AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Govt Employees: ಕೇರಳದಲ್ಲಿ ಒಂದೇ ದಿನ ಬರೋಬ್ಬರಿ 11,801 ಸರ್ಕಾರಿ ನೌಕರರ ನಿವೃತ್ತಿ!

ದಾಖಲೆಯ 11,801 ಕೇರಳ ಸರ್ಕಾರಿ ಅಧಿಕಾರಿಗಳು (ನೌಕರರೂ ಒಳಗೊಂಡಂತೆ) (Kerala Govt Employees) ಬುಧವಾರ ನಿವೃತ್ತರಾಗುತ್ತಿದ್ದಾರೆ.

Kerala Govt Employees: ಕೇರಳದಲ್ಲಿ ಒಂದೇ ದಿನ ಬರೋಬ್ಬರಿ 11,801 ಸರ್ಕಾರಿ ನೌಕರರ ನಿವೃತ್ತಿ!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 31, 2023 | 3:33 PM

Share

ತಿರುವನಂತಪುರ: ದಾಖಲೆಯ 11,801 ಕೇರಳ ಸರ್ಕಾರಿ ಅಧಿಕಾರಿಗಳು (ನೌಕರರೂ ಒಳಗೊಂಡಂತೆ) (Kerala Govt Employees) ಬುಧವಾರ ನಿವೃತ್ತರಾಗುತ್ತಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ನೌಕರರು 56 ವರ್ಷಕ್ಕೆ ನಿವೃತ್ತರಾಗುತ್ತಾರೆ. ರಾಜ್ಯ ಸರ್ಕಾರಿ ಅಧಿಕಾರಿಗಳ ಒಟ್ಟು ಸಂಖ್ಯೆ ಸುಮಾರು 5 ಲಕ್ಷದಷ್ಟಿದೆ. ಜೂನ್​ನಲ್ಲಿ ಪ್ರಾರಂಭವಾಗುವ ಶೈಕ್ಷಣಿಕೆ ವರ್ಷದಲ್ಲಿ ಶಾಲಾ ದಾಖಲಾತಿ ಸಂದರ್ಭದಲ್ಲಿ ಪ್ರವೇಶ ಪಡೆಯಲು ಅನುವು ಮಾಡಿಕೊಡುವುದಕ್ಕಾಗಿ ಜನ್ಮ ದಿನಾಂಕವನ್ನು ಸರಿಹೊಂದಿಸಲಾಗಿದ್ದೇ ಇಷ್ಟೊಂದು ಸಂಖ್ಯೆಯಲ್ಲಿ ಅಧಿಕಾರಿಗಳು, ನೌಕರರು ಒಂದೇ ದಿನ ನಿವೃತ್ತರಾಗಲು ಮುಖ್ಯ ಕಾರಣ ಎನ್ನಲಾಗಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ನಿವೃತ್ತಿ ವಯಸ್ಸಿನ ವ್ಯಾಪ್ತಿಗೆ ಬರುವ ಸರ್ಕಾರಿ ಅಧಿಕಾರಿಗಳ ಒಟ್ಟು ಸಂಖ್ಯೆ 21,537 ಆಗಿದ್ದು, ಅವರಲ್ಲಿ 11,801 ಮಂದಿ ಇಂದು ಸಂಜೆ ನಿವೃತ್ತರಾಗುತ್ತಿದ್ದಾರೆ.

ನಿವೃತ್ತಿಯಾಗಲಿರುವವರಲ್ಲಿ ರಾಜ್ಯದ ಎರಡನೇ ಮಹಿಳಾ ಐಪಿಎಸ್ ಅಧಿಕಾರಿ ಡಿಜಿಪಿ ಬಿಎಸ್‌ ಸಂಧ್ಯಾ ಅವರೂ ಸೇರಿದ್ದಾರೆ. ಇವರು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಮುಖ್ಯಸ್ಥರ ಹುದ್ದೆಯಿಂದ ನಿವೃತ್ತರಾಗುತ್ತಿದ್ದಾರೆ.

ಇದನ್ನೂ ಓದಿ: Kerala Crime: ಕೇರಳದಲ್ಲಿ ಆಘಾತಕಾರಿ ಘಟನೆ: ಟ್ರಾಲಿ ಬ್ಯಾಗ್​ನಲ್ಲಿತ್ತು ಖ್ಯಾತ ಹೋಟೆಲ್​ ಮಾಲೀಕನ ಶವ

ನಟ ಮತ್ತು ಮಿಮಿಕ್ರಿ ಕಲಾವಿದರೂ ಆಗಿರುವ ಜೋಬಿ ಅವರು ಸರ್ಕಾರಿ ಸ್ವಾಮ್ಯದ ಸಂಸ್ಥೆ ಕೇರಳ ಸ್ಟೇಟ್ ಫೈನಾನ್ಶಿಯಲ್ ಎಂಟರ್​ಪ್ರೈಸಸ್​ನ ಹಿರಿಯ ವ್ಯವಸ್ಥಾಪಕ ಹುದ್ದೆಯಿಂದ ನಿವೃತ್ತರಾಗುತ್ತಿದ್ದಾರೆ.

ರಾಜ್ಯದ ಹಣಕಾಸಿನ ಸ್ಥಿತಿ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಇಷ್ಟೊಂದು ಜನ ಒಟ್ಟಿಗೆ ನಿವೃತ್ತರಾಗಿರುವುದು ಕಳವಳಕ್ಕೆ ಕಾರಣವಾಗಿದೆ. ಸೇವಾ ನಿವೃತ್ತಿ ಪ್ರಯೋಜನಗಳನ್ನು ಪಾವತಿಸಲು 1,500 ಕೋಟಿ ರೂ.ಗಳ ಮೊತ್ತ ಅಗತ್ಯವಿದೆ ಎನ್ನಲಾಗಿದೆ. ಆದಾಗ್ಯೂ, ಹಣಕಾಸಿನ ಕೊರತೆ ಕಾರಣ ಮುಂದೊಡ್ಡಿ ಯಾವುದೇ ಪಾವತಿಯನ್ನು ತಡೆಹಿಡಿಯಲಾಗುವುದಿಲ್ಲ ಎಂದು ಸರ್ಕಾರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!