AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಿಂದ 83 ಕಿ.ಮೀ. ದೂರದ ಕೊಯಮತ್ತೂರಿಗೆ ಹೋಗಿ ಹೆಂಡತಿಯನ್ನು ಕೊಂದು ಬಂದ ಗಂಡ!

52 ವರ್ಷದ ವ್ಯಕ್ತಿಯೊಬ್ಬರು ಪತ್ನಿಯನ್ನು ಕೊಂದು ನಂತರ ತಮಿಳುನಾಡಿನ ಕೊಯಮತ್ತೂರಿಗೆ 83 ಕಿ.ಮೀ ಕಾರು ಚಲಾಯಿಸಿ, ಕೇರಳದ ತಮ್ಮ ಮನೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ವ್ಯಕ್ತಿಯೊಬ್ಬರು ಸೋಮವಾರ ತನ್ನ ಪತ್ನಿಯನ್ನು ಕೊಂದು ನಂತರ ಮನೆಯ ಹೊರಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 52 ವರ್ಷದ ಕೃಷ್ಣಕುಮಾರ್ ತನ್ನ ಹೆಣ್ಣುಮಕ್ಕಳನ್ನು ಭೇಟಿ ಮಾಡಲು ಕೇರಳದ ವಂಡಾಜಿಯಲ್ಲಿರುವ ತನ್ನ ಕುಟುಂಬದ ಮನೆಯಿಂದ ತಮಿಳುನಾಡಿನ ಕೊಯಮತ್ತೂರಿಗೆ 83 ಕಿ.ಮೀ ಕಾರು ಚಲಾಯಿಸಿದ್ದಾರೆ.

ತಮಿಳುನಾಡಿನಿಂದ 83 ಕಿ.ಮೀ. ದೂರದ ಕೊಯಮತ್ತೂರಿಗೆ ಹೋಗಿ ಹೆಂಡತಿಯನ್ನು ಕೊಂದು ಬಂದ ಗಂಡ!
Murder
ಸುಷ್ಮಾ ಚಕ್ರೆ
|

Updated on:Mar 04, 2025 | 10:42 PM

Share

ಕೊಯಮತ್ತೂರು (ಮಾರ್ಚ್ 4): ಕೇರಳದ ವ್ಯಕ್ತಿಯೊಬ್ಬರು ಸೋಮವಾರ ತನ್ನ ಪತ್ನಿಯನ್ನು ಕೊಂದು ನಂತರ ಮನೆಯ ಹೊರಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 52 ವರ್ಷದ ಕೃಷ್ಣಕುಮಾರ್ ತನ್ನ ಪತ್ನಿ ಸಂಗೀತಾ ಜೊತೆ ವಾಸಿಸುತ್ತಿದ್ದ ಹೆಣ್ಣುಮಕ್ಕಳನ್ನು ಭೇಟಿ ಮಾಡಲು ಕೇರಳದ ವಂಡಾಜಿಯಲ್ಲಿರುವ ತನ್ನ ಕುಟುಂಬದ ಮನೆಯಿಂದ ತಮಿಳುನಾಡಿನ ಕೊಯಮತ್ತೂರಿಗೆ 83 ಕಿ.ಮೀ ಕಾರು ಚಲಾಯಿಸಿದ್ದಾರೆ. ಆದರೆ, ದಂಪತಿಗಳ ನಡುವೆ ಜಗಳ ನಡೆದಿದ್ದು, ನಂತರ 52 ವರ್ಷದ ವ್ಯಕ್ತಿ ತನ್ನ ಹೆಂಡತಿಯನ್ನು ಗುಂಡಿಕ್ಕಿ ಕೊಂದಿದ್ದಾನೆ.

ಈ ದಂಪತಿಗಳ ಇಬ್ಬರು ಹೆಣ್ಣುಮಕ್ಕಳು ಚಿಕ್ಕ ವಯಸ್ಸಿನವರಾಗಿದ್ದು, ಕೃಷ್ಣ ಕುಮಾರ್ ತನ್ನ ಮಕ್ಕಳನ್ನು ಭೇಟಿ ಮಾಡಲು ಹೋಗಿದ್ದರು. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಅವರ ಹೆಣ್ಣುಮಕ್ಕಳು ಶಾಲೆಗೆ ಹೋದ ನಂತರ, ಕೃಷ್ಣಕುಮಾರ್ ಮತ್ತು ಸಂಗೀತಾ ನಡುವೆ ಜಗಳವಾಯಿತು. ಕೋಪದ ಭರದಲ್ಲಿ ಅವರು ತನ್ನ ಪಿಸ್ತೂಲಿನಿಂದ ತನ್ನ ಹೆಂಡತಿಯ ಮೇಲೆ ಹಲವು ಬಾರಿ ಗುಂಡು ಹಾರಿಸಿದರು. ಅವಳು ಸ್ಥಳದಲ್ಲೇ ಸಾವನ್ನಪ್ಪಿದಳು.

ಇದನ್ನೂ ಓದಿ: ಹರ್ಯಾಣ: ಸೂಟ್​ಕೇಸ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ, ಆರೋಪಿಯ ಬಂಧನ

ತನ್ನ ಹೆಂಡತಿಯನ್ನು ಕೊಂದ ನಂತರ, ಕೃಷ್ಣಕುಮಾರ್ ತನ್ನ ಮನೆಗೆ ಹಿಂತಿರುಗಿ ನಂತರ ತನ್ನ ತಂದೆಯ ಮುಂದೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಅವರು ಏರ್ ಗನ್ ಬಳಸಿದ್ದಾರೆ ಎಂದು ವರದಿಯಾಗಿದೆ. ಗುಂಡಿನ ಸದ್ದು ಕೇಳಿದ ನಂತರ ಸಂಗೀತಾಳ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದರು, ಪೊಲೀಸರು ರಕ್ತದ ಮಡುವಿನಲ್ಲಿ ಸಂಗೀತಾಳ ಶವವನ್ನು ವಶಪಡಿಸಿಕೊಂಡರು. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.

ಇದನ್ನೂ ಓದಿ: ಹಿಮಾನಿ ನರ್ವಾಲ್ ಶವವನ್ನು ಆರೋಪಿ ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ಸಿಸಿಟಿವಿ ವಿಡಿಯೋ ಪತ್ತೆ

ಕೃಷ್ಣಕುಮಾರ್ ಮಲೇಷ್ಯಾದಲ್ಲಿ ಕೆಲಸ ಮಾಡುತ್ತಿದ್ದರು. ಭಾರತಕ್ಕೆ ಬಂದ ನಂತರ ಅವರು ಕೊಯಮತ್ತೂರಿನಲ್ಲಿ ನೆಲೆಸಿದ್ದರು. ಪೊಲೀಸರ ಪ್ರಕಾರ, ಕಳೆದ ಎರಡು ವರ್ಷಗಳಿಂದ, ದಂಪತಿಗಳ ನಡುವೆ ಜಗಳವಾಗುತ್ತಿತ್ತು. ಕೃಷ್ಣಕುಮಾರ್ ಸಂಗೀತಾಗೆ ವಿವಾಹೇತರ ಸಂಬಂಧವಿದೆ ಎಂದು ಅನುಮಾನಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಮತ್ತು ಡೈವೋರ್ಸ್ ಬಗ್ಗೆ ಚರ್ಚಿಸುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 pm, Tue, 4 March 25

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ