Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಮದುವೆ ಮನೆಗೆ ಒಂಟೆಯ ಮೇಲೆ ಬಂದ ವರನ ವಿರುದ್ಧ ಪ್ರಕರಣ ದಾಖಲು

ಮದುವೆಗೆಂದು ವರನನ್ನು ಒಂಟೆ ಮೇಲೆ ಕರೆತಂದ ಘಟನೆಯಲ್ಲಿ ವರ ಸೇರಿ 26 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಣ್ಣೂರಿನಲ್ಲಿ ಈ ಘಟನೆ ನಡೆದಿದೆ, ವರ ಕುದುರೆ ಅಥವಾ ವಾಹನಬಿಟ್ಟು ಒಂಟೆಯ ಮೇಲೆ ಬಂದಿದ್ದು ತೀವ್ರ ವಿವಾದಕ್ಕೆ ಗುರಿಯಾಗಿತ್ತು.

ಕೇರಳ: ಮದುವೆ ಮನೆಗೆ ಒಂಟೆಯ ಮೇಲೆ ಬಂದ ವರನ ವಿರುದ್ಧ ಪ್ರಕರಣ ದಾಖಲು
ಒಂಟೆImage Credit source: Zee News
Follow us
ನಯನಾ ರಾಜೀವ್
|

Updated on: Jan 18, 2024 | 9:03 AM

ಮದುವೆಗೆಂದು ವರನನ್ನು ಒಂಟೆ ಮೇಲೆ ಕರೆತಂದ ಘಟನೆಯಲ್ಲಿ ವರ ಸೇರಿ 26 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಣ್ಣೂರಿನಲ್ಲಿ ಈ ಘಟನೆ ನಡೆದಿದೆ, ವರ ಕುದುರೆ ಅಥವಾ ವಾಹನಬಿಟ್ಟು ಒಂಟೆಯ ಮೇಲೆ ಬಂದಿದ್ದು ತೀವ್ರ ವಿವಾದಕ್ಕೆ ಗುರಿಯಾಗಿತ್ತು.

ವಲಪಟ್ಟಣ ಮೂಲದ ವರಣ್ ರಿಜ್ವಾನ್ ಹಾಗೂ ಆತನೊಂದಿಗೆ ಬಂದಿದ್ದ 25 ಮಂದಿ ವಿರುದ್ಧ ಚಾಕರಕಲ್ಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ವಾರ ನಡೆದ ಮದುವೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಟಾಕಿ ಮತ್ತು ಬ್ಯಾಂಡ್‌ನೊಂದಿಗೆ ವರ ಒಂಟೆಯ ಮೇಲೆ ಬರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮದುವೆ ಸಂಭ್ರಮಕ್ಕೆ ವಧುವಿನ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಸಂಭ್ರಮಾಚರಣೆಯ ನೇತೃತ್ವ ವಹಿಸಿದ್ದ ವರನ ಸ್ನೇಹಿತರು ಇದಕ್ಕೆ ಕಿವಿಗೊಡಲಿಲ್ಲ.

ಮತ್ತಷ್ಟು ಓದಿ: ಜೆಸಿಬಿಯಲ್ಲಿ ಮೆರವಣಿಗೆ, ಮಂಟಪದಲ್ಲಿ ಕೋಳಿ ಅಂಕ, ಈ ಸ್ನೇಹಿತರು ಮಾಡುವುದು ಒಂದೆರೆಡಲ್ಲ

ಅತಿಯಾದ ಸಂಭ್ರಮಾಚರಣೆಯಿಂದಾಗಿ ಕಣ್ಣೂರು ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯನ್ನೂ ಬಂದ್ ಮಾಡಲಾಗಿತ್ತು. ರಸ್ತೆ ತಡೆ ನಿರ್ಮಿಸಿದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಬಲಪ್ರಯೋಗ ಮಾಡಿದರು.

ಒಂಟೆ ಮೆರವಣಿಗೆ, ಪಟಾಕಿ ಸಿಡಿಸುವಿಕೆ ಮತ್ತು ಬ್ಯಾಂಡ್ ಸಂಗೀತದೊಂದಿಗೆ ಜನನಿಬಿಡ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು, ಇದರಿಂದಾಗಿ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳು ಮತ್ತು ಆಂಬ್ಯುಲೆನ್ಸ್ ಸೇರಿದಂತೆ ಹಲವು ವಾಹನಗಳು ಸಿಲುಕಿಕೊಂಡಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್