AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ; ಇದು ತಮಿಳುನಾಡು ಅಲ್ಲ ಎಂದು ಎಚ್ಚರಿಕೆ ನೀಡಿದ ಹಲ್ಲೆಕೋರ

ಭಾನುವಾರ ರಾತ್ರಿ  ವಿಮಾನ ನಿಲ್ದಾಣದಿಂದ ಅಧಿಕೃತ ನಿವಾಸಕ್ಕೆ ತೆರಳುತ್ತಿದ್ದ ಮುಖ್ಯ ನ್ಯಾಯಮೂರ್ತಿಗಳ ಅಧಿಕೃತ ವಾಹನ ಹಾಗೂ ಬೆಂಗಾವಲು ವಾಹನವನ್ನು ರಾತ್ರಿ 11 ಗಂಟೆ ಸುಮಾರಿಗೆ ಗೋಶ್ರೀ ಸೇತುವೆ ಬಳಿ ಟಿಜೊ ತಡೆದಿದ್ದಾನೆ.

ಕೇರಳ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ; ಇದು ತಮಿಳುನಾಡು ಅಲ್ಲ ಎಂದು ಎಚ್ಚರಿಕೆ ನೀಡಿದ ಹಲ್ಲೆಕೋರ
ಕೇರಳ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 21, 2022 | 12:36 PM

Share

ಕೊಚ್ಚಿ ನಗರದಲ್ಲಿ ಭಾನುವಾರ ರಾತ್ರಿ ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕೇರಳ ಹೈಕೋರ್ಟ್(Kerala High Court)  ಮುಖ್ಯ ನ್ಯಾಯಮೂರ್ತಿ ಮೇಲೆ ಹಲ್ಲೆ ನಡೆಸಿದ್ದಾನೆ. ನ್ಯಾಯಮೂರ್ತಿ ಎಸ್ ಮಣಿಕುಮಾರ್ ( S Manikumar) ನೆಡುಂಬಶ್ಶೇರಿ ವಿಮಾನ ನಿಲ್ದಾಣದಿಂದ ಹಿಂತಿರುಗುತ್ತಿದ್ದಾಗ ಕೊಚ್ಚಿಯ(Kochi) ಗೋಶ್ರೀ ಸೇತುವೆಯಲ್ಲಿ ಟಿಜೊ ಎಂದು ಗುರುತಿಸಲ್ಪಟ್ಟ ವ್ಯಕ್ತಿಯೊಬ್ಬ ಕಾರನ್ನು ತಡೆದು ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ಉಡುಂಬಂಚೋಳ ನಿವಾಸಿ ಟಿಜೊನನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಆ ವ್ಯಕ್ತಿ ಮುಖ್ಯ ನ್ಯಾಯಮೂರ್ತಿಯನ್ನು ಕೆಟ್ಟಪದಗಳಿಂದ ಬೈದಿದ್ದಾನೆ. ಮದ್ಯದ ಅಮಲಿನಲ್ಲಿದ್ದ ಟಿಜೋ ಇದು ತಮಿಳುನಾಡು ಅಲ್ಲ ಎಂದು ನ್ಯಾಯಮೂರ್ತಿಗೆ ಎಚ್ಚರಿಕೆ ನೀಡಿದ್ದಾನೆ. ಮುಖ್ಯ ನ್ಯಾಯಮೂರ್ತಿ ಮಣಿಕುಮಾರ್ ತಮಿಳುನಾಡು ಮೂಲದವರಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳ ಗನ್‌ಮ್ಯಾನ್ ನೀಡಿದ ದೂರಿನ ಮೇರೆಗೆ ಮುಳವುಕಾಡ್ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 308 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದಾಳಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಭಾನುವಾರ ರಾತ್ರಿ  ವಿಮಾನ ನಿಲ್ದಾಣದಿಂದ ಅಧಿಕೃತ ನಿವಾಸಕ್ಕೆ ತೆರಳುತ್ತಿದ್ದ ಮುಖ್ಯ ನ್ಯಾಯಮೂರ್ತಿಗಳ ಅಧಿಕೃತ ವಾಹನ ಹಾಗೂ ಬೆಂಗಾವಲು ವಾಹನವನ್ನು ರಾತ್ರಿ 11 ಗಂಟೆ ಸುಮಾರಿಗೆ ಗೋಶ್ರೀ ಸೇತುವೆ ಬಳಿ ಟಿಜೊ ತಡೆದಿದ್ದಾನೆ. ಆತ ಚೇರನಲ್ಲೂರಿನಿಂದ ಮುಖ್ಯ ನ್ಯಾಯಮೂರ್ತಿಯವರ ವಾಹನವನ್ನು ಹಿಂಬಾಲಿಸಿದ್ದರು. ಕೊಚ್ಚಿಯಲ್ಲಿ ಕಂಟೈನರ್ ಲಾರಿ ಚಾಲಕ ಟಿಜೊ ಕುಡಿದ ಅಮಲಿನಲ್ಲಿ ಹಲ್ಲೆ ನಡೆಸಿದ್ದಾನೆ. ಡಿಜೊ ಅವರನ್ನು ತಡೆಯಲು ಯತ್ನಿಸಿದ ಮುಖ್ಯ ನ್ಯಾಯಮೂರ್ತಿಗಳ ಮುಖ್ಯ ಭದ್ರತಾ ಅಧಿಕಾರಿಯ ಮೇಲೂ ಅವರು ಹಲ್ಲೆಗೆ ಯತ್ನಿಸಿದರು. ಮುಖ್ಯ ನ್ಯಾಯಾಧೀಶರ ಮುಖ್ಯ ಭದ್ರತಾ ಅಧಿಕಾರಿಯನ್ನು ಅತಿಕ್ರಮಣ ಮಾಡಲು ಯತ್ನಿಸಿದ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಟಿಜೊ ಬೈಕ್ ನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!