AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡು ಭೂಕುಸಿತ: ನಿಧಿ ಸಂಗ್ರಹಿಸಲು ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿದ ಬಾಲಕಿ

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಮನೆಗಳನ್ನು, ತನ್ನವರನ್ನು ಕಳೆದುಕೊಂಡವರಿಗೆ ಸಹಾಯ ಮಾಡಲು ಪುಟ್ಟ ಬಾಲಕಿ ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ಮಾಡಿ ನಿಧಿ ಸಂಗ್ರಹಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ನೀಡಿದ್ದಾಳೆ.

ವಯನಾಡು ಭೂಕುಸಿತ: ನಿಧಿ ಸಂಗ್ರಹಿಸಲು ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿದ ಬಾಲಕಿ
ಬಾಲಕಿ
ನಯನಾ ರಾಜೀವ್
|

Updated on: Aug 09, 2024 | 9:04 AM

Share

ಕೇರಳದ ವಯನಾಡಿನಲ್ಲಿ ಸಾಲು ಸಾಲು ಗುಡ್ಡಗಳು ಕುಸಿದಿರುವುದರ ಜತೆಗೆ ಪ್ರವಾಹದ ಪರಿಸ್ಥಿತಿಯೂ ನಿರ್ಮಾಣವಾಗಿದೆ. 300ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಯನಾಡಿಗಾಗಿ ಎಲ್ಲರ ಹೃದಯ ಮಿಡಿಯುತ್ತಿದೆ. ತಮಿಳುನಾಡಿನಿಂದ ಹಿಡಿದು ಎಲ್ಲಾ ರಾಜ್ಯಗಳಲ್ಲಿ ನಿಧಿ ಸಂಗ್ರಹಿಸಲಾಗುತ್ತಿದೆ.

ನಿಧಿ ಸಂಗ್ರಹಿಸಲು 13 ವರ್ಷದ ಬಾಲಕಿಯೊಬ್ಬಳು ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಬಾಲಕಿಯನ್ನು ಶ್ಲಾಘಿಸಿದ್ದಾರೆ.

ಹರಿಣಿ ಶ್ರೀ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ತನ್ನ ಉಳಿತಾಯ ಸೇರಿದಂತೆ 15 ಸಾವಿರ ರೂ.ವನ್ನು ನೀಡಿದ್ದಾರೆ. ತಮ್ಮ ಭರತನಾಟ್ಯವನ್ನು ಫೋನ್​ನಲ್ಲಿ ರೆಕಾರ್ಡ್​ ಮಾಡಿ ಮುಖ್ಯಮಂತ್ರಿಗೆ ತೋರಿಸಿದ್ದಾರೆ.

ಮತ್ತಷ್ಟು ಓದಿ: ಗುಡ್ಡ, ಭೂ ಕುಸಿತ: ಮುಳ್ಳಯ್ಯನಗಿರಿ, ಚಾರ್ಮಾಡಿ, ಶೃಂಗೇರಿ ಡೇಂಜರಸ್: ಸ್ಫೋಟಕ ವರದಿ ಬಹಿರಂಗ

ಜುಲೈ 30ರಂದು ಸುರಿದ ಧಾರಾಕಾರ ಮಳೆ ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶಗಳಲ್ಲಿ ಭೂಕುಸಿತವನ್ನುಂಟು ಮಾಡಿತು. ನೂರಾರು ಮನೆಗಳು ಬೃಹತ್ ಗುಡ್ಡ ಕುಸಿತಕ್ಕೆ ಸಿಲುಕಿ ನೆಲಸಮಗೊಂಡಿವೆ. ಜನರು ಅವಶೇಷಗಳಡಿ ಸಿಲುಕಿದರು.ದುರಂತದಲ್ಲಿ ಇದುವರೆಗೆ 417 ಮಂದಿ ಸಾವನ್ನಪ್ಪಿದ್ದಾರೆ.

ವಿಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳ ನಾಯಕರ ಕರೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಆಗಸ್ಟ್ 10) ವಯನಾಡಿಗೆ ಭೇಟಿ ನೀಡಲಿದ್ದಾರೆ.

ವಯನಾಡು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವುದರಿಂದ ಪರಿಹಾರ ಮತ್ತು ಪುನರ್ವಸತಿಗಾಗಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಖಚಿತಪಡಿಸಲಾಗಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ವಿಜಯನ್, ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಮತ್ತು ತೀವ್ರ ವಿಪತ್ತು ಎಂದು ಘೋಷಿಸಲು ಕೇರಳ ಸರ್ಕಾರವು ಕೇಂದ್ರವನ್ನು ಕೇಳಿದೆ ಎಂದು ಹೇಳಿದರು.

ದುರಂತದ ತೀವ್ರತೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ಕೇಂದ್ರ ಗೃಹ ಸಚಿವಾಲಯ ಒಂಬತ್ತು ಸದಸ್ಯರ ಸಮಿತಿಯನ್ನು ನೇಮಿಸಿದೆ ಎಂದರು .

ವಿಪತ್ತು ಎದುರಿಸಲು ಕೇಂದ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ವಿಜಯನ್ ಹೇಳಿದರು. ರಾಜ್ಯ ಸರ್ಕಾರಕ್ಕೆ ಕೇಂದ್ರದ ನೆರವು ಮತ್ತು ಸಮಗ್ರ ಪುನರ್ವಸತಿ ಪ್ಯಾಕೇಜ್ ಸಿಗುತ್ತದೆ ಮತ್ತು ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ