AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೈತ್​​​ಗೆ ಹೋಗಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ: ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕೇರಳ ಸರ್ಕಾರವು ಗುರುವಾರ ತುರ್ತು ಸಚಿವ ಸಂಪುಟ ಸಭೆಯನ್ನು ಕರೆದಿದ್ದು ವೀಣಾ ಜಾರ್ಜ್ ಅವರು ರಾಜ್ಯ ಮಿಷನ್ ನಿರ್ದೇಶಕ (ಎನ್‌ಎಚ್‌ಎಂ) ಜೀವನ್ ಬಾಬು ಅವರೊಂದಿಗೆ ತುರ್ತಾಗಿ ಕುವೈತ್‌ಗೆ ಪ್ರಯಾಣಿಸಲಿದ್ದು, ಗಾಯಗೊಂಡ ರಾಜ್ಯದವರ ಚಿಕಿತ್ಸೆಗೆ ಸಂಬಂಧಿಸಿದ ಪ್ರಯತ್ನಗಳನ್ನು ಸಂಘಟಿಸಲು ನಿರ್ಧರಿಸಿದ್ದಾರೆ ಎಂದು ಹೇಳಿತ್ತು.

ಕುವೈತ್​​​ಗೆ ಹೋಗಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ: ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್
ವೀಣಾ ಜಾರ್ಜ್
ರಶ್ಮಿ ಕಲ್ಲಕಟ್ಟ
|

Updated on: Jun 14, 2024 | 2:20 PM

Share

ತಿರುವನಂತಪುರಂ ಜೂನ್ 14: ಗಲ್ಫ್ ದೇಶದ ದಕ್ಷಿಣ ನಗರವಾದ ಮಂಗಾಫ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Kuwait Fire) ಸಂತ್ರಸ್ತರಾಗಿರುವ ರಾಜ್ಯದ ಭಾರತೀಯ ಪ್ರಜೆಗಳ ನೆರವಿಗಾಗಿ ಕುವೈತ್‌ಗೆ (Kuwait) ತೆರಳಲು ಕೇಂದ್ರ ಸರ್ಕಾರ ತನಗೆ ಅನುಮತಿ ನೀಡಲಿಲ್ಲ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George)ಶುಕ್ರವಾರ ಆರೋಪಿಸಿದ್ದಾರೆ. ಬುಧವಾರ ಕುವೈತ್‌ನ ಕಟ್ಟಡವೊಂದಕ್ಕೆ ಬೆಂಕಿ ತಗುಲಿ ಸಾವಿಗೀಡಾದ 45 ಭಾರತೀಯರ ಮೃತದೇಹಗಳನ್ನು ಸ್ವೀಕರಿಸಲು ಅಧಿಕಾರಿಗಳು ವ್ಯವಸ್ಥೆ ಮಾಡುತ್ತಿರುವಾಗ ಬೆಳಿಗ್ಗೆ ಕೊಚ್ಚಿಯ ವಿಮಾನ ನಿಲ್ದಾಣದ ಆಮದು ಕಾರ್ಗೋ ಟರ್ಮಿನಲ್‌ನಲ್ಲಿ ಮೌನ ಮನೆ ಮಾಡಿತ್ತು. ಸಂತ್ರಸ್ತರ ಮೃತದೇಹಗಳನ್ನು ಅವರ ಮನೆಗಳಿಗೆ ಸಾಗಿಸಲು ಆಂಬ್ಯುಲೆನ್ಸ್‌ಗಳನ್ನು ಟರ್ಮಿನಲ್‌ನಲ್ಲಿ ಇರಿಸಲಾಗಿತ್ತು.

ಕುವೈತ್‌ನ ಮಂಗಾಫ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 45 ಭಾರತೀಯರ ಮೃತದೇಹಗಳನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಸಿ-130ಜೆ ಶುಕ್ರವಾರ ಬೆಳಗ್ಗೆ ಕೊಚ್ಚಿಗೆ ಬಂದಿಳಿಯಿತು. ಶುಕ್ರವಾರ ಬೆಳಗ್ಗೆ ಕುವೈತ್‌ಗೆ ಆಗಮಿಸಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಶೀಘ್ರ ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಕುವೈತ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿದ್ದರು. ಅವರು ವಿಮಾನದಲ್ಲಿದ್ದರು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಕೇರಳದ ಕಂದಾಯ ಸಚಿವರು ಹೇಳಿದ್ದೇನು?

“ನಮಗೆ (ಕುವೈತ್‌ಗೆ ಪ್ರಯಾಣಿಸಲು) ಒಪ್ಪಿಗೆ ಸಿಗದಿರುವುದು ತುಂಬಾ ದುರದೃಷ್ಟಕರ. ಸಾವಿಗೀಡಾದವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಕೇರಳದವರು. ಚಿಕಿತ್ಸೆಯಲ್ಲಿರುವ ಹೆಚ್ಚಿನ ಜನರು ಕೇರಳದವರು ಎಂದು ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಕೇರಳ ಸರ್ಕಾರವು ಗುರುವಾರ ತುರ್ತು ಸಚಿವ ಸಂಪುಟ ಸಭೆಯನ್ನು ಕರೆದಿದ್ದು ವೀಣಾ ಜಾರ್ಜ್ ಅವರು ರಾಜ್ಯ ಮಿಷನ್ ನಿರ್ದೇಶಕ (ಎನ್‌ಎಚ್‌ಎಂ) ಜೀವನ್ ಬಾಬು ಅವರೊಂದಿಗೆ ತುರ್ತಾಗಿ ಕುವೈತ್‌ಗೆ ಪ್ರಯಾಣಿಸಲಿದ್ದು, ಗಾಯಗೊಂಡ ರಾಜ್ಯದವರ ಚಿಕಿತ್ಸೆಗೆ ಸಂಬಂಧಿಸಿದ ಪ್ರಯತ್ನಗಳನ್ನು ಸಂಘಟಿಸಲು ನಿರ್ಧರಿಸಿದ್ದಾರೆ ಎಂದು ಹೇಳಿತ್ತು. ಸಾವಿಗೀಡಾದವರಲ್ಲಿ ಕೇರಳದ 24 ಮಂದಿ ಸೇರಿದ್ದಾರೆ.  “ಗಂಭೀರವಾಗಿ ಗಾಯಗೊಂಡವರ ಸಂಖ್ಯೆಯ ಬಗ್ಗೆ ರಾಯಭಾರ ಕಚೇರಿ ನಮಗೆ ನಿಖರವಾದ ಡೇಟಾವನ್ನು ನೀಡಿಲ್ಲ. ನಾವು ಅಲ್ಲಿಂದ ಸಂಗ್ರಹಿಸಿದ ಮಾಹಿತಿಯೆಂದರೆ ಒಟ್ಟು 7 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರಲ್ಲಿ 4 ಜನರು ಕೇರಳದವರು. ಆದರೆ ಇದು ನನ್ನ ಭೇಟಿಯ ಉದ್ದೇಶವು (ಕುವೈತ್‌ಗೆ) ಅಧಿಕೃತವಾಗಿ ಘೋಷಿಸಲ್ಪಟ್ಟಿಲ್ಲ, ನಾನು ಗಾಯಾಳುಗಳೊಂದಿಗೆ ಇರಲು ಮತ್ತು ಅವರ ಅಗತ್ಯಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಬಯಸುತ್ತೇನೆ ಎಂದು ಜಾರ್ಜ್ ಸುದ್ದಿಗಾರರಿಗೆ ತಿಳಿಸಿದರು.

ಕುವೈತ್ ಅಗ್ನಿ ದುರಂತದಲ್ಲಿ ಗಾಯಗೊಂಡಿರುವ ಭಾರತೀಯರ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನಗಳನ್ನು ಸಂಘಟಿಸುವಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು “ಅದ್ಭುತ” ಕೆಲಸ ಮಾಡಿದೆ ಎಂದು ಕೇಂದ್ರ ರಾಜ್ಯ ಸಚಿವ ಸುರೇಶ್ ಗೋಪಿ ಶುಕ್ರವಾರ ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿ ದುರಂತ: 45 ಭಾರತೀಯರ ಶವಗಳೊಂದಿಗೆ ಕುವೈತ್​ನಿಂದ ಕೇರಳಕ್ಕೆ ಬಂದಿಳಿದ ಸೇನಾ ವಿಮಾನ

ಏತನ್ಮಧ್ಯೆ, ಅಗ್ನಿ ದುರಂತದಲ್ಲಿ ಸಾವಿಗೀಡಾದ ಇತರ ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ವಿಮಾನ ದೆಹಲಿಗೆ ಹೋಗುವ ಮೊದಲು 23 ಮಲಯಾಳಿಗಳು, 7 ತಮಿಳಿಗರು ಮತ್ತು ಕರ್ನಾಟಕದ ಒಬ್ಬರ ಶವಗಳನ್ನು ಕೊಚ್ಚಿಯಲ್ಲಿ ಸ್ವೀಕರಿಸಲಾಗುವುದು ಎಂದು ಕೇರಳ ಕಂದಾಯ ಸಚಿವ ಕೆ ರಾಜನ್ ಸುದ್ದಿಗಾರರಿಗೆ ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ