AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಲ್​ ಆಗಿರುವ ಎಂಬಿಬಿಎಸ್ ವಿದ್ಯಾರ್ಥಿಯಿಂದ ಚಿಕಿತ್ಸೆ, ಹೃದ್ರೋಗಿ ಸಾವು

ಫೇಲ್​ ಆಗಿರುವ ಎಂಬಿಬಿಎಸ್ ವಿದ್ಯಾರ್ಥಿ ನೀಡಿರುವ ಚಿಕಿತ್ಸೆಯಿಂದ ಹೃದ್ರೋಗಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕೋಳಿಕ್ಕೋಡ್​ನಲ್ಲಿ ಘಟನೆ ನಡೆದಿದೆ, ಎಂಬಿಬಿಎಸ್​ನ ಎರಡನೇ ವರ್ಷವನ್ನು ಇನ್ನೂ ಪೂರ್ಣಗೊಳಿಸದ ವಿದ್ಯಾರ್ಥಿಯೊಬ್ಬ 60 ವರ್ಷದ ಹೃದ್ರೋಗಿಗೆ ಚಿಕಿತ್ಸೆ ನೀಡಿದ್ದು ರೋಗಿ ಸಾವನ್ನಪ್ಪಿದ್ದಾರೆ.

ಫೇಲ್​ ಆಗಿರುವ ಎಂಬಿಬಿಎಸ್ ವಿದ್ಯಾರ್ಥಿಯಿಂದ ಚಿಕಿತ್ಸೆ, ಹೃದ್ರೋಗಿ ಸಾವು
ನಯನಾ ರಾಜೀವ್
|

Updated on: Oct 02, 2024 | 9:28 AM

Share

ಫೇಲ್​ ಆಗಿರುವ ಎಂಬಿಬಿಎಸ್ ವಿದ್ಯಾರ್ಥಿ ನೀಡಿರುವ ಚಿಕಿತ್ಸೆಯಿಂದ ಹೃದ್ರೋಗಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕೋಳಿಕ್ಕೋಡ್​ನಲ್ಲಿ ಘಟನೆ ನಡೆದಿದ್ದು, ಎಂಬಿಬಿಎಸ್​ನ ಎರಡನೇ ವರ್ಷವನ್ನು ಇನ್ನೂ ಪೂರ್ಣಗೊಳಿಸದ ವಿದ್ಯಾರ್ಥಿಯೊಬ್ಬ 60 ವರ್ಷದ ಹೃದ್ರೋಗಿಗೆ ಚಿಕಿತ್ಸೆ ನೀಡಿದ್ದು ರೋಗಿ ಸಾವನ್ನಪ್ಪಿದ್ದಾರೆ.

ಕೋಳಿಕ್ಕೋಡ್​ನ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ವಿನೋದ್ ಕುಮಾರ್ ಎಂಬ ರೋಗಿ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 23ರಂದು ಈ ಘಟನೆ ನಡೆದಿದೆ. ಅಬು ಅಬ್ರಹಾಂ ಲ್ಯೂಕ್ ಎನ್ನುವವರು ತನ್ನ ವೈದ್ಯಕೀಯ ಶಿಕ್ಷಣವನ್ನು ಇನ್ನೂ ಪೂರ್ಣಗೊಳಿಸದಿದ್ದರೂ ಚಿಕಿತ್ಸೆ ನೀಡಿ ರೋಗಿಯ ಸಾವಿಗೆ ಕಾರಣರಾಗಿದ್ದಾರೆ.

ತೀವ್ರ ಎದೆನೋವು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿನೋದ್ ಕುಮಾರ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಅವರ ಮಗ ಡಾ ಅಶ್ವಿನ್ ಪಚಾಟ್ ವಿನೋದ್, ತನ್ನ ತಂದೆಯ ಸಾವಿಗೆ ಕಾರಣನಾದವನು ಅನುತ್ತೀರ್ಣ ಎಂಬಿಬಿಎಸ್ ವಿದ್ಯಾರ್ಥಿ ಎಂದು ತಿಳಿದು ಆಘಾತಕ್ಕೊಳಗಾಗಿದ್ದಾರೆ.

ಮತ್ತಷ್ಟು ಓದಿ: ಯೂಟ್ಯೂಬ್ ನೋಡಿ ಆಪರೇಷನ್ ಮಾಡಿದ ನಕಲಿ ವೈದ್ಯ, ಬಾಲಕ ಸಾವು

ನಾನು ಅದೇ ದಿನ ಚಂಡೀಗಢದಿಂದ ಕೋಳಿಕ್ಕೋಡ್​ಗೆ ಹೋಗಿದ್ದೆ, ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ತನಿಖೆ ಪ್ರಾರಂಭಿಸಿದ್ದೇವೆ. ಅಬು ಅಬ್ರಾಹಂ ಲ್ಯೂಕ್ ಎಂಬಿಬಿಎಸ್ ಪದವಿಯನ್ನು ಪೂರ್ಣಗೊಳಿಸಿಲ್ಲ, ಕಳೆದ 12 ವರ್ಷಗಳಲ್ಲಿ ತಮ್ಮ ಎರಡನೇ ವರ್ಷದ ಎಂಬಿಬಿಎಸ್ ವಿಷಯಗಳಲ್ಲಿ ಅವರು ಉತ್ತೀರ್ಣರಾಗಲು ಸಾಧ್ಯವಾಗಿಲ್ಲ. ನಾನು ಕೂಡ ವೈದ್ಯ ತಂದೆಯ ಕೊನೆಯ ಕ್ಷಣದಲ್ಲಿ ಅವರಿಗೆ ಚಿಕಿತ್ಸೆ ಕೊಟ್ಟು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎನ್ನುವ ನೋವು ಕಾಡುತ್ತಿದೆ ಎಂದರು.

ಅವರ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಅಬು ಅಬ್ರಹಾಂನನ್ನು ಅವರನ್ನು ಬಂಧಿಸಲಾಗಿದೆ ಎಂದು ಅಶ್ವಿನ್ ಪಚಾಟ್ ವಿನೋದ್ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅಶ್ವಿನ್ ಪಚ್ಚಾಟ್ ವಿನೋದ್, ನನ್ನ ತಂದೆಗೆ ಆದ ಗತಿ ಬೇರೆಯವರಿಗೆ ಬಾರದಂತೆ ನೋಡಿಕೊಳ್ಳುವುದು ನನ್ನ ಗುರಿಯಾಗಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ