AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಯಾರೂ ವಾಸವಿಲ್ಲದ ಮನೆಯ ಫ್ರಿಡ್ಜ್​ನಲ್ಲಿ ಮಾನವನ ತಲೆಬುರುಡೆ, ಮೂಳೆಗಳು ಪತ್ತೆ

ಕೇರಳದ ಎರ್ನಾಕುಲಂ ಜಿಲ್ಲೆಯ ಚೊಟ್ಟನಿಕ್ಕಾರಾ ಬಳಿಯ ಪಾಳುಬಿದ್ದ ಮನೆಯಲ್ಲಿ ತಲೆಬುರುಡೆ ಮತ್ತು ಮೂಳೆಗಳು ಸೇರಿದಂತೆ ಮಾನವ ಅವಶೇಷಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಶೇಷಗಳು ಮನೆಯೊಳಗಿನ ಫ್ರಿಡ್ಜ್‌ನಲ್ಲಿ ಶೇಖರಿಸಲ್ಪಟ್ಟಿರುವುದು ಕಂಡುಬಂದಿದೆ, ಈ ಮನೆ ಎರಡು ದಶಕಗಳಿಂದ ಖಾಲಿ ಇದೆ ಎಂಬುದು ತಿಳಿದುಬಂದಿದೆ. ಚೊಟ್ಟನಿಕ್ಕರ ಪೊಲೀಸ್ ಠಾಣೆಗೆ ದೊರೆತ ಸುಳಿವಿನ ಮೇರೆಗೆ ಪೊಲೀಸರು ಮನೆಯ ಪರಿಶೀಲನೆ ಆರಂಭಿಸಿದ್ದರು.

ಕೇರಳ: ಯಾರೂ ವಾಸವಿಲ್ಲದ ಮನೆಯ ಫ್ರಿಡ್ಜ್​ನಲ್ಲಿ ಮಾನವನ ತಲೆಬುರುಡೆ, ಮೂಳೆಗಳು ಪತ್ತೆ
ಮನೆ Image Credit source: Asianet news
ನಯನಾ ರಾಜೀವ್
|

Updated on: Jan 07, 2025 | 12:18 PM

Share

ಯಾರೂ ವಾಸವಿಲ್ಲದ ಮನೆಯೊಂದರ ಫ್ರಿಡ್ಜ್​ನಲ್ಲಿ ಮಾನವನ ತಲೆಬುರುಡೆ, ಮೂಳೆಗಳು ಪತ್ತೆಯಾಗಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಜನವಸತಿಯಿಲ್ಲದ ಮನೆಯೊಂದರ ಫ್ರಿಡ್ಜ್​ನಲ್ಲಿ ತಲೆಬುರುಡೆ ಹಾಗೂ ಮೂಳೆಗಳು ಪ್ಯಾಕ್​ನಲ್ಲಿ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಈ ಜಾಗವನ್ನು ಸಮಾಜಘಾತುಕ ಶಕ್ತಿಗಳ ತಾಣವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಪ್ರದೇಶ ಪಂಚಾಯಿತಿ ಅಧಿಕಾರಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳವನ್ನು ಶೋಧಿಸಿದ್ದರು. ಹುಡುಕಾಟದ ಸಮಯದಲ್ಲಿ, ಪೊಲೀಸರು ಮನೆಯೊಳಗೆ ಪ್ರವೇಶಿಸಿದಾಗ, ಸುಮ್ಮನೆ ಕುತೂಹಲಕ್ಕೆಂದು ಫ್ರಿಡ್ಜ್​ ಬಾಗಿಲು ತೆರೆದಾಗ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿವೆ.

ಮೂಳೆಗಳನ್ನು ಮೂರು ಪ್ರತ್ಯೇಕ ಕವರ್‌ಗಳಲ್ಲಿ ಪ್ಯಾಕ್ ಮಾಡಿರುವುದು ಕಂಡುಬಂದಿದೆ. ತಲೆಬುರುಡೆಯು ಹಲವಾರು ವರ್ಷಗಳಷ್ಟು ಹಳೆಯದಾಗಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ನಿಖರವಾದ ವಯಸ್ಸನ್ನು ಪರೀಕ್ಷೆಯ ನಂತರವೇ ನಿರ್ಧರಿಸಬಹುದು. ಮನೆಯಲ್ಲಿ ವಿದ್ಯುತ್ ಸಂಪರ್ಕ ಇರಲಿಲ್ಲ ಮತ್ತು ಫ್ರಿಡ್ಜ್‌ನಲ್ಲಿ ಕಂಪ್ರೆಸರ್ ಇರಲಿಲ್ಲ.

ಮತ್ತಷ್ಟು ಓದಿ: ಕೆಲಸ ಸರಿ ಮಾಡಿಲ್ಲ ಎಂದಿದ್ದಕ್ಕೆ ಚಾಕುವಿನಿಂದ ಇರಿದು ಸಹೋದ್ಯೋಗಿಯ ಕೊಲೆ

ಪ್ರಸಿದ್ಧ ಚೊಟ್ಟಣಿಕ್ಕರ ಭಗವತಿ ದೇವಸ್ಥಾನದ ಉತ್ತರಕ್ಕೆ ಸುಮಾರು 4 ಕಿ.ಮೀ ದೂರದಲ್ಲಿರುವ ಚೊಟ್ಟನಿಕ್ಕಾರದ ಎರುವೇಲಿ ಬಳಿಯ ಅರಮನೆ ಚೌಕದಲ್ಲಿರುವ ಈ ಮನೆಗೆ ಹಲವು ವರ್ಷಗಳ ಹಿಂದೆಯೇ ಬೀಗ ಹಾಕಲಾಗಿತ್ತು.

14 ಎಕರೆ ಜಾಗದಲ್ಲಿರುವ ಈ ಮನೆಯು ಎರ್ನಾಕುಲಂ ಮೂಲದವರ ಒಡೆತನದಲ್ಲಿದೆ ಮತ್ತು ಸುಮಾರು 15-20 ವರ್ಷಗಳಿಂದ ವಾಸವಿರಲಿಲ್ಲ. ಪೊಲೀಸರು ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?