AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಮದುವೆ ಮನೆಗೆ ಒಂಟೆಯ ಮೇಲೆ ಬಂದ ವರನ ವಿರುದ್ಧ ಪ್ರಕರಣ ದಾಖಲು

ಮದುವೆಗೆಂದು ವರನನ್ನು ಒಂಟೆ ಮೇಲೆ ಕರೆತಂದ ಘಟನೆಯಲ್ಲಿ ವರ ಸೇರಿ 26 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಣ್ಣೂರಿನಲ್ಲಿ ಈ ಘಟನೆ ನಡೆದಿದೆ, ವರ ಕುದುರೆ ಅಥವಾ ವಾಹನಬಿಟ್ಟು ಒಂಟೆಯ ಮೇಲೆ ಬಂದಿದ್ದು ತೀವ್ರ ವಿವಾದಕ್ಕೆ ಗುರಿಯಾಗಿತ್ತು.

ಕೇರಳ: ಮದುವೆ ಮನೆಗೆ ಒಂಟೆಯ ಮೇಲೆ ಬಂದ ವರನ ವಿರುದ್ಧ ಪ್ರಕರಣ ದಾಖಲು
ಒಂಟೆImage Credit source: Zee News
ನಯನಾ ರಾಜೀವ್
|

Updated on: Jan 18, 2024 | 9:03 AM

Share

ಮದುವೆಗೆಂದು ವರನನ್ನು ಒಂಟೆ ಮೇಲೆ ಕರೆತಂದ ಘಟನೆಯಲ್ಲಿ ವರ ಸೇರಿ 26 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಣ್ಣೂರಿನಲ್ಲಿ ಈ ಘಟನೆ ನಡೆದಿದೆ, ವರ ಕುದುರೆ ಅಥವಾ ವಾಹನಬಿಟ್ಟು ಒಂಟೆಯ ಮೇಲೆ ಬಂದಿದ್ದು ತೀವ್ರ ವಿವಾದಕ್ಕೆ ಗುರಿಯಾಗಿತ್ತು.

ವಲಪಟ್ಟಣ ಮೂಲದ ವರಣ್ ರಿಜ್ವಾನ್ ಹಾಗೂ ಆತನೊಂದಿಗೆ ಬಂದಿದ್ದ 25 ಮಂದಿ ವಿರುದ್ಧ ಚಾಕರಕಲ್ಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ವಾರ ನಡೆದ ಮದುವೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಟಾಕಿ ಮತ್ತು ಬ್ಯಾಂಡ್‌ನೊಂದಿಗೆ ವರ ಒಂಟೆಯ ಮೇಲೆ ಬರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮದುವೆ ಸಂಭ್ರಮಕ್ಕೆ ವಧುವಿನ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಸಂಭ್ರಮಾಚರಣೆಯ ನೇತೃತ್ವ ವಹಿಸಿದ್ದ ವರನ ಸ್ನೇಹಿತರು ಇದಕ್ಕೆ ಕಿವಿಗೊಡಲಿಲ್ಲ.

ಮತ್ತಷ್ಟು ಓದಿ: ಜೆಸಿಬಿಯಲ್ಲಿ ಮೆರವಣಿಗೆ, ಮಂಟಪದಲ್ಲಿ ಕೋಳಿ ಅಂಕ, ಈ ಸ್ನೇಹಿತರು ಮಾಡುವುದು ಒಂದೆರೆಡಲ್ಲ

ಅತಿಯಾದ ಸಂಭ್ರಮಾಚರಣೆಯಿಂದಾಗಿ ಕಣ್ಣೂರು ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯನ್ನೂ ಬಂದ್ ಮಾಡಲಾಗಿತ್ತು. ರಸ್ತೆ ತಡೆ ನಿರ್ಮಿಸಿದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಬಲಪ್ರಯೋಗ ಮಾಡಿದರು.

ಒಂಟೆ ಮೆರವಣಿಗೆ, ಪಟಾಕಿ ಸಿಡಿಸುವಿಕೆ ಮತ್ತು ಬ್ಯಾಂಡ್ ಸಂಗೀತದೊಂದಿಗೆ ಜನನಿಬಿಡ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು, ಇದರಿಂದಾಗಿ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳು ಮತ್ತು ಆಂಬ್ಯುಲೆನ್ಸ್ ಸೇರಿದಂತೆ ಹಲವು ವಾಹನಗಳು ಸಿಲುಕಿಕೊಂಡಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು