Kerala Gold Smuggling Case: ತನಿಖಾ ಸಂಸ್ಥೆ ನಮ್ಮ ಪರವಾದ ಸಾಕ್ಷ್ಯಗಳನ್ನು ಡಿಲೀಟ್ ಮಾಡಿದೆ; ಸ್ವಪ್ನಾ ಸುರೇಶ್ ಆರೋಪ

2020ರ ಜುಲೈ 5ರಂದು ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಕೇಂದ್ರೀಯ ಮಂಡಳಿಯು 14.82 ಕೋಟಿ ರೂ. ಮೌಲ್ಯದ 30 ಕೆಜಿಗಳಷ್ಟು 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಂಡಿದೆ.

Kerala Gold Smuggling Case: ತನಿಖಾ ಸಂಸ್ಥೆ ನಮ್ಮ ಪರವಾದ ಸಾಕ್ಷ್ಯಗಳನ್ನು ಡಿಲೀಟ್ ಮಾಡಿದೆ; ಸ್ವಪ್ನಾ ಸುರೇಶ್ ಆರೋಪ
ಸ್ವಪ್ನಾ ಸುರೇಶ್Image Credit source: NDTV
Follow us
| Updated By: ಸುಷ್ಮಾ ಚಕ್ರೆ

Updated on: Jul 23, 2022 | 8:33 AM

ತಿರುವನಂತಪುರಂ: ಕೇರಳ ಪೊಲೀಸ್ ಇಲಾಖೆಯ ಎನ್‌ಐಎ (NIA) ಅಧಿಕಾರಿಗಳು ತಮ್ಮ ಪರವಾದ ಸಾಕ್ಷಿಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ಕೇರಳದ ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ (Kerala Gold Smuggling Case) ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ (Swapna Suresh) ಆರೋಪಿಸಿದ್ದಾರೆ. ಕೇರಳದ ಮಾಜಿ ಸಚಿವ ಮತ್ತು ಹಾಲಿ ಶಾಸಕ ಕೆ.ಟಿ. ಜಲೀಲ್ ತಮಗೆ ಬೇಕಾದ್ದನ್ನು ಮಾಡಲು ಯಾವ ಹಂತಕ್ಕೆ ಬೇಕಾದರೂ ಇಳಿಯಬಹುದು ಎಂದು ಸ್ವಪ್ನಾ ಸುರೇಶ್ ಹೇಳಿದ್ದಾರೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿರುವ ಸ್ವಪ್ನಾ ಸುರೇಶ್, ಮಾಜಿ ಸಚಿವ ಕೆಟಿ ಜಲೀಲ್ ನಾವು ಮಾಡಿದ ಯಾವುದೇ ಆರೋಪಗಳನ್ನು ನಿರಾಕರಿಸಲು ಸಾಧ್ಯವಿಲ್ಲ. ಇದು ಆರೋಪವಲ್ಲ. ಇದಕ್ಕೆ ಸಾಕ್ಷ್ಯಗಳು ಕೂಡ ಇದೆ. ಈ ಮಹಾಶಯರು ಯಾವುದೇ ಮಟ್ಟಕ್ಕೆ ಇಳಿಯಬಹುದು ಎಂಬುದನ್ನು ತೋರಿಸಲು ನಾನು ಇದನ್ನು ಅಫಿಡವಿಟ್‌ನಲ್ಲಿ ಸಾಕ್ಷಿಯಾಗಿ ಸೇರಿಸಿದ್ದೇನೆ. ಅವರು ಮಂತ್ರಿ ಅಥವಾ ಶಾಸಕರಾಗಿದ್ದರೂ ದಿನಪತ್ರಿಕೆ ಅಥವಾ ಪ್ರಕಾಶನ ಸಂಸ್ಥೆ ಮೇಲೆ ಹಾಗೂ ನನ್ನಂತಹ ಮಹಿಳೆಯ ಮೇಲೆ ದಾಳಿ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾರೆ.

“ಇದಕ್ಕೆ ಸಾಕ್ಷಿಗಳೂ ಇವೆ. ನಾನು ಆ ಅವಧಿಯಲ್ಲಿ ಕಾನ್ಸುಲ್ ಜನರಲ್‌ನ ಪಿಎ ಆಗಿ ಕೆಲಸ ಮಾಡಲಿಲ್ಲ. ನೀವು ದಿನಾಂಕವನ್ನು ನೋಡಿದರೆ ನಾನು ಕೇರಳ ಸರ್ಕಾರದ ಅಡಿಯಲ್ಲಿ ಸ್ಪೇಸ್‌ಪಾರ್ಕ್ ಯೋಜನೆಗಾಗಿ ಕೆಲಸ ಮಾಡುತ್ತಿದ್ದೆ ಎಂಬುದು ಗೊತ್ತಾಗುತ್ತದೆ ಎಂದು ಸ್ವಪ್ನಾ ಸುರೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: African Swine Fever: ಕೇರಳದ ವಯನಾಡಿನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; 300 ಹಂದಿಗಳನ್ನು ಕೊಲ್ಲಲು ಆದೇಶ

“ಈ ಬಗ್ಗೆ ನಾನು ಹೆಚ್ಚು ವಿಷಯಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ, ಏಕೆಂದರೆ ಇದು ನನ್ನ ಪ್ರಕರಣದ ಒಂದು ಭಾಗವಾಗಿದ್ದು, ಸದ್ಯಕ್ಕೆ ಅದರ ತನಿಖೆ ನಡೆಯುತ್ತಿದೆ. ಹಾಗಾಗಿ ನನಗೆ ಉಸಿರುಗಟ್ಟಿದಂತಾಗಿದೆ. ಆ ವ್ಯಕ್ತಿ ನನ್ನ ವಿರುದ್ಧ ನಕಲಿ ಪ್ರಕರಣಗಳನ್ನು ಸೃಷ್ಟಿಸಬಹುದು. ಹೆಚ್ಚಿನ ಸಾಕ್ಷಿಗಳನ್ನು ಈಗಾಗಲೇ ಡಿಲೀಟ್ ಮಾಡಲಾಗಿದ್ದು, ಇನ್ನಷ್ಟು ಸಾಕ್ಷ್ಯಗಳನ್ನು ಕಲೆಹಾಕಲು ನಾನು ಪ್ರಯತ್ನಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

2020ರ ಜುಲೈ 5ರಂದು ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಕೇಂದ್ರೀಯ ಮಂಡಳಿಯು 14.82 ಕೋಟಿ ರೂ. ಮೌಲ್ಯದ 30 ಕೆಜಿಗಳಷ್ಟು 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಂಡಿದೆ. ಅದನ್ನು ತಿರುವನಂತಪುರಂನಲ್ಲಿರುವ ಯುಎಇ ಕಾನ್ಸುಲೇಟ್‌ಗೆ ತಲುಪಿಸಲು ಉದ್ದೇಶಿಸಲಾಗಿತ್ತು.

ಇದನ್ನೂ ಓದಿ: Monkeypox in Kerala: ಕೇರಳದ ಮಲಪ್ಪುರಂನಲ್ಲಿ 3ನೇ ಮಂಕಿಪಾಕ್ಸ್​ ಪ್ರಕರಣ ಪತ್ತೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ಎಂ. ಶಿವಶಂಕರ್‌ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಯ ಆರೋಪಿಗಳಲ್ಲೊಬ್ಬರಾದ ಸ್ವಪ್ನಾ ಸುರೇಶ್‌ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ದೃಢವಾಗಿತ್ತು. ನಂತರ ಅವರನ್ನು ಅಮಾನತುಗೊಳಿಸಲಾಗಿತ್ತು.

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು