AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸ್ಟರ್ ಅಭಯಾ ಕೊಲೆ ಪ್ರಕರಣ: ಕೇರಳ ಹೈಕೋರ್ಟ್​ನಿಂದ ಘೋಷಿತ ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತು, ಜಾಮೀನು

ಅಭಯಾ ಕೊಲೆ ಪ್ರಕರಣದ ಆರೋಪಿಗಳಿಗೆ ಕೇರಳ ಹೈಕೋರ್ಟ್  ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದೆ ಮತ್ತು ಷರತ್ತುಗಳೊಂದಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. 

ಸಿಸ್ಟರ್ ಅಭಯಾ ಕೊಲೆ ಪ್ರಕರಣ: ಕೇರಳ ಹೈಕೋರ್ಟ್​ನಿಂದ ಘೋಷಿತ ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತು, ಜಾಮೀನು
abhaya
TV9 Web
| Edited By: |

Updated on:Jun 23, 2022 | 11:39 AM

Share

ಕೊಚ್ಚಿ: ಸಿಸ್ಟರ್ ಅಭಯಾ ಕೊಲೆ ಪ್ರಕರಣದ (Sister Abhaya Murder) ಅಪರಾಧಿಗಳಾದ ಫಾದರ್ ಥಾಮಸ್ ಕೊಟ್ಟೂರ್ (Fr Thomas Kottoor) ಮತ್ತು ಸಿಸ್ಟರ್ ಸೆಫಿ (Sister Sephy) ಅವರಿಗೆ ಅಧೀನ ನ್ಯಾಯಾಲಯವು ವಿಧಿಸಿದ್ದ ಜೀವಾವಧಿ ಶಿಕ್ಷೆಯ ಅನುಷ್ಠಾನವನ್ನು ಕೇರಳ ಹೈಕೋರ್ಟ್ (Kerala High Court)​ ಗುರುವಾರ ಅಮಾನತುಪಡಿಸಿದ್ದು, ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಕೆ.ವಿನೋದ್ ಚಂದ್ರನ್ ಮತ್ತು ಸಿ.ಜಯಚಂದ್ರನ್ ಅವರಿದ್ದ ನ್ಯಾಯಪೀಠವು ಫಾದರ್ ಥಾಮಸ್ ಕೊಟ್ಟೂರ್ ಮತ್ತು ಸಿಸ್ಟರ್ ಸೆಫಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನಂತರ ಶಿಕ್ಷೆ ಅಮಾನತು ಮಾಡುವ ಆದೇಶ ಹೊರಡಿಸಿತು.

ಅವರಿಬ್ಬರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಬಹುದು ಎಂದು ಸೂಚಿಸಿದ ನ್ಯಾಯಪೀಠವು ತಲಾ ₹ 5 ಲಕ್ಷದ ಬಾಂಡ್ ನೀಡಬೇಕು ಎಂದು ಸೂಚಿಸಿತು. ಅಪರಾಧಿಗಳು ಮುಂದಿನ 6 ತಿಂಗಳ ಅವಧಿಗೆ ಪ್ರತಿ ಶನಿವಾರವು ತನಿಖಾಧಿಕಾರಿಯ ಎದುರು ಹಾಜರಾಗಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ರಾಜ್ಯದಿಂದ ಹೊರಗೆ ಹೋಗಬಾರದು ಎಂದು ಸೂಚಿಸಿತು.

ಕೊಟ್ಟಾಯಂ ಸೇಂಟ್ ಪಯಾಸ್ ಎಕ್ಸ್​ ಕಾನ್ವೆಂಟ್​ನ ಬಾವಿಯಲ್ಲಿ ಮಾರ್ಚ್ 27, 1992ರಂದು ಕ್ಯಾಥೋಲಿಕ್ ಕ್ರಿಶ್ಚಿಯನ್ ಪಂಥದ ಧರ್ಮ ಪ್ರಚಾರಕಿ, ಸಿಸ್ಟರ್ ಅಭಯಾ ಅವರ ಮೃತದೇಹ ಪತ್ತೆಯಾಗಿತ್ತು.

ಸಿಸ್ಟರ್ ಸೆಫಿ ಪರವಾಗಿ ವಾದ ಮಂಡಿಸಿದ ವಕೀಲ ಪಿ.ವಿಜಯ್​ಬಾನು, ತನಿಖೆ ಮತ್ತು ವಿಚಾರಣೆ ಅವಧಿಯಲ್ಲಿ ಸೆಫಿ ಅವರಿಗೆ ಜಾಮೀನು ನೀಡಿದದ ವಿಷಯವನ್ನು ಪ್ರಸ್ತಾಪಿಸಿದರು. ಕಳೆದ ಡಿಸೆಂಬರ್ 22, 2020ರಿಂದಲೂ ಸೆಫಿ ಅವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ನವೆಂಬರ್ 2008ರಲ್ಲಿ ಬಂಧಿತರಾಗಿದ್ದ ಸೆಫಿ ಅವರನ್ನು ಜನವರಿ 1, 2009ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಜಾಮೀನಿನ ಮೇಲಿದ್ದಾಗ ಸೆಫಿ ಅವರು ಯಾವುದೇ ಸಾಕ್ಷ್ಯಾಧಾರ ತಿರುಚಿರಲಿಲ್ಲ. ನ್ಯಾಯಾಲಯದ ಯಾವುದೇ ಷರತ್ತು ಉಲ್ಲಂಘಿಸಿರಲಿಲ್ಲ ಎಂದು ವಿಜಯ್​ಬಾನು ನ್ಯಾಯಾಲಯಕ್ಕೆ ವಿವರಿಸಿದರು. ಶಿಕ್ಷೆಯನ್ನು ರದ್ದುಪಡಿಸಬೇಕೆಂಬ ಸೆಫಿ ಅವರ ಮೇಲ್ಮನವಿಯನ್ನು ತೀರ್ಮಾನಿಸುವ ಮೊದಲೇ ಶಿಕ್ಷೆ ಅನುಭವಿಸುವಂತೆ ಮಾಡುವುದು ಸರಿಯಾಗಲಾರದು ಎಂದು ವಾದಿಸಿದರು.

ಫಾದರ್ ಥಾಮಸ್ ಕೊಟ್ಟೂರ್ ಅವರ ಪರವಾಗಿ ವಾದ ಮಂಡಿಸಿದ್ದ ಥಾಮಸ್ ಕೊಟ್ಟೂರ್, ಸರಿಯಾದ ಆಧಾರಗಳು ಇಲ್ಲದಿದ್ದರೂ ಫಾದರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇದು ಕೊಲೆಯೋ ಅಲ್ಲವೋ ಎನ್ನುವುದನ್ನು ದೃಢಪಡಿಸಿಕೊಳ್ಳದೇ ಶಿಕ್ಷೆ ವಿಧಿಸಿದ್ದು ಸಿಬಿಐ ನ್ಯಾಯಾಲಯ ಮಾಡಿದ ತಪ್ಪು. ಅಭಯಾ ಅವರ ಮೃತದೇಹದ ಮೇಲಿದ್ದ ಗಾಯಗಳನ್ನು ಗಮನಿಸಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಆದರೆ ಈ ಗಾಯಗಳು ಹೇಗಾದವು ಎಂಬ ಬಗ್ಗೆ ಯಾವುದೇ ವಿವರಗಳು ಲಭ್ಯವಾಗಿಲ್ಲ ಎಂದು ಹೇಳಿದರು.

ತಿರುವನಂತಪುರದ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ರದ್ದುಪಡಿಸಬೇಕೆಂಬ ಮೇಲ್ಮನವಿಯನ್ನು ಹೈಕೋರ್ಟ್​ ವಿಚಾರಣೆಗೆ ಬಾಕಿ ಇರಿಸಿದ್ದು, ಶಿಕ್ಷೆಯನ್ನು ಅಮಾನತುಗೊಳಿಸಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 am, Thu, 23 June 22

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್