AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Assembly Elections 2021: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಬರಿಮಲೆಯ ಆಚಾರಗಳನ್ನು ಕಾಪಾಡಲು ಕಾನೂನು ತರುತ್ತೇವೆ: ರಾಜನಾಥ್ ಸಿಂಗ್

Rajnath Singh in Kerala: . ಕೇರಳದಲ್ಲಿರುವ ಎಡಪಕ್ಷ ಸರ್ಕಾರ ವಿರುದ್ಧ ಹರಿಹಾಯ್ದ ರಾಜನಾಥ್ ಸಿಂಗ್, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ಸಂಸ್ಥೆಯ ವಿರುದ್ಧವೇ ನ್ಯಾಯಾಂಗ ತನಿಖೆ ನಡೆಸಲು ಕೇರಳ ಸಚಿವ ಸಂಪುಟ ನಿರ್ಧರಿಸಿದೆ. ಈ ಮೂಲಕ ಕೇರಳ ಸರ್ಕಾರ ದೇಶದ ಒಕ್ಕೂಟ ವ್ಯವಸ್ಥೆಗೆ ಸವಾಲು ಹಾಕಿದೆ ಎಂದು ಹೇಳಿದ್ದಾರೆ.

Kerala Assembly Elections 2021: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಬರಿಮಲೆಯ ಆಚಾರಗಳನ್ನು ಕಾಪಾಡಲು ಕಾನೂನು ತರುತ್ತೇವೆ: ರಾಜನಾಥ್ ಸಿಂಗ್
ಕೇರಳದಲ್ಲಿ ರಾಜನಾಥ್ ಸಿಂಗ್ ಸುದ್ದಿಗೋಷ್ಠಿ (ಕೃಪೆ: ಸಿ.ಎನ್. ಅಶ್ವತ್ ನಾರಾಯಣ್ ಅವರ ಟ್ವಿಟರ್ ಖಾತೆ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 28, 2021 | 12:34 PM

Share

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಗಾಗಿ ಭಾನುವಾರ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಶಬರಿಮಲೆಯ ಸಂಪ್ರದಾಯ ಮತ್ತು ಆಚರಣೆಗಳನ್ನು ರಕ್ಷಿಸಲು ಕಾನೂನು ತರಲಾಗುವುದು. ಇದು ನಮ್ಮ ಪ್ರಮುಖ ನಿರ್ಧಾರಗಳಲ್ಲೊಂದು ಎಂದು ಹೇಳಿದ್ದಾರೆ. ಕೇರಳದಲ್ಲಿ ಎಲ್​ಡಿಎಫ್ ಮತ್ತು ಯುಡಿಎಫ್ ನಡುವೆ ರಾಜಕೀಯ ಪರ್ಯಾಯವೊಂದು ಬೇಕಿದೆ. ಬಿಜೆಪಿ ಅದನ್ನು ನೀಡಲಿದೆ. ಎಲ್​ಡಿಎಫ್ ಪೂರೈಸಿದ ಭರವಸೆಗಳ ಪಟ್ಟಿಯನ್ನು ನೀಡಬೇಕೇ ಹೊರತು ಹುಸಿ ಭರವಸೆಗಳನ್ನಲ್ಲ. ಪಿಣರಾಯಿ ವಿಜಯನ್ ನೇತೃತ್ವದಲ್ಲಿ 10 ಪಕ್ಷಗಳ ಗುಂಪು ಎಲ್​ಡಿಎಫ್ ಎಂದಿದ್ದಾರೆ ಸಿಂಗ್.

ಕೇರಳದಲ್ಲಿನ ರಾಜಕೀಯ ಹಿಂಸಾಚಾರಕ್ಕೆ ನಾವು ಅಂತ್ಯ ಕಾಣಿಸಲಿದ್ದೇವೆ. ಎಲ್​ಡಿಎಫ್ ಮತ್ತು ಯುಡಿಎಫ್ ಹೇಳುವುದೊಂದು ಮಾಡುವುದೊಂದು. ಜನರು ಅವರ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಕೇರಳದಲ್ಲಿರುವ ಎಡಪಕ್ಷ ಸರ್ಕಾರ ವಿರುದ್ಧ ಹರಿಹಾಯ್ದ ರಾಜನಾಥ್ ಸಿಂಗ್, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ಸಂಸ್ಥೆಯ ವಿರುದ್ಧವೇ ನ್ಯಾಯಾಂಗ ತನಿಖೆ ನಡೆಸಲು ಕೇರಳ ಸಚಿವ ಸಂಪುಟ ನಿರ್ಧರಿಸಿದೆ. ಈ ಮೂಲಕ ಕೇರಳ ಸರ್ಕಾರ ದೇಶದ ಒಕ್ಕೂಟ ವ್ಯವಸ್ಥೆಗೆ ಸವಾಲು ಹಾಕಿದೆ ಎಂದು ಹೇಳಿದ್ದಾರೆ.

ಕೇರಳದ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಹೇಳಿಕೆ ನೀಡುವಂತೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ಒತ್ತಾಯಿಸಲಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳ ವಿರುದ್ಧ ಕೇರಳ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಸ್ವಪ್ನಾ ಸುರೇಶ್ ಅವರದು ಎನ್ನಲಾಗಿರುವ ಧ್ವನಿ ತುಣುಕೊಂದನ್ನು ತನಿಖೆ ನಡೆಸುತ್ತಿರುವ ಕ್ರೈಂ ವಿಭಾಗದ ಪೊಲೀಸರ ವರದಿ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಉಲ್ಲೇಖಿಸಿ ಸಿಂಗ್ ಈ ಮಾತನ್ನು ಹೇಳಿದ್ದಾರೆ.

ಸಿಪಿಐ(ಎಂ) ನೇತೃತ್ವದ ಎಲ್​ಡಿಎಫ್ ಸರ್ಕಾರ ಮತ್ತು ಕಾಂಗ್ರೆಸ್ ನೇತೃತ್ವದ ವಿಪಕ್ಷ ಯುಡಿಎಫ್ ಕೇರಳದಲ್ಲಿ ಸೌಹಾರ್ದ ಪಂದ್ಯವನ್ನಾಡುತ್ತಿದೆ. ಕೇರಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿರುವಾಗ ಪಶ್ಚಿಮ ಬಂಗಾಳದಲ್ಲಿ ಈ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ.

ಎಲ್​ಡಿಎಫ್ ಅಥವಾ ಯುಡಿಎಫ್​ನ ಗೆಲುವು ಕೇರಳದ ಜನರ ಸೋಲಾಗಲಿದೆ. ಎಲ್​ಡಿಎಫ್ ಮತ್ತು ಯುಡಿಎಫ್​ನ ಸಮಯ ಮುಗಿದಿದೆ. ಈ ಎರಡೂ ಮೈತ್ರಿಕೂಟಗಳು ಕೇರಳದ ಜನರ ಹಂಬಲವನ್ನು ಅರ್ಥ ಮಾಡಿಕೊಂಡಿಲ್ಲ. ಜನ ಬದಲಾವಣೆ ಬಯಸುತ್ತಾರೆ. ಈ ಎರಡೂ ಪಕ್ಷಗಳು ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಚುನಾವಣಾ ಪ್ರಚಾರದ ನಂತರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಸಚಿವರು, ಮೀನುಗಾರರನ್ನು ಕೂಡಾ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ರೈತರಿಗೆ ವರ್ಷಕ್ಕೆ ₹6000 ಸಹಾಯಧನ ಸಿಗಲಿದೆ. ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮತ್ತು ಸಾಲ ನೀಡುವ ಮೂಲಕ ಮೋದಿ ಸರ್ಕಾರ ಸಹಾಯ ಮಾಡಲಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ( CAA) ಅನುಷ್ಠಾನಕ್ಕೆ ತರುವ ಮೂಲಕ ನಾವು ಜಾತಿ-ಧರ್ಮ ಭೇದವಿಲ್ಲದೆ ದೇಶದ ಪ್ರಜೆಗಳನ್ನು ಸಂರಕ್ಷಿಸುತ್ತೇವೆ ಎಂದು ಹೇಳಿದ ಸಿಂಗ್, ಸಂವಿಧಾನದ 370ನೇ ವಿಧಿ ರದ್ದು, ತ್ರಿವಳಿ ತಲಾಖ್ ರದ್ದು ಮತ್ತು ಸಿಎಎ ಅನುಷ್ಠಾನಕ್ಕೆ ತರುವುದಾಗಿ ನಾವು ಭರವಸೆ ನೀಡಿದ್ದೆವು. ಅದನ್ನು ಬಿಜೆಪಿ ಪೂರೈಸಿದೆ ಎಂದು ಅವರು ಹೇಳಿದ್ದಾರೆ.

140 ಸೀಟುಗಳಿರುವ ಕೇರಳ ವಿಧಾನಸಭೆಗೆ ಏಪ್ರಿಲ್ 6ರಂದು  ಚುನಾವಣೆ ನಡೆಯಲಿದ್ದು ಮೇ. 2ರಂದು  ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿKerala Assembly Elections 2021: ಕೇರಳದಲ್ಲಿ ಬಿಜೆಪಿ ಕಿಂಗ್ ಮೇಕರ್ ಆಗಲಿದೆ: ಇ.ಶ್ರೀಧರನ್ 

Kerala Assembly Elections 2021: ಕೇರಳದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು 35 ಸೀಟುಗಳು ಸಾಕು: ಕೆ.ಸುರೇಂದ್ರನ್

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!