AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಎಫ್ಐ ಕಾರ್ಯಕರ್ತರ ಜತೆ ವಾಗ್ವಾದ ನಂತರ ಕೇರಳ ರಾಜ್ಯಪಾಲರಿಗೆ Z+ ಭದ್ರತೆ

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಗವರ್ನರ್ ಆರಿಫ್ ಮೊಹಮ್ಮದ್ ಖಾನ್ ತೆರಳುತ್ತಿದ್ದಾಗ ಎಸ್‌ಎಫ್‌ಐ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನು ನೋಡಿದ ರಾಜ್ಯಪಾಲರು ತಮ್ಮ ಕಾರಿನಿಂದ ಕೆಳಗಿಳಿದು ಆವೋ (ಬನ್ನಿ) ಎಂದು ಕೂಗುತ್ತಾ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಕಡೆಗೆ ನಡೆದು, ರಸ್ತೆಯಲ್ಲೇ ಕುಳಿತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಸ್ಎಫ್ಐ ಕಾರ್ಯಕರ್ತರ ಜತೆ ವಾಗ್ವಾದ ನಂತರ ಕೇರಳ ರಾಜ್ಯಪಾಲರಿಗೆ Z+ ಭದ್ರತೆ
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 27, 2024 | 3:59 PM

Share

ತಿರುವನಂತಪುರಂ ಜನವರಿ 27 : ಕೇರಳದ (Kerala) ಕೊಲ್ಲಂ ಜಿಲ್ಲೆಯಲ್ಲಿ ಎಸ್ಎಫ್ಐ (SFI) ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ್ದಕ್ಕೆ ಖಾನ್, ರಸ್ತೆಯಲ್ಲಿ ಕುಳಿತು ರಾಜ್ಯ ಸರ್ಕಾರ, ಪೊಲೀಸ್ ವ್ಯವಸ್ಥೆ ವಿರುದ್ಧ ಪ್ರತಿಭಟಿಸಿದ್ದರು. ಶನಿವಾರ ಬೆಳಗ್ಗೆ ನಡೆದ ಈ ಪ್ರತಿಭಟನೆ- ಆಕ್ರೋಶ ನಂತರ ಕೇಂದ್ರ ಸರ್ಕಾರ ಖಾನ್ ಅವರಿಗೆ Z+ ಭದ್ರತೆಯನ್ನು ನೀಡಿದೆ. “ಗೌರವಾನ್ವಿತ ಗವರ್ನರ್ ಮತ್ತು ಕೇರಳ ರಾಜಭವನಕ್ಕೆ ಸಿಆರ್‌ಪಿಎಫ್‌ನ Z+ ಭದ್ರತೆಯನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯವು ಕೇರಳ ರಾಜಭವನಕ್ಕೆ ತಿಳಿಸಿದೆ” ಎಂದು ರಾಜ್ಯಪಾಲರ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಗವರ್ನರ್ ಖಾನ್ ತೆರಳುತ್ತಿದ್ದಾಗ ಎಸ್‌ಎಫ್‌ಐ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಅವರನ್ನು ನೋಡಿದ ರಾಜ್ಯಪಾಲರು ತಮ್ಮ ಕಾರಿನಿಂದ ಕೆಳಗಿಳಿದು ಆವೋ (ಬನ್ನಿ) ಎಂದು ಕೂಗುತ್ತಾ ಪ್ರತಿಭಟನಾನಿರತ ವಿದ್ಯಾರ್ಥಿಗಳ ಕಡೆಗೆ ನಡೆದರು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯದಲ್ಲಿ ಕಾನೂನುಬಾಹಿರ ಕಾರ್ಯಗಳನ್ನು ಉತ್ತೇಜಿಸುತ್ತಿದ್ದಾರೆ ಎಂದು ರಾಜ್ಯಪಾಲರು ಆರೋಪಿಸಿದ್ದು, ಪ್ರತಿಭಟನಾಕಾರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೆ ರಸ್ತೆಬದಿಯಲ್ಲಿ ಕುಳಿತು ಅಧಿಕಾರಿಗಳ ಪ್ರತಿಕ್ರಿಯೆಗೆ ಅಸಮಾಧಾನ ವ್ಯಕ್ತಪಡಿಸಿದರು.

ತಾವು ಪ್ರತಿಭಟನೆ ನಡೆಸಿಲ್ಲ. ಸಿಪಿಐ(ಎಂ) ಸಂಘಟನೆಯ ಎಸ್‌ಎಫ್‌ಐ ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ನಾನು ಒತ್ತಾಯಿಸಿದ್ದು, ಪೊಲೀಸರು ಪ್ರಥಮ ಮಾಹಿತಿ ವರದಿಯ (ಎಫ್‌ಐಆರ್) ಪ್ರತಿಯನ್ನು ನೀಡಲು ಕಾಯುತ್ತಿದ್ದೆ  ಎಂದು  ರಾಜ್ಯಪಾಲ ಖಾನ್ ಹೇಳಿದ್ದಾರೆ.

ಪೊಲೀಸರು ಅಂತಿಮವಾಗಿ ಜಾಮೀನು ರಹಿತ ನಿಬಂಧನೆಗಳ ಅಡಿಯಲ್ಲಿ 17 ಎಸ್‌ಎಫ್‌ಐ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಪ್ರತಿಯನ್ನು ಹಾಜರುಪಡಿಸಿದ್ದು, ಇದಾದ ನಂತರವೇ ರಾಜ್ಯಪಾಲರು ಅಲ್ಲಿಂದ ಹೊರಟಿದ್ದಾರೆ.

ಘಟನೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಗವರ್ನರ್ ಖಾನ್, ಮುಖ್ಯಮಂತ್ರಿ ವಿಜಯನ್ ವಿರುದ್ಧ ತಮ್ಮ ಟೀಕೆಗಳನ್ನು ಮುಂದುವರೆಸಿದ್ದುರು ತಮ್ಮ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳಿರುವ ವ್ಯಕ್ತಿಗಳನ್ನು ರಕ್ಷಿಸಲು ಪೊಲೀಸರಿಗೆ ಸೂಚನೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಕೇರಳ: ಕೊಲ್ಲಂನಲ್ಲಿ ಎಸ್ಎಫ್ಐ ವಿರುದ್ಧ ರಸ್ತೆಯಲ್ಲಿ ಕುಳಿತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆಕ್ರೋಶ

ಎಸ್‌ಎಫ್‌ಐ ಸಂಘಟನೆಯ ರಾಜ್ಯಾಧ್ಯಕ್ಷ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಈ ಕಾನೂನು ಉಲ್ಲಂಘಿಸುವವರಿಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ನಿರ್ದೇಶನ ನೀಡುತ್ತಿರುವುದು ಅವರೇ(ಪಿಣರಾಯಿ ವಿಜಯನ್) ಎಂದು ರಾಜ್ಯಪಾಲ ಖಾನ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಗವರ್ನರ್ ಖಾನ್ ಮತ್ತು ಎಡ ಸರ್ಕಾರದ ನಡುವೆ ನಡೆಯುತ್ತಿರುವ ಸಂಘರ್ಷವು ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯನಿರ್ವಹಣೆ ಮತ್ತು ವಿಧಾನಸಭೆಯು ಅಂಗೀಕರಿಸಿದ ಕೆಲವು ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು ನಿರಾಕರಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಹಲವು ಭಿನ್ನಾಭಿಪ್ರಾಯಗಳಿಗೆ ಸಂಬಂಧಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Sat, 27 January 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ