AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಯಕ್ರಮದ ವೇಳೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಶಾಲಿಗೆ ತಗುಲಿದ ಬೆಂಕಿ

ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಅವರ ಶಾಲಿಗೆ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯ ವೈರಲ್ ಫೋಟೋಗಳು ಪಲಕ್ಕಾಡ್‌ನ ಶಬರಿ ಆಶ್ರಮದ 'ಶತಾಬ್ದಿ' ಸಮಾರೋಪ ಸಮಾರಂಭದಲ್ಲಿ ನಡೆದ ಸಮಾರಂಭದ್ದಾಗಿವೆ ಎನ್ನಲಾಗಿದೆ.

ಕಾರ್ಯಕ್ರಮದ ವೇಳೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಶಾಲಿಗೆ ತಗುಲಿದ ಬೆಂಕಿ
ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ಸುಷ್ಮಾ ಚಕ್ರೆ
|

Updated on: Oct 01, 2024 | 4:14 PM

Share

ಪಲಕ್ಕಾಡ್: ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಇಂದು (ಮಂಗಳವಾರ) ಪಲಕ್ಕಾಡ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೀಪ ಬೆಳಗಿಸುವಾಗ ಅವರ ಶಾಲಿಗೆ ಬೆಂಕಿ ತಗುಲಿದೆ. ಅದೃಷ್ಟವಶಾತ್ ಅವರು ಈ ಬೆಂಕಿ ಅವಘಡದಿಂದ ಪಾರಾಗಿದ್ದಾರೆ. ತಕ್ಷಣ ಆ ಬೆಂಕಿಯನ್ನು ಆರಿಸಲಾಯಿತು. ಅಧಿಕೃತ ಮೂಲಗಳ ಪ್ರಕಾರ, ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ದೀಪ ಬೆಳಗಿಸುವಾಗ ರಾಜ್ಯಪಾಲರು ಧರಿಸಿದ್ದ ಶಾಲಿಗೆ ಬೆಂಕಿ ಹೊತ್ತಿಕೊಂಡಿದೆ.

ಶಬರಿ ಆಶ್ರಮದ ‘ಶತಾಬ್ದಿ’ ಸಮಾರೋಪ ಸಮಾರಂಭದಲ್ಲಿ ದೀಪ ಬೆಳಗಿಸಲು ರಾಜ್ಯಪಾಲರು ಬಾಗುತ್ತಿದ್ದಂತೆ ಅವರ ಶಾಲಿನ ತುದಿಗೆ ಬೆಂಕಿ ಹೊತ್ತಿಕೊಂಡಿತು ಎಂದು ಮೂಲಗಳು ತಿಳಿಸಿವೆ. “ಸ್ಥಳದಲ್ಲೇ ಅದನ್ನು ಕೂಡಲೇ ನಂದಿಸಲಾಯಿತು. ಆದರೆ, ಯಾರಿಗೂ ಗಾಯಗಳಾಗಿಲ್ಲ” ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಥೈಲ್ಯಾಂಡ್​ನಲ್ಲಿ ಶಾಲಾ ಬಸ್​ಗೆ ಬೆಂಕಿ, 25 ವಿದ್ಯಾರ್ಥಿಗಳು ಸಾವು

ಮತ್ತೊಂದು ಅಗ್ನಿ ದುರಂತದಲ್ಲಿ ಸೋಮವಾರ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಚಲಿಸುತ್ತಿದ್ದ ಬೆಸ್ಟ್ ಬಸ್ ಬೆಂಕಿಗೆ ಆಹುತಿಯಾಗಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂರ್ವ ಮುಂಬೈನ ಗಾಂಧಿ ನಗರ ಜಂಕ್ಷನ್‌ನಲ್ಲಿ ಮಧ್ಯಾಹ್ನ 1.50ಕ್ಕೆ ಈ ಘಟನೆ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ 20 ನಿಮಿಷಗಳಲ್ಲಿ ಬೆಂಕಿಯನ್ನು ಆರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ