AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್​

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ಕೊಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ವೈದ್ಯರೊಬ್ಬರು ಚಿಕಿತ್ಸೆ ನೀಡುವಾಗ ಮಹಿಳಾ ರೋಗಿಯನ್ನು ಸ್ಪರ್ಶಿಸಿದರು ಎನ್ನುವ ಕಾರಣಕ್ಕೆ ಆ ಮಹಿಳೆಯ ಪತಿ ವೈದ್ಯರಿಗೆ ಕಪಾಳಮೋಕ್ಷ ಮಾಡಿದ್ದ.

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್​
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Mar 01, 2023 | 12:04 PM

Share

ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ಕೊಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ವೈದ್ಯರೊಬ್ಬರು ಚಿಕಿತ್ಸೆ ನೀಡುವಾಗ ಮಹಿಳಾ ರೋಗಿಯನ್ನು ಸ್ಪರ್ಶಿಸಿದರು ಎನ್ನುವ ಕಾರಣಕ್ಕೆ ಆ ಮಹಿಳೆಯ ಪತಿ ವೈದ್ಯರಿಗೆ ಕಪಾಳಮೋಕ್ಷ ಮಾಡಿದ್ದ. ಇದೀಗ ವೈದ್ಯನಿಗೆ ಕಪಾಳಮೋಕ್ಷ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಜೈಲಿನಲ್ಲಿದ್ದಾನೆ, ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್​ ನಿರಾಕರಿಸಿದೆ.

ನಿಕಲ್ ಪರೀಕ್ಷೆ ಸಮಯದಲ್ಲಿ ವೈದ್ಯರು ಮಹಿಳಾ, ಪುರುಷ ರೋಗಿಯನ್ನು ಸ್ಪರ್ಶಿಸುವುದರಿಂದ ರೋಗಿಗೆ ಇರಿಸುಮುರಿಸು ಉಂಟಾದರೆ ವೈದ್ಯರಿಗೆ ಚಿಕಿತ್ಸೆ ನೀಡುವುದು ಕಷ್ಟವಾಗುತ್ತದೆ.

ರೋಗಿಯ ಹೃದಯಬಡಿತವನ್ನು ವೀಕ್ಷಿಸಲು ಎದೆ ಭಾಗವನ್ನು ಸ್ಪರ್ಶಿಸಲೇ ಬೇಕಾಗುತ್ತದೆ, ಇನ್ನೂ ಯಾವುದೇ ರೀತಿಯ ಇತರೆ ಆರೋಗ್ಯ ಸಮಸ್ಯೆಗಳಿದ್ದರೆ ಆ ಭಾಗವನ್ನು ಅನಿವಾರ್ಯವಾಗಿ ಸ್ಪರ್ಶಿಸಿ ಏನಾಗಿದೆ ಎಂಬುದನ್ನು ತಿಳಿಯಬೇಕಾಗುತ್ತದೆ. ಇದರಲ್ಲಿ ವೈದ್ಯರ ತಪ್ಪು ಏನೂ ಇರುವುದಿಲ್ಲ.

ಮತ್ತಷ್ಟು ಓದಿ:ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಜನವರಿ 8 ರಂದು ವೈದ್ಯರೊಬ್ಬರು ಅಪಘಾತ ವಿಭಾಗದಲ್ಲಿ ದಾಖಲಾಗಿದ್ದ ಮಹಿಳಾ ರೋಗಿಗೆ ಚಿಕಿತ್ಸೆ ನೀಡಿದ್ದರು. ಬಳಿಕ ಆ ಮಹಿಳೆಯ ಪತಿ ವೈದ್ಯರ ಕೊರಳಪಟ್ಟಿ ಹಿಡಿದು, ಅವರು ತನ್ನ ಪತ್ನಿಯ ಮೈಮುಟ್ಟಿದ್ದಾರೆ ಎಂದು ಆರೋಪಿಸಿ ಕಪಾಳಮೋಕ್ಷ ಮಾಡಿದ್ದ. ಬಳಿಕ ವೈದ್ಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ಇದೀಗ ಆರೋಪಿಗೆ ಕ್ರಿಮಿನಲ್ ಪೂರ್ವಾಪರ ಹೊಂದಿದ್ದಾನೆ ಹೀಗಾಗಿ ನಿರೀಕ್ಷಣಾ ಜಾಮೀನು ನೀಡಲಾಗುವುದಿಲ್ಲ ಎಂದು ಹೈಕೋರ್ಟ್​ ಹೇಳಿದೆ. ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದ ನಂತರ, ವೈದ್ಯರು ಆರೋಪಿಯ ಪತ್ನಿಯನ್ನು ಇಬ್ಬರು ಸಹೋದರಿಯರ ಸಮ್ಮುಖದಲ್ಲಿ ಗಾಯವಾದ ಭಾಗವನ್ನು ನೋಡಿ ಚಿಕಿತ್ಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ