AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಕ್ಕೆ 5 ಸಾವಿರ ಅಯ್ಯಪ್ಪ ಭಕ್ತರ ಭೇಟಿಗೆ ಹೈಕೋರ್ಟ್ ಅವಕಾಶ: ಕಷ್ಟ ಕಷ್ಟ ಎಂದ ಕೇರಳ ಸರ್ಕಾರ

ದಿನಕ್ಕೆ 5,000 ಜನರ ಭೇಟಿಗೆ ಅವಕಾಶ ನೀಡಲು ಕೇರಳ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ, ಕೊವಿಡ್​ 19 ಪರಿಸ್ಥಿತಿಯಲ್ಲಿ ಇಂತಹ ನಿಲುವು ತಳೆಯುವುದು ಸೂಕ್ತವಲ್ಲ ಎಂದು ಕೇರಳ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದೆ.

ದಿನಕ್ಕೆ 5 ಸಾವಿರ ಅಯ್ಯಪ್ಪ ಭಕ್ತರ ಭೇಟಿಗೆ ಹೈಕೋರ್ಟ್ ಅವಕಾಶ: ಕಷ್ಟ ಕಷ್ಟ ಎಂದ ಕೇರಳ ಸರ್ಕಾರ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Dec 24, 2020 | 2:59 PM

Share

ಕೊಚ್ಚಿ: ಸಂಕ್ರಾಂತಿ ಪೊಂಗಲ್ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಅಯ್ಯಪ್ಪನ ದರ್ಶನಕ್ಕೆ ಶಬರಿಮಲೆಗೆ ಆಗಮಿಸುವ ಭಕ್ತರನ್ನು ಗಮನದಲ್ಲಿರಿಸಿಕೊಂಡು ದಿನಕ್ಕೆ 5,000 ಜನರ ಭೇಟಿಗೆ ಅವಕಾಶ ನೀಡಿ, ಕೇರಳ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ, ಉಚ್ಛ ನ್ಯಾಯಾಲಯದ ಸದರಿ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ.

ಶಬರಿಮಲೆ ಭೇಟಿಗೆ ಭಕ್ತಾದಿಗಳಿಗೆ ಅವಕಾಶ ನೀಡುವ ಕುರಿತು ರಾಜ್ಯ ಸರ್ಕಾರ ಈಗಾಗಲೇ ಉನ್ನತ ಮಟ್ಟದ ಸಮಿತಿ ರಚಿಸಿದೆ. ಸಮಿತಿಯ ನಿರ್ಧಾರದ ಪ್ರಕಾರ ವಾರದ ದಿನಗಳಲ್ಲಿ 2,000 ಜನರಿಗೆ ಮತ್ತು ವಾರಾಂತ್ಯದಲ್ಲಿ 3,000 ಜನರಿಗೆ ದೇಗುಲ ಪ್ರವೇಶಿಸಲು ಅನುಮತಿ ನೀಡುವುದು ಸೂಕ್ತ. ಆದರೆ, ಹೈಕೋರ್ಟ್​ 5,000 ಜನರಿಗೆ ಅನುಮತಿ ನೀಡಿದೆ. ಕೊವಿಡ್​ 19 ಪರಿಸ್ಥಿತಿಯಲ್ಲಿ ಇಂತಹ ನಿಲುವು ತಳೆಯುವುದು ಸೂಕ್ತವಲ್ಲ ಎಂದು ಕೇರಳ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಒಮ್ಮೆಲೆ 5 ಸಾವಿರ ಜನರಿಗೆ ಅವಕಾಶ ನೀಡಿದರೆ ಅದು ಪೊಲೀಸ್​ ಅಧಿಕಾರಿಗಳು ಮತ್ತು ಆರೋಗ್ಯ ಕಾರ್ಯಕರ್ತರ ಮೇಲೆ ಹೆಚ್ಚುವರಿ ಒತ್ತಡ ಉಂಟು ಮಾಡುತ್ತದೆ. ಈ ದೃಷ್ಟಿಯಿಂದಲೇ ಡಿಸೆಂಬರ್​ 20ರಿಂದ ಜನವರಿ 14ರ ಅವಧಿಯಲ್ಲಿ ಭಕ್ತಾದಿಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಸಮಿತಿ ರಚಿಸಿ ಸೂಕ್ತ ನಿರ್ಧಾರ ಪ್ರಕಟಿಸಿತ್ತು. ಆದರೆ, ಈಗ ಹೈಕೋರ್ಟ್​ ಆದೇಶ ಇದಕ್ಕೆ ವ್ಯತಿರಿಕ್ತವಾಗಿದೆ ಎಂದು ತಿಳಿಸಿದೆ.

ಭಕ್ತಾದಿಗಳ ಪ್ರವೇಶಕ್ಕೆ ಅವಕಾಶ ನೀಡುವ ಮುನ್ನ ಪ್ರತಿಯೊಬ್ಬರ ತಪಾಸಣೆ ನಡೆಸಬೇಕು. ಸಾವಿರಾರು ಜನರು ಆಗಮಿಸಿದರೆ ತಪಾಸಣಾ ಪ್ರಕ್ರಿಯೆ ಒತ್ತಡವನ್ನು ಉಂಟು ಮಾಡುತ್ತದೆ. ಇನ್ನೊಂದೆಡೆ ಬ್ರಿಟನ್​ನಲ್ಲಿ ಕೊರೊನಾ ವೈರಸ್​ ರೂಪಾಂತರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾರತ-ಬ್ರಿಟನ್​ ನಡುವಿನ ವಿಮಾನಯಾನಕ್ಕೆ ನಿರ್ಬಂಧ ಹೇರಿದೆ.

ಇಂತಹ ವಿಷಮ ಪರಿಸ್ಥಿತಿಯಲ್ಲಿ ಅಪಾಯ ಮೈಮೇಲೆ ಎಳೆದುಕೊಳ್ಳುವುದು ಸರಿಯಲ್ಲ. ಆದ್ದರಿಂದ ಸರ್ವೋಚ್ಛ ನ್ಯಾಯಾಲಯ ಈ ಕೂಡಲೇ ಮಧ್ಯ ಪ್ರವೇಶಿಸಿ ಕೇರಳ ಸರ್ಕಾರದ ಮನವಿಯನ್ನು ಪುರಸ್ಕರಿಸಬೇಕು ಎಂದು ವಿನಂತಿಸಿಕೊಂಡಿದೆ.

ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ