AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್​

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ಕೊಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ವೈದ್ಯರೊಬ್ಬರು ಚಿಕಿತ್ಸೆ ನೀಡುವಾಗ ಮಹಿಳಾ ರೋಗಿಯನ್ನು ಸ್ಪರ್ಶಿಸಿದರು ಎನ್ನುವ ಕಾರಣಕ್ಕೆ ಆ ಮಹಿಳೆಯ ಪತಿ ವೈದ್ಯರಿಗೆ ಕಪಾಳಮೋಕ್ಷ ಮಾಡಿದ್ದ.

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್​
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Mar 01, 2023 | 12:04 PM

Share

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ಕೊಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ವೈದ್ಯರೊಬ್ಬರು ಚಿಕಿತ್ಸೆ ನೀಡುವಾಗ ಮಹಿಳಾ ರೋಗಿಯನ್ನು ಸ್ಪರ್ಶಿಸಿದರು ಎನ್ನುವ ಕಾರಣಕ್ಕೆ ಆ ಮಹಿಳೆಯ ಪತಿ ವೈದ್ಯರಿಗೆ ಕಪಾಳಮೋಕ್ಷ ಮಾಡಿದ್ದ. ಇದೀಗ ವೈದ್ಯನಿಗೆ ಕಪಾಳಮೋಕ್ಷ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಜೈಲಿನಲ್ಲಿದ್ದಾನೆ, ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್​ ನಿರಾಕರಿಸಿದೆ.

ನಿಕಲ್ ಪರೀಕ್ಷೆ ಸಮಯದಲ್ಲಿ ವೈದ್ಯರು ಮಹಿಳಾ, ಪುರುಷ ರೋಗಿಯನ್ನು ಸ್ಪರ್ಶಿಸುವುದರಿಂದ ರೋಗಿಗೆ ಇರಿಸುಮುರಿಸು ಉಂಟಾದರೆ ವೈದ್ಯರಿಗೆ ಚಿಕಿತ್ಸೆ ನೀಡುವುದು ಕಷ್ಟವಾಗುತ್ತದೆ.

ರೋಗಿಯ ಹೃದಯಬಡಿತವನ್ನು ವೀಕ್ಷಿಸಲು ಎದೆ ಭಾಗವನ್ನು ಸ್ಪರ್ಶಿಸಲೇ ಬೇಕಾಗುತ್ತದೆ, ಇನ್ನೂ ಯಾವುದೇ ರೀತಿಯ ಇತರೆ ಆರೋಗ್ಯ ಸಮಸ್ಯೆಗಳಿದ್ದರೆ ಆ ಭಾಗವನ್ನು ಅನಿವಾರ್ಯವಾಗಿ ಸ್ಪರ್ಶಿಸಿ ಏನಾಗಿದೆ ಎಂಬುದನ್ನು ತಿಳಿಯಬೇಕಾಗುತ್ತದೆ. ಇದರಲ್ಲಿ ವೈದ್ಯರ ತಪ್ಪು ಏನೂ ಇರುವುದಿಲ್ಲ.

ಮತ್ತಷ್ಟು ಓದಿ:ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಜನವರಿ 8 ರಂದು ವೈದ್ಯರೊಬ್ಬರು ಅಪಘಾತ ವಿಭಾಗದಲ್ಲಿ ದಾಖಲಾಗಿದ್ದ ಮಹಿಳಾ ರೋಗಿಗೆ ಚಿಕಿತ್ಸೆ ನೀಡಿದ್ದರು. ಬಳಿಕ ಆ ಮಹಿಳೆಯ ಪತಿ ವೈದ್ಯರ ಕೊರಳಪಟ್ಟಿ ಹಿಡಿದು, ಅವರು ತನ್ನ ಪತ್ನಿಯ ಮೈಮುಟ್ಟಿದ್ದಾರೆ ಎಂದು ಆರೋಪಿಸಿ ಕಪಾಳಮೋಕ್ಷ ಮಾಡಿದ್ದ. ಬಳಿಕ ವೈದ್ಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ಇದೀಗ ಆರೋಪಿಗೆ ಕ್ರಿಮಿನಲ್ ಪೂರ್ವಾಪರ ಹೊಂದಿದ್ದಾನೆ ಹೀಗಾಗಿ ನಿರೀಕ್ಷಣಾ ಜಾಮೀನು ನೀಡಲಾಗುವುದಿಲ್ಲ ಎಂದು ಹೈಕೋರ್ಟ್​ ಹೇಳಿದೆ. ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದ ನಂತರ, ವೈದ್ಯರು ಆರೋಪಿಯ ಪತ್ನಿಯನ್ನು ಇಬ್ಬರು ಸಹೋದರಿಯರ ಸಮ್ಮುಖದಲ್ಲಿ ಗಾಯವಾದ ಭಾಗವನ್ನು ನೋಡಿ ಚಿಕಿತ್ಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್