ಕೊವಿಡ್​ 19ನಿಂದ ಮೃತಪಟ್ಟವರ ಕುಟುಂಬಕ್ಕೆ 5000 ರೂ. ಮಾಸಾಶನ ನೀಡಲಿದೆ ಕೇರಳ ಸರ್ಕಾರ; ಷರತ್ತು ಅನ್ವಯ

| Updated By: Lakshmi Hegde

Updated on: Oct 14, 2021 | 9:29 AM

ಕೇರಳದ ಬಿಪಿಎಲ್​ ಕುಟುಂಬಕ್ಕೆ ಸೇರಿದ ವ್ಯಕ್ತಿ ರಾಜ್ಯದ ಒಳಗೆ, ಹೊರಗೆ ಅಥವಾ ದೇಶದ ಹೊರಗೆ ಅಂದರೆ ಬೇರೆ ದೇಶದಲ್ಲಿ ಮೃತಪಟ್ಟರೂ ಅವರ ಕುಟುಂಬ ಈ ವಿಶೇಷ ಆರ್ಥಿಕ ನೆರವಿಗೆ ಒಳಪಡುತ್ತದೆ.

ಕೊವಿಡ್​ 19ನಿಂದ ಮೃತಪಟ್ಟವರ ಕುಟುಂಬಕ್ಕೆ 5000 ರೂ. ಮಾಸಾಶನ ನೀಡಲಿದೆ ಕೇರಳ ಸರ್ಕಾರ; ಷರತ್ತು ಅನ್ವಯ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​
Follow us on

ತಿರುವನಂತಪುರಂ: ಕೊವಿಡ್​ 19 ಸೋಂಕಿನಿಂದ (Covid 19 Virus) ಮೃತಪಟ್ಟವರ ಕುಟುಂಬಕ್ಕೆ ಪ್ರತಿ ತಿಂಗಳೂ ಹೆಚ್ಚುವರಿಯಾಗಿ 5 ಸಾವಿರ ರೂ. ನೀಡಲು ಕೇರಳ ಸರ್ಕಾರ ನೀಡಿದೆ. ಈ ನೆರವನ್ನು ಮೂರು ವರ್ಷಗಳ ಕಾಲ ನೀಡಲು ಕೇರಳ ರಾಜ್ಯ ಸರ್ಕಾನ ನಿರ್ಧರಿಸಿದ್ದು, ಇದು ಬಡತನ ರೇಖೆಗಿಂತ ಕೆಳಗೆ ((BPL) ಇರುವ ಕುಟುಂಬಗಳಿಗೆ ಮಾತ್ರ ಅನ್ವಯ ಆಗಲಿದೆ. ಬುಧವಾರ ಟ್ವೀಟ್​ ಮಾಡಿರುವ ಕೇರಳ ಸಚಿವ ಥಾಮಸ್​ ಐಸಾಕ್​​,  ಕೊವಿಡ್​ 19ನಿಂದ ಸತ್ತವರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ  50 ಸಾವಿರ ರೂ.ವಿಶೇಷ ನೆರವು ನೀಡಲಾಗುತ್ತಿದೆ. ಈಗ ಅದರೊಂದಿಗೆ ಕೇರಳದಲ್ಲಿ ಕೊವಿಡ್​ 19 ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಿಂಗಳಿಗೆ 5 ಸಾವಿರ ರೂ.ಮಾಸಾಶನ ಹೆಚ್ಚುವರಿಯಾಗಿ ಕೊಡಲು ನಿರ್ಧರಿಸಲಾಗಿದೆ. ಇದು ಬಿಪಿಎಲ್​ ಕುಟುಂಬಗಳಿಗೆ ಮಾತ್ರ ಅನ್ವಯ ಆಗಲಿದೆ ಮತ್ತು ಮುಂದಿನ ಮೂರು ವರ್ಷಗಳ ಕಾಲ ನೀಡಲ್ಪಡುತ್ತದೆ ಎಂದು ತಿಳಿಸಿದ್ದಾರೆ.  

ಕೊವಿಡ್​ 19 ನಿಂದ ಮೃತಪಟ್ಟವರ ಕುಟುಂಬಕ್ಕೆ 50 ಸಾವಿರ ರೂ.ನೀಡುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ಘೋಷಿಸಿದೆ. ಇದೀಗ ಕೇರಳದಲ್ಲಿ ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಲ್ಲಿ ಯಾರಾದರೂ ಕೊರೊನಾದಿಂದ ಸತ್ತರೆ, ಅವರನ್ನು ಅವಲಂಬಿಸಿಕೊಂಡಿರುವ ಕುಟುಂಬದ ಸದಸ್ಯರಿಗೆ ತಿಂಗಳಿಗೆ 5 ಸಾವಿರ ರೂಪಾಯಿ ನೀಡಲಾಗುವುದು. ಅಂಥವರು ಈಗಾಗಲೇ ಬೇರೆ ಕೆಲವು ಸಾಮಾಜಿಕ ಕಲ್ಯಾಣ, ಕಲ್ಯಾಣ ನಿಧಿ ಮತ್ತಿತರ ಪಿಂಚಣಿ ವ್ಯವಸ್ಥೆಗೆ ಒಳಪಟ್ಟಿದ್ದರೂ ಕೂಡ ಈ ಯೋಜನೆಯಿಂದ ವಂಚಿತರಾಗುವುದಿಲ್ಲ. ಅಷ್ಟೇ ಅಲ್ಲ, ಕೇರಳದ ಬಿಪಿಎಲ್​ ಕುಟುಂಬಕ್ಕೆ ಸೇರಿದ ವ್ಯಕ್ತಿ ರಾಜ್ಯದ ಒಳಗೆ, ಹೊರಗೆ ಅಥವಾ ದೇಶದ ಹೊರಗೆ ಅಂದರೆ ಬೇರೆ ದೇಶದಲ್ಲಿ ಮೃತಪಟ್ಟರೂ ಅವರ ಕುಟುಂಬ ಈ ವಿಶೇಷ ಆರ್ಥಿಕ ನೆರವಿಗೆ ಒಳಪಡುತ್ತದೆ ಎಂದು ಕ್ಯಾಬಿನೆಟ್​​ನಲ್ಲಿ ನಿರ್ಧಾರ ತೆಗೆದುಕೊಂಡಿದ್ದಾಗಿ ಕೇರಳ ಮುಖ್ಯಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.

ಹಾಗೇ, ಬುಧವಾರ ನಡೆದ ಕೇರಳ ಕ್ಯಾಬಿನೆಟ್​ನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಯೋಜನೆಗೆ ಅರ್ಹರಾದವರು ಒಂದು ಪುಟದ ಅರ್ಜಿ ತುಂಬಿ ಸಲ್ಲಿಸಬೇಕಾಗುತ್ತದೆ. ಹಾಗೇ, ಇದಕ್ಕೆ ಸಂಬಂಧಪಟ್ಟ ಎಲ್ಲ ಕ್ರಮಗಳನ್ನೂ ಆಯಾ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ತೆಗೆದುಕೊಳ್ಳುತ್ತಾರೆ. ಇನ್ನು ಕೊವಿಡ್​ 19 ನಿಂದ ಮೃತಪಟ್ಟವರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗಿಗಳು ಮತ್ತು ತೆರಿಗೆ ತುಂಬುತ್ತಿರುವ ವ್ಯಕ್ತಿಗಳು ಇಲ್ಲವೆಂಬುದನ್ನು ಆಯಾ ಹಳ್ಳಿಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಖಚಿತಪಡಿಸಬೇಕು ಎಂಬಿತ್ಯಾದಿ ವಿಷಯಗಳನ್ನು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Viral News: ಬರೋಬ್ಬರಿ 60 ಕೆಜಿ ಚಿನ್ನದ ಆಭರಣ ತೊಟ್ಟು ಕಾರಿನಲ್ಲಿ ನಗುತ್ತಾ ಕುಳಿತ ವಧು!

ರಾಜಧಾನಿಯಲ್ಲಿ ಮುಂದುವರಿದ ಮಳೆ ಕಾಟ: ಮೆಜೆಸ್ಟಿಕ್ ಬಳಿ ಕೆಎಸ್ಆರ್​​ಟಿಸಿ ಬಸ್ ಮೇಲೆ ಬಿದ್ದ ಮರ

Published On - 9:07 am, Thu, 14 October 21