AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ; ಇದು ತಮಿಳುನಾಡು ಅಲ್ಲ ಎಂದು ಎಚ್ಚರಿಕೆ ನೀಡಿದ ಹಲ್ಲೆಕೋರ

ಭಾನುವಾರ ರಾತ್ರಿ  ವಿಮಾನ ನಿಲ್ದಾಣದಿಂದ ಅಧಿಕೃತ ನಿವಾಸಕ್ಕೆ ತೆರಳುತ್ತಿದ್ದ ಮುಖ್ಯ ನ್ಯಾಯಮೂರ್ತಿಗಳ ಅಧಿಕೃತ ವಾಹನ ಹಾಗೂ ಬೆಂಗಾವಲು ವಾಹನವನ್ನು ರಾತ್ರಿ 11 ಗಂಟೆ ಸುಮಾರಿಗೆ ಗೋಶ್ರೀ ಸೇತುವೆ ಬಳಿ ಟಿಜೊ ತಡೆದಿದ್ದಾನೆ.

ಕೇರಳ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ; ಇದು ತಮಿಳುನಾಡು ಅಲ್ಲ ಎಂದು ಎಚ್ಚರಿಕೆ ನೀಡಿದ ಹಲ್ಲೆಕೋರ
ಕೇರಳ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು
TV9 Web
| Edited By: |

Updated on: Nov 21, 2022 | 12:36 PM

Share

ಕೊಚ್ಚಿ ನಗರದಲ್ಲಿ ಭಾನುವಾರ ರಾತ್ರಿ ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕೇರಳ ಹೈಕೋರ್ಟ್(Kerala High Court)  ಮುಖ್ಯ ನ್ಯಾಯಮೂರ್ತಿ ಮೇಲೆ ಹಲ್ಲೆ ನಡೆಸಿದ್ದಾನೆ. ನ್ಯಾಯಮೂರ್ತಿ ಎಸ್ ಮಣಿಕುಮಾರ್ ( S Manikumar) ನೆಡುಂಬಶ್ಶೇರಿ ವಿಮಾನ ನಿಲ್ದಾಣದಿಂದ ಹಿಂತಿರುಗುತ್ತಿದ್ದಾಗ ಕೊಚ್ಚಿಯ(Kochi) ಗೋಶ್ರೀ ಸೇತುವೆಯಲ್ಲಿ ಟಿಜೊ ಎಂದು ಗುರುತಿಸಲ್ಪಟ್ಟ ವ್ಯಕ್ತಿಯೊಬ್ಬ ಕಾರನ್ನು ತಡೆದು ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ಉಡುಂಬಂಚೋಳ ನಿವಾಸಿ ಟಿಜೊನನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಆ ವ್ಯಕ್ತಿ ಮುಖ್ಯ ನ್ಯಾಯಮೂರ್ತಿಯನ್ನು ಕೆಟ್ಟಪದಗಳಿಂದ ಬೈದಿದ್ದಾನೆ. ಮದ್ಯದ ಅಮಲಿನಲ್ಲಿದ್ದ ಟಿಜೋ ಇದು ತಮಿಳುನಾಡು ಅಲ್ಲ ಎಂದು ನ್ಯಾಯಮೂರ್ತಿಗೆ ಎಚ್ಚರಿಕೆ ನೀಡಿದ್ದಾನೆ. ಮುಖ್ಯ ನ್ಯಾಯಮೂರ್ತಿ ಮಣಿಕುಮಾರ್ ತಮಿಳುನಾಡು ಮೂಲದವರಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳ ಗನ್‌ಮ್ಯಾನ್ ನೀಡಿದ ದೂರಿನ ಮೇರೆಗೆ ಮುಳವುಕಾಡ್ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 308 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದಾಳಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಭಾನುವಾರ ರಾತ್ರಿ  ವಿಮಾನ ನಿಲ್ದಾಣದಿಂದ ಅಧಿಕೃತ ನಿವಾಸಕ್ಕೆ ತೆರಳುತ್ತಿದ್ದ ಮುಖ್ಯ ನ್ಯಾಯಮೂರ್ತಿಗಳ ಅಧಿಕೃತ ವಾಹನ ಹಾಗೂ ಬೆಂಗಾವಲು ವಾಹನವನ್ನು ರಾತ್ರಿ 11 ಗಂಟೆ ಸುಮಾರಿಗೆ ಗೋಶ್ರೀ ಸೇತುವೆ ಬಳಿ ಟಿಜೊ ತಡೆದಿದ್ದಾನೆ. ಆತ ಚೇರನಲ್ಲೂರಿನಿಂದ ಮುಖ್ಯ ನ್ಯಾಯಮೂರ್ತಿಯವರ ವಾಹನವನ್ನು ಹಿಂಬಾಲಿಸಿದ್ದರು. ಕೊಚ್ಚಿಯಲ್ಲಿ ಕಂಟೈನರ್ ಲಾರಿ ಚಾಲಕ ಟಿಜೊ ಕುಡಿದ ಅಮಲಿನಲ್ಲಿ ಹಲ್ಲೆ ನಡೆಸಿದ್ದಾನೆ. ಡಿಜೊ ಅವರನ್ನು ತಡೆಯಲು ಯತ್ನಿಸಿದ ಮುಖ್ಯ ನ್ಯಾಯಮೂರ್ತಿಗಳ ಮುಖ್ಯ ಭದ್ರತಾ ಅಧಿಕಾರಿಯ ಮೇಲೂ ಅವರು ಹಲ್ಲೆಗೆ ಯತ್ನಿಸಿದರು. ಮುಖ್ಯ ನ್ಯಾಯಾಧೀಶರ ಮುಖ್ಯ ಭದ್ರತಾ ಅಧಿಕಾರಿಯನ್ನು ಅತಿಕ್ರಮಣ ಮಾಡಲು ಯತ್ನಿಸಿದ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಟಿಜೊ ಬೈಕ್ ನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?