ಫೇಲ್​ ಆಗಿರುವ ಎಂಬಿಬಿಎಸ್ ವಿದ್ಯಾರ್ಥಿಯಿಂದ ಚಿಕಿತ್ಸೆ, ಹೃದ್ರೋಗಿ ಸಾವು

ಫೇಲ್​ ಆಗಿರುವ ಎಂಬಿಬಿಎಸ್ ವಿದ್ಯಾರ್ಥಿ ನೀಡಿರುವ ಚಿಕಿತ್ಸೆಯಿಂದ ಹೃದ್ರೋಗಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕೋಳಿಕ್ಕೋಡ್​ನಲ್ಲಿ ಘಟನೆ ನಡೆದಿದೆ, ಎಂಬಿಬಿಎಸ್​ನ ಎರಡನೇ ವರ್ಷವನ್ನು ಇನ್ನೂ ಪೂರ್ಣಗೊಳಿಸದ ವಿದ್ಯಾರ್ಥಿಯೊಬ್ಬ 60 ವರ್ಷದ ಹೃದ್ರೋಗಿಗೆ ಚಿಕಿತ್ಸೆ ನೀಡಿದ್ದು ರೋಗಿ ಸಾವನ್ನಪ್ಪಿದ್ದಾರೆ.

ಫೇಲ್​ ಆಗಿರುವ ಎಂಬಿಬಿಎಸ್ ವಿದ್ಯಾರ್ಥಿಯಿಂದ ಚಿಕಿತ್ಸೆ, ಹೃದ್ರೋಗಿ ಸಾವು

Updated on: Oct 02, 2024 | 9:28 AM

ಫೇಲ್​ ಆಗಿರುವ ಎಂಬಿಬಿಎಸ್ ವಿದ್ಯಾರ್ಥಿ ನೀಡಿರುವ ಚಿಕಿತ್ಸೆಯಿಂದ ಹೃದ್ರೋಗಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಕೋಳಿಕ್ಕೋಡ್​ನಲ್ಲಿ ಘಟನೆ ನಡೆದಿದ್ದು, ಎಂಬಿಬಿಎಸ್​ನ ಎರಡನೇ ವರ್ಷವನ್ನು ಇನ್ನೂ ಪೂರ್ಣಗೊಳಿಸದ ವಿದ್ಯಾರ್ಥಿಯೊಬ್ಬ 60 ವರ್ಷದ ಹೃದ್ರೋಗಿಗೆ ಚಿಕಿತ್ಸೆ ನೀಡಿದ್ದು ರೋಗಿ ಸಾವನ್ನಪ್ಪಿದ್ದಾರೆ.

ಕೋಳಿಕ್ಕೋಡ್​ನ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ವಿನೋದ್ ಕುಮಾರ್ ಎಂಬ ರೋಗಿ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 23ರಂದು ಈ ಘಟನೆ ನಡೆದಿದೆ. ಅಬು ಅಬ್ರಹಾಂ ಲ್ಯೂಕ್ ಎನ್ನುವವರು ತನ್ನ ವೈದ್ಯಕೀಯ ಶಿಕ್ಷಣವನ್ನು ಇನ್ನೂ ಪೂರ್ಣಗೊಳಿಸದಿದ್ದರೂ ಚಿಕಿತ್ಸೆ ನೀಡಿ ರೋಗಿಯ ಸಾವಿಗೆ ಕಾರಣರಾಗಿದ್ದಾರೆ.

ತೀವ್ರ ಎದೆನೋವು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿನೋದ್ ಕುಮಾರ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಅವರ ಮಗ ಡಾ ಅಶ್ವಿನ್ ಪಚಾಟ್ ವಿನೋದ್, ತನ್ನ ತಂದೆಯ ಸಾವಿಗೆ ಕಾರಣನಾದವನು ಅನುತ್ತೀರ್ಣ ಎಂಬಿಬಿಎಸ್ ವಿದ್ಯಾರ್ಥಿ ಎಂದು ತಿಳಿದು ಆಘಾತಕ್ಕೊಳಗಾಗಿದ್ದಾರೆ.

ಮತ್ತಷ್ಟು ಓದಿ:
ಯೂಟ್ಯೂಬ್ ನೋಡಿ ಆಪರೇಷನ್ ಮಾಡಿದ ನಕಲಿ ವೈದ್ಯ, ಬಾಲಕ ಸಾವು

ನಾನು ಅದೇ ದಿನ ಚಂಡೀಗಢದಿಂದ ಕೋಳಿಕ್ಕೋಡ್​ಗೆ ಹೋಗಿದ್ದೆ, ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ತನಿಖೆ ಪ್ರಾರಂಭಿಸಿದ್ದೇವೆ. ಅಬು ಅಬ್ರಾಹಂ ಲ್ಯೂಕ್ ಎಂಬಿಬಿಎಸ್ ಪದವಿಯನ್ನು ಪೂರ್ಣಗೊಳಿಸಿಲ್ಲ, ಕಳೆದ 12 ವರ್ಷಗಳಲ್ಲಿ ತಮ್ಮ ಎರಡನೇ ವರ್ಷದ ಎಂಬಿಬಿಎಸ್ ವಿಷಯಗಳಲ್ಲಿ ಅವರು ಉತ್ತೀರ್ಣರಾಗಲು ಸಾಧ್ಯವಾಗಿಲ್ಲ. ನಾನು ಕೂಡ ವೈದ್ಯ ತಂದೆಯ ಕೊನೆಯ ಕ್ಷಣದಲ್ಲಿ ಅವರಿಗೆ ಚಿಕಿತ್ಸೆ ಕೊಟ್ಟು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎನ್ನುವ ನೋವು ಕಾಡುತ್ತಿದೆ ಎಂದರು.

ಅವರ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಅಬು ಅಬ್ರಹಾಂನನ್ನು ಅವರನ್ನು ಬಂಧಿಸಲಾಗಿದೆ ಎಂದು ಅಶ್ವಿನ್ ಪಚಾಟ್ ವಿನೋದ್ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅಶ್ವಿನ್ ಪಚ್ಚಾಟ್ ವಿನೋದ್, ನನ್ನ ತಂದೆಗೆ ಆದ ಗತಿ ಬೇರೆಯವರಿಗೆ ಬಾರದಂತೆ ನೋಡಿಕೊಳ್ಳುವುದು ನನ್ನ ಗುರಿಯಾಗಿದೆ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us