AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddique Kappan: ಎರಡು ವರ್ಷಗಳ ಬಳಿಕ ಪತ್ರಕರ್ತ ಸಿದ್ದೀಕ್ ಕಪ್ಪನ್ ಜೈಲಿನಿಂದ ಬಿಡುಗಡೆ

Kerala Journalist Releasing After 2 Years: ಪಿಎಂಎಲ್​ಎ ಕಾಯ್ದೆ ಅಡಿ ಎರಡು ವರ್ಷಗಳ ಹಿಂದೆ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರಿಗೆ ಇಲ್ಲಿಯ ಸೆಷೆನ್ಸ್ ನ್ಯಾಯಾಲಯ ಜಾಮೀನು ನೀಡಿದ್ದು, ಇಂದು ಬೆಳಗ್ಗೆ ಅವರು ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ.

Siddique Kappan: ಎರಡು ವರ್ಷಗಳ ಬಳಿಕ ಪತ್ರಕರ್ತ ಸಿದ್ದೀಕ್ ಕಪ್ಪನ್ ಜೈಲಿನಿಂದ ಬಿಡುಗಡೆ
ಸಿದ್ದೀಕ್ ಕಪ್ಪನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 02, 2023 | 8:11 AM

Share

ಲಕ್ನೋ: ಪಿಎಂಎಲ್​ಎ ಕಾಯ್ದೆ (PMLA Act) ಅಡಿ ಎರಡು ವರ್ಷಗಳ ಹಿಂದೆ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ (Siddique Kappan) ಅವರಿಗೆ ಇಲ್ಲಿಯ ಸೆಷೆನ್ಸ್ ನ್ಯಾಯಾಲಯ ಜಾಮೀನು ನೀಡಿದ್ದು, ಇಂದು ಬೆಳಗ್ಗೆ ಅವರು ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ. ಸಿದ್ದೀಕ್ ಕಪ್ಪನ್ ಬಿಡುಗಡೆಗೊಳಿಸಿ ಸೆಷನ್ಸ್ ಕೋರ್ಟ್ (Lucknow District and Sessions Court) ಆದೇಶಕ್ಕೆ ಸಹಿಹಾಕಿದೆ. ಗುರುವಾರ ಬೆಳಗ್ಗೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಅವರ ಪರ ವಕೀಲ ಇಶಾನ್ ಬಾಘೆಲ್ ನಿನ್ನೆ ಬುಧವಾರ ಮಾಹಿತಿ ನೀಡಿದ್ದಾರೆ.

ಜಾರಿ ನಿರ್ದೇಶನಾಲಯವು ಪತ್ರಕರ್ತ ಸಿದ್ದೀಕ್ ಕಪ್ಪನ್ ವಿರುದ್ಧ ಪಿಎಂಎಲ್​ಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. 2020 ಅಕ್ಟೋಬರ್ ತಿಂಗಳಲ್ಲಿ ಕಪ್ಪನ್ ಅವರನ್ನು ಲಕ್ನೋ ಕಾರಾಗೃಹದಲ್ಲಿ ಇರಿಸಲಾಗಿತ್ತು. ಎರಡು ವರ್ಷಗಳಿಗೂ ಹೆಚ್ಚು ಕಾಲ ಅವರು ಜೈಲಿನಲ್ಲಿಯೇ ಇದ್ದು, ಇದೀಗ ಬಿಡುಗಡೆಯಾಗುತ್ತಿದ್ದಾರೆ.

ಸಿದ್ದೀಕ್ ಕಪ್ಪನ್ ವಿರುದ್ಧ ಪಿಎಂಎಲ್​ಎ ಕಾಯ್ದೆ ಅಡಿ ಒಂದೆರಡು ಪ್ರಕರಣಗಳು ದಾಖಲಾಗಿವೆ. 2022ರ ಸೆಪ್ಟೆಂಬರ್ 9ರಂದು ಸುಪ್ರೀಂಕೋರ್ಟ್ ಆತನಿಗೆ ಒಂದು ಪ್ರಕರಣದಲ್ಲಿ ಜಾಮೀನು ನೀಡಿತು. ಮತ್ತೊಂದು ಪ್ರಕರಣ ಬಾಕಿ ಇದ್ದರಿಂದ ಜೈಲಿನಲ್ಲೇ ಮುಂದುವರಿದಿದ್ದರು. ಅದಾದ ಬಳಿಕ ಡಿಸೆಂಬರ್ ತಿಂಗಳಲ್ಲಿ ಅಲಹಾಬಾದ್ ಹೈಕೋರ್ಟ್​ನ ಲಕ್ನೋ ಪೀಠ ಸಿದ್ದೀಕ್ ಕಪ್ಪನ್​ಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ನೀಡಿತ್ತು. ಆದಾಗ್ಯೂ ಅವರನ್ನು ಜೈಲಿನಲ್ಲಿ ಮುಂದುವರಿಸಲಾಗಿತ್ತು.

ನಿನ್ನೆ ಲಕ್ನೋ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ಸಂಜಯ್ ಶಂಕರ್ ಪಾಂಡೆ, ಸಿದ್ದೀಕ್ ಕಪ್ಪನ್ ಮೇಲೆ ಬೇರೆ ಯಾವುದೇ ಪ್ರಕರಣ ಇಲ್ಲದಿದ್ದರೆ ಅವರನ್ನು ಬಿಡುಗಡೆ ಮಾಡಿ ಎಂದು ಲಕ್ನೋ ಕಾರಾಗೃಹ ಅಧಿಕಾರಿಗೆ ನಿರ್ದೇಶನ ನೀಡಿತು.

ಯಾಕೆ ಬಂಧನ?

ಕೇರಳದ ಮಲಪ್ಪುರಂನವರಾದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರು ಉತ್ತರಪ್ರದೇಶದ ಹಾಥ್ರಸ್ ಪಟ್ಟಣದಲ್ಲಿ 2020 ಅಕ್ಟೋರ್ 5ರಂದು ದಲಿತ ಮಹಿಳೆ ಮೇಲೆ ಸಂಭವಿಸಿದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Hathras Dalit Woman Rape and Murder) ಸುದ್ದಿಯನ್ನು ಕವರ್ ಮಾಡಲೆಂದು ಹೋಗಿದ್ದರು. ಮಥುರಾ ಟಾಲ್ ಪ್ಲಾಜಾ ಬಳಿಕ ಸಿದ್ದೀಕ್ ಕಪ್ಪನ್ ಸೇರಿ ನಾಲ್ವರನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

ಈ ನಾಲ್ವರು ಪಿಎಫ್​ಐ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದು, ಇಲ್ಲಿ ಕಾನೂನು ವ್ಯವಸ್ಥೆಯನ್ನು ಹಾಳು ಮಾಡುವ ಸಂಚು ರೂಪಿಸಿದ್ದರು ಎಂಬುದು ಪೊಲೀಸರ ಆರೋಪವಾಗಿತ್ತು. ಅದರಂತೆ ಐಟಿ, ಯುಎಪಿಎ ಮತ್ತು ಇಪಿಸಿ ಕಾಯ್ದೆಗಳ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಕಪ್ಪನ್ ವಿರುದ್ಧ ಪ್ರಕರಣಗಳು ದಾಖಲಾದವು. ನಂತರ ಮನಿ ಲಾಂಡ್ರಿಂಗ್ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯವು ಸಿದ್ದೀಕ್ ಕಪ್ಪನ್ ಮೇಲೆ ಪ್ರಕರಣ ದಾಖಲಿಸಿತು.

Published On - 8:08 am, Thu, 2 February 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!