AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ; ಇದು ತಮಿಳುನಾಡು ಅಲ್ಲ ಎಂದು ಎಚ್ಚರಿಕೆ ನೀಡಿದ ಹಲ್ಲೆಕೋರ

ಭಾನುವಾರ ರಾತ್ರಿ  ವಿಮಾನ ನಿಲ್ದಾಣದಿಂದ ಅಧಿಕೃತ ನಿವಾಸಕ್ಕೆ ತೆರಳುತ್ತಿದ್ದ ಮುಖ್ಯ ನ್ಯಾಯಮೂರ್ತಿಗಳ ಅಧಿಕೃತ ವಾಹನ ಹಾಗೂ ಬೆಂಗಾವಲು ವಾಹನವನ್ನು ರಾತ್ರಿ 11 ಗಂಟೆ ಸುಮಾರಿಗೆ ಗೋಶ್ರೀ ಸೇತುವೆ ಬಳಿ ಟಿಜೊ ತಡೆದಿದ್ದಾನೆ.

ಕೇರಳ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ; ಇದು ತಮಿಳುನಾಡು ಅಲ್ಲ ಎಂದು ಎಚ್ಚರಿಕೆ ನೀಡಿದ ಹಲ್ಲೆಕೋರ
ಕೇರಳ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 21, 2022 | 12:36 PM

Share

ಕೊಚ್ಚಿ ನಗರದಲ್ಲಿ ಭಾನುವಾರ ರಾತ್ರಿ ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕೇರಳ ಹೈಕೋರ್ಟ್(Kerala High Court)  ಮುಖ್ಯ ನ್ಯಾಯಮೂರ್ತಿ ಮೇಲೆ ಹಲ್ಲೆ ನಡೆಸಿದ್ದಾನೆ. ನ್ಯಾಯಮೂರ್ತಿ ಎಸ್ ಮಣಿಕುಮಾರ್ ( S Manikumar) ನೆಡುಂಬಶ್ಶೇರಿ ವಿಮಾನ ನಿಲ್ದಾಣದಿಂದ ಹಿಂತಿರುಗುತ್ತಿದ್ದಾಗ ಕೊಚ್ಚಿಯ(Kochi) ಗೋಶ್ರೀ ಸೇತುವೆಯಲ್ಲಿ ಟಿಜೊ ಎಂದು ಗುರುತಿಸಲ್ಪಟ್ಟ ವ್ಯಕ್ತಿಯೊಬ್ಬ ಕಾರನ್ನು ತಡೆದು ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ಉಡುಂಬಂಚೋಳ ನಿವಾಸಿ ಟಿಜೊನನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಆ ವ್ಯಕ್ತಿ ಮುಖ್ಯ ನ್ಯಾಯಮೂರ್ತಿಯನ್ನು ಕೆಟ್ಟಪದಗಳಿಂದ ಬೈದಿದ್ದಾನೆ. ಮದ್ಯದ ಅಮಲಿನಲ್ಲಿದ್ದ ಟಿಜೋ ಇದು ತಮಿಳುನಾಡು ಅಲ್ಲ ಎಂದು ನ್ಯಾಯಮೂರ್ತಿಗೆ ಎಚ್ಚರಿಕೆ ನೀಡಿದ್ದಾನೆ. ಮುಖ್ಯ ನ್ಯಾಯಮೂರ್ತಿ ಮಣಿಕುಮಾರ್ ತಮಿಳುನಾಡು ಮೂಲದವರಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳ ಗನ್‌ಮ್ಯಾನ್ ನೀಡಿದ ದೂರಿನ ಮೇರೆಗೆ ಮುಳವುಕಾಡ್ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 308 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದಾಳಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಭಾನುವಾರ ರಾತ್ರಿ  ವಿಮಾನ ನಿಲ್ದಾಣದಿಂದ ಅಧಿಕೃತ ನಿವಾಸಕ್ಕೆ ತೆರಳುತ್ತಿದ್ದ ಮುಖ್ಯ ನ್ಯಾಯಮೂರ್ತಿಗಳ ಅಧಿಕೃತ ವಾಹನ ಹಾಗೂ ಬೆಂಗಾವಲು ವಾಹನವನ್ನು ರಾತ್ರಿ 11 ಗಂಟೆ ಸುಮಾರಿಗೆ ಗೋಶ್ರೀ ಸೇತುವೆ ಬಳಿ ಟಿಜೊ ತಡೆದಿದ್ದಾನೆ. ಆತ ಚೇರನಲ್ಲೂರಿನಿಂದ ಮುಖ್ಯ ನ್ಯಾಯಮೂರ್ತಿಯವರ ವಾಹನವನ್ನು ಹಿಂಬಾಲಿಸಿದ್ದರು. ಕೊಚ್ಚಿಯಲ್ಲಿ ಕಂಟೈನರ್ ಲಾರಿ ಚಾಲಕ ಟಿಜೊ ಕುಡಿದ ಅಮಲಿನಲ್ಲಿ ಹಲ್ಲೆ ನಡೆಸಿದ್ದಾನೆ. ಡಿಜೊ ಅವರನ್ನು ತಡೆಯಲು ಯತ್ನಿಸಿದ ಮುಖ್ಯ ನ್ಯಾಯಮೂರ್ತಿಗಳ ಮುಖ್ಯ ಭದ್ರತಾ ಅಧಿಕಾರಿಯ ಮೇಲೂ ಅವರು ಹಲ್ಲೆಗೆ ಯತ್ನಿಸಿದರು. ಮುಖ್ಯ ನ್ಯಾಯಾಧೀಶರ ಮುಖ್ಯ ಭದ್ರತಾ ಅಧಿಕಾರಿಯನ್ನು ಅತಿಕ್ರಮಣ ಮಾಡಲು ಯತ್ನಿಸಿದ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಟಿಜೊ ಬೈಕ್ ನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ