AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ಜಾಥಾದಲ್ಲಿ ಹಮಾಸ್ ನಾಯಕ ಖಾಲಿದ್ ಭಾಷಣ, ಭುಗಿಲೆದ್ದ ಆಕ್ರೋಶ

ಕೇರಳದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ಜಾಥಾದಲ್ಲಿ ಹಮಾಸ್ ನಾಯಕ ಖಲೀದ್ ಮಾಶಲ್ ಪಾಲ್ಗೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ. ಕೇರಳದ ಮಲಪ್ಪುರಂನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಜಾಥಾವನ್ನು ಆಯೋಜಿಸಲಾಗಿತ್ತು. ಜಮಾತ್-ಎ-ಇಸ್ಲಾಮಿಯ ಯುವ ಘಟಕವಾದ ಸಾಲಿಡಾರಿಟಿ ಯೂತ್ ಮೂವ್​ಮೆಂಟ್​ ಇದನ್ನು ಆಯೋಜಿಸಿತ್ತು. ಭಯೋತ್ಪಾದಕ ಸಂಘಟನೆ ಹಮಾಸ್‌ನ ನಾಯಕ ಈ ರ್ಯಾಲಿಯಲ್ಲಿ ಆನ್​ಲೈನ್​ ಮೂಲಕ ಭಾಗಿಯಾಗಿದ್ದರು.

ಕೇರಳದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ಜಾಥಾದಲ್ಲಿ ಹಮಾಸ್ ನಾಯಕ ಖಾಲಿದ್ ಭಾಷಣ, ಭುಗಿಲೆದ್ದ ಆಕ್ರೋಶ
ಖಾಲಿಸ್Image Credit source: India Today
ನಯನಾ ರಾಜೀವ್
|

Updated on: Oct 29, 2023 | 10:34 AM

Share

ಕೇರಳದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ಜಾಥಾದಲ್ಲಿ ಹಮಾಸ್ ನಾಯಕ ಖಾಲಿದ್ ಮಾಶಲ್ ಪಾಲ್ಗೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ. ಕೇರಳದ ಮಲಪ್ಪುರಂನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಜಾಥಾವನ್ನು ಆಯೋಜಿಸಲಾಗಿತ್ತು. ಜಮಾತ್-ಎ-ಇಸ್ಲಾಮಿಯ ಯುವ ಘಟಕವಾದ ಸಾಲಿಡಾರಿಟಿ ಯೂತ್ ಮೂವ್​ಮೆಂಟ್​ ಇದನ್ನು ಆಯೋಜಿಸಿತ್ತು. ಭಯೋತ್ಪಾದಕ ಸಂಘಟನೆ ಹಮಾಸ್‌ನ ನಾಯಕ ಈ ರ್ಯಾಲಿಯಲ್ಲಿ ಆನ್​ಲೈನ್​ ಮೂಲಕ ಭಾಗಿಯಾಗಿದ್ದರು.

ಈ ವಿಚಾರವಾಗಿ ಬಿಜೆಪಿ ನಾಯಕರು ಪ್ರತಿಪಕ್ಷಗಳ ಮೈತ್ರಿಕೂಟ ಮತ್ತು ಕೇರಳ ಸರ್ಕಾರವನ್ನು ಗುರಿಯಾಗಿಸಿದ್ದಾರೆ. ಖಾಲಿದ್ ಹಮಾಸ್‌ನ ಸ್ಥಾಪಕ ಸದಸ್ಯರಲ್ಲಿ ಒಬ್ಬರು ಮತ್ತು 2017 ರವರೆಗೆ ಹಮಾಸ್ ಅಧ್ಯಕ್ಷರಾಗಿದ್ದರು. ಬಿಬಿಸಿ ವರದಿಯ ಪ್ರಕಾರ, ಖಾಲಿದ್ ಮಶಾಲ್ ಪ್ಯಾಲೆಸ್ತೀನ್​ನ ವೆಸ್ಟ್ ಬ್ಯಾಂಕ್ ಪ್ರದೇಶದಲ್ಲಿ ಜನಿಸಿದರು ಮತ್ತು ಅವರ ಜೀವನದ ಬಹುಪಾಲು ಜೋರ್ಡಾನ್ ಮತ್ತು ಕುವೈತ್‌ನಲ್ಲಿ ಕಳೆದಿದ್ದಾರೆ.

ಖಲೀದ್ ಮಶಾಲ್ ಅವರನ್ನು 2004 ರಲ್ಲಿ ಹಮಾಸ್‌ನ ರಾಜಕೀಯ ಮುಖ್ಯಸ್ಥರನ್ನಾಗಿ ಮಾಡಲಾಯಿತು. ಮಶಾಲ್ ಎಂದೂ ಗಾಜಾದಲ್ಲಿ ಎಂದಿಗೂ ವಾಸಿಸಲಿಲ್ಲ ಮತ್ತು ಜೋರ್ಡಾನ್, ಸಿರಿಯಾ, ಕತಾರ್ ಮತ್ತು ಈಜಿಪ್ಟ್‌ನಿಂದ ಯಾವಾಗಲೂ ಹಮಾಸ್ ಅನ್ನು ನಿರ್ವಹಿಸುತ್ತಿದ್ದರು.

ರ‍್ಯಾಲಿಯಲ್ಲಿ ಹಮಾಸ್ ನಾಯಕ ಮಾಡಿದ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಅದರ ಬಗ್ಗೆ ವಿವಾದ ಎದ್ದಿದೆ.

ಮತ್ತಷ್ಟು ಓದಿ: ಹಮಾಸ್, ಇಸ್ರೇಲ್​ ಯುದ್ಧದ ಬಗ್ಗೆ ಕಳವಳ, ಪ್ರಧಾನಿ ಮೋದಿ ಈಜಿಪ್ಟ್​ ಅಧ್ಯಕ್ಷ ಅಬ್ದೆಲ್ ನಡುವೆ ಚರ್ಚೆ

ಪೋಸ್ಟರ್​ನಲ್ಲಿ  ಹಿಂದುತ್ವ ಮತ್ತು ವರ್ಣಭೇದ ನೀತಿಯನ್ನು ಬೇರುಸಹಿತ ಕಿತ್ತುಹಾಕಿ ಎಂದು ಬರೆಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ಯಾಲೆಸ್ತೀನ್ ಉಳಿಸುವ ನೆಪದಲ್ಲಿ ಭಯೋತ್ಪಾದಕ ಸಂಘಟನೆಯನ್ನು ವೈಭವೀಕರಿಸುತ್ತಿರುವುದು ಅತ್ಯಂತ ಆಘಾತಕಾರಿ ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ