀನುಗಾರರು

ಕೇರಳದ ಶಂಖುಮುಖಂ ಕಡಲ ಕಿನಾರೆಯಲ್ಲಿ ಮೀನುಗಾರರ ಬಲೆಗೆ ಸಿಕ್ಕಿ ಬಿದ್ದಿದ್ದ ಶಾರ್ಕ್​ವೊಂದನ್ನು ರಕ್ಷಿಸಿ ಪ್ರಾಣ ಉಳಿಸಿದ ಘಟನೆ ಡಿ.4ರಂದು ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ವಿಡಿಯೊ | ಬಲೆಗೆ ಬಿದ್ದ ಶಾರ್ಕ್ ಮೀನನ್ನು ಮತ್ತೆ ಸಮುದ್ರಕ್ಕೆ ಸೇರಿಸಿದ ಮೀನುಗಾರರು
shruti hegde
| Edited By: |

Updated on:Dec 06, 2020 | 2:24 PM

Share

ಕೊಚ್ಚಿ: ಹವಾಮಾನ ವೈಪರೀತ್ಯದಿಂದಾಗಿ ದಿನೇದಿನೇ ತಾಪಮಾನ ವ್ಯತ್ಯಾಸ ಉಂಟಾಗುತ್ತಿದೆ. ಇದರಿಂದ ಸಮುದ್ರಗಳಲ್ಲಿ ಕಂಡುಬರುತ್ತಿದ್ದ ಶಾರ್ಕ್ ಮೀನಿನ ಪ್ರಭೇದಗಳು ಅಲ್ಲೋ ಇಲ್ಲೋ ಎಂಬಂತಾಗಿದೆ. ಮೀನುಗಾರರ ಬಲೆಗೆ ಸಿಕ್ಕಿ ಅನೇಕ ಶಾರ್ಕ್ ಮೀನು ಬಲಿಯಾಗಿವೆ.

ಕೇರಳದ ಶಂಖುಮುಖಂ ಕಡಲ ಕಿನಾರೆಯಲ್ಲಿ ಮೀನುಗಾರರ ಬಲೆಗೆ ಸಿಕ್ಕಿ ಬಿದ್ದಿದ್ದ ಶಾರ್ಕ್​ವೊಂದನ್ನು ರಕ್ಷಿಸಿ ಪ್ರಾಣ ಉಳಿಸಿದ ಘಟನೆ ಡಿಸೆಂಬರ್ 4ರಂದು ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆದ ವಿಡಿಯೋ ಒಂದೂವರೆ ನಿಮಿಷದಷ್ಟಿದೆ. ಬಲೆಯಿಂದ ಶಾರ್ಕ್ ಮೀನನ್ನು ಹೊರತೆಗೆದು ಸಮುದ್ರಕ್ಕೆ ಮರಳಿಸಿದ ಘಟನೆಯನ್ನು ವಿಡಿಯೋದಲ್ಲಿ ನೋಡಬಹುದು.

ಮೀನುಗಾರರ ಗುಂಪಿನಲ್ಲಿ ಸುಮಾರು 60 ಜನರು ಸೇರಿದ್ದಾರೆ. ಬಲೆಯಿಂದ ಶಾರ್ಕ್ ಮೀನು ಹೊರತೆಗೆದು ಹಗ್ಗದ ಸಹಾಯದಿಂದ ಮರಳಿ ತನ್ನ ವಾಸಸ್ಥಾನಕ್ಕೆ ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು ಮೀನುಗಾರರು ಪ್ರಶಂಸೆಗಿಟ್ಟಿಸಿಕೊಂಡಿದ್ದಾರೆ.

ಮೀನುಗಾರರ ಪರಿಶ್ರಮವನ್ನು ಅಭಿನಂದಿಸಿರುವ ವನ್ಯಜೀವಿ ಸಂರಕ್ಷಣೆಗಾಗಿ ದುಡಿಯುತ್ತಿರುವ ವೈಲ್ಡ್​ಲೈಫ್​ ಟ್ರಸ್ಟ್​ ಇಂಡಿಯಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿವೇಕ್ ಮೆನನ್​ ಈ ಮೀನುಗಾರರಿಗೆ ವಿಶೇಷ ಪ್ರಶಸ್ತಿ ಘೋಷಿಸಿದ್ದಾರೆ.

ಕೇರಳದ ವನ್ಯಜೀವಿ ಸಂರಕ್ಷಣಾ ಅಧಿಕಾರಿಗಳು ಈ ಕಾರ್ಯವನ್ನು ಶ್ಲಾಘಿಸಿದ್ದಾರೆ.

Published On - 2:23 pm, Sun, 6 December 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ