AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಮದ್ಯದ ವಾಸನೆ ಬಂದರೆ ವ್ಯಕ್ತಿ ಅಮಲೇರಿದ ಎಂದು ಅರ್ಥವಲ್ಲ: ಕೇರಳ ಹೈಕೋರ್ಟ್

Kerala High Court ಕೇವಲ ಮದ್ಯದ ವಾಸನೆ ಬಂದರೆ ವ್ಯಕ್ತಿಯು ಅಮಲೇರಿದ ಅಥವಾ ಮದ್ಯದ ಅಮಲಿನಲ್ಲಿದ್ದ ಎಂದು ಅರ್ಥವಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ.

ಕೇವಲ ಮದ್ಯದ ವಾಸನೆ ಬಂದರೆ ವ್ಯಕ್ತಿ ಅಮಲೇರಿದ ಎಂದು ಅರ್ಥವಲ್ಲ: ಕೇರಳ ಹೈಕೋರ್ಟ್
ಕೇರಳ ಹೈಕೋರ್ಟ್
TV9 Web
| Edited By: |

Updated on: Nov 16, 2021 | 3:21 PM

Share

ತಿರುವನಂತಪುರಂ: ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಿರುವವರೆಗೆ ಖಾಸಗಿ ಸ್ಥಳಗಳಲ್ಲಿ ಮದ್ಯಪಾನ (alcohol) ಮಾಡುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ (Kerala HC) ಸೋಮವಾರ ತೀರ್ಪು ನೀಡಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಕೇವಲ ಮದ್ಯದ ವಾಸನೆ ಬಂದರೆ ವ್ಯಕ್ತಿಯು ಅಮಲೇರಿದ ಅಥವಾ ಮದ್ಯದ ಅಮಲಿನಲ್ಲಿದ್ದ ಎಂದು ಅರ್ಥವಲ್ಲ ಎಂದು ನ್ಯಾಯಾಲಯವು ಹೇಳಿದೆ.  ನ್ಯಾಯಮೂರ್ತಿ ಸೋಫಿ ಥಾಮಸ್ (Justice Sophy Thomas)ಅವರ ಏಕಸದಸ್ಯ ಪೀಠವು ವಿಚಾರಣೆಯನ್ನು ರದ್ದುಗೊಳಿಸಿದ್ದು ಒಬ್ಬ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ಅಮಲೇರಿದ ರೀತಿಯಲ್ಲಿ ಅಥವಾ ಗಲಭೆ ಮಾಡುವ ಸ್ಥಿತಿಯಲ್ಲಿ ಕಂಡುಬರಬೇಕು. ಅವರು ತನ್ನನ್ನು ತಾನು ನಿಯಂತ್ರಿಸಿಕೊಳ್ಳಲು ಅಸಮರ್ಥರಾಗಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸಬಹುದು ಎಂದು ಹೇಳಿದ್ದಾರೆ.  ಈ ಅಂಶವನ್ನು ಸಾಬೀತುಪಡಿಸಲು ನ್ಯಾಯಾಲಯವು ಬ್ಲ್ಯಾಕ್‌ನ ನಿಯಮ (Black’s Law) ನಿಘಂಟಿನ ಪ್ರಕಾರ ‘ನಶೆ’ ವ್ಯಾಖ್ಯಾನವನ್ನು ಉಲ್ಲೇಖಿಸಿದೆ. ವ್ಯಾಖ್ಯಾನವು ಹೀಗೆ ಹೇಳುತ್ತದೆ: “ಮದ್ಯಪಾನ ಅಥವಾ ಮಾದಕ ದ್ರವ್ಯ ಸೇವನೆಯಿಂದಾಗಿ ಪೂರ್ಣ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯಗಳೊಂದಿಗೆ ಕಾರ್ಯನಿರ್ವಹಿಸುವ ಸಾಮರ್ಥ್ಯ ಕಡಿಮೆಯಾಗಿರುವುದು; ಕುಡಿತ.”

ಮದ್ಯದ ಅಮಲಿನಲ್ಲಿ ಪೊಲೀಸ್ ಠಾಣೆಗೆ ಹಾಜರಾಗಿದ್ದಕ್ಕಾಗಿ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಎ) ಅಡಿಯಲ್ಲಿ ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂಬ ಅರ್ಜಿಯ ಮೇಲೆ ನ್ಯಾಯಾಲಯ ತೀರ್ಪು ನೀಡಿತು.

ಆರೋಪಿಯನ್ನು ಗುರುತಿಸಲು ಪೊಲೀಸ್ ಠಾಣೆಗೆ ಆಹ್ವಾನಿಸಲಾಗಿದ್ದು, ಪೊಲೀಸರು ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ವಕೀಲರಾದ ಐ.ವಿ.ಪ್ರಮೋದ್, ಕೆ.ವಿ.ಶಶಿಧರನ್ ಮತ್ತು ಸಾಯಿರಾ ಸೌರಜ್ ಅವರ ಅರ್ಜಿದಾರರ ಪರ ವಾದ ಮಂಡಿಸಿದರು.

ಇದನ್ನೂ ಓದಿ: 20 ವರ್ಷಗಳಲ್ಲಿ 1,888 ಕಸ್ಟಡಿ ಸಾವು; ಇದರಲ್ಲಿ ಶಿಕ್ಷೆ ಆಗಿದ್ದು ಕೇವಲ 26 ಪೊಲೀಸರಿಗೆ

ಇದನ್ನೂ ಓದಿ: Purvanchal Expressway Inaguration: ಉತ್ತರ ಪ್ರದೇಶದಲ್ಲಿ 22,500 ಕೋಟಿ ವೆಚ್ಚದ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ