AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡು ಭೂಕುಸಿತ: ನಿಧಿ ಸಂಗ್ರಹಿಸಲು ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿದ ಬಾಲಕಿ

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಮನೆಗಳನ್ನು, ತನ್ನವರನ್ನು ಕಳೆದುಕೊಂಡವರಿಗೆ ಸಹಾಯ ಮಾಡಲು ಪುಟ್ಟ ಬಾಲಕಿ ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ಮಾಡಿ ನಿಧಿ ಸಂಗ್ರಹಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ನೀಡಿದ್ದಾಳೆ.

ವಯನಾಡು ಭೂಕುಸಿತ: ನಿಧಿ ಸಂಗ್ರಹಿಸಲು ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿದ ಬಾಲಕಿ
ಬಾಲಕಿ
ನಯನಾ ರಾಜೀವ್
|

Updated on: Aug 09, 2024 | 9:04 AM

Share

ಕೇರಳದ ವಯನಾಡಿನಲ್ಲಿ ಸಾಲು ಸಾಲು ಗುಡ್ಡಗಳು ಕುಸಿದಿರುವುದರ ಜತೆಗೆ ಪ್ರವಾಹದ ಪರಿಸ್ಥಿತಿಯೂ ನಿರ್ಮಾಣವಾಗಿದೆ. 300ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಯನಾಡಿಗಾಗಿ ಎಲ್ಲರ ಹೃದಯ ಮಿಡಿಯುತ್ತಿದೆ. ತಮಿಳುನಾಡಿನಿಂದ ಹಿಡಿದು ಎಲ್ಲಾ ರಾಜ್ಯಗಳಲ್ಲಿ ನಿಧಿ ಸಂಗ್ರಹಿಸಲಾಗುತ್ತಿದೆ.

ನಿಧಿ ಸಂಗ್ರಹಿಸಲು 13 ವರ್ಷದ ಬಾಲಕಿಯೊಬ್ಬಳು ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಬಾಲಕಿಯನ್ನು ಶ್ಲಾಘಿಸಿದ್ದಾರೆ.

ಹರಿಣಿ ಶ್ರೀ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ತನ್ನ ಉಳಿತಾಯ ಸೇರಿದಂತೆ 15 ಸಾವಿರ ರೂ.ವನ್ನು ನೀಡಿದ್ದಾರೆ. ತಮ್ಮ ಭರತನಾಟ್ಯವನ್ನು ಫೋನ್​ನಲ್ಲಿ ರೆಕಾರ್ಡ್​ ಮಾಡಿ ಮುಖ್ಯಮಂತ್ರಿಗೆ ತೋರಿಸಿದ್ದಾರೆ.

ಮತ್ತಷ್ಟು ಓದಿ: ಗುಡ್ಡ, ಭೂ ಕುಸಿತ: ಮುಳ್ಳಯ್ಯನಗಿರಿ, ಚಾರ್ಮಾಡಿ, ಶೃಂಗೇರಿ ಡೇಂಜರಸ್: ಸ್ಫೋಟಕ ವರದಿ ಬಹಿರಂಗ

ಜುಲೈ 30ರಂದು ಸುರಿದ ಧಾರಾಕಾರ ಮಳೆ ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶಗಳಲ್ಲಿ ಭೂಕುಸಿತವನ್ನುಂಟು ಮಾಡಿತು. ನೂರಾರು ಮನೆಗಳು ಬೃಹತ್ ಗುಡ್ಡ ಕುಸಿತಕ್ಕೆ ಸಿಲುಕಿ ನೆಲಸಮಗೊಂಡಿವೆ. ಜನರು ಅವಶೇಷಗಳಡಿ ಸಿಲುಕಿದರು.ದುರಂತದಲ್ಲಿ ಇದುವರೆಗೆ 417 ಮಂದಿ ಸಾವನ್ನಪ್ಪಿದ್ದಾರೆ.

ವಿಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳ ನಾಯಕರ ಕರೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಆಗಸ್ಟ್ 10) ವಯನಾಡಿಗೆ ಭೇಟಿ ನೀಡಲಿದ್ದಾರೆ.

ವಯನಾಡು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವುದರಿಂದ ಪರಿಹಾರ ಮತ್ತು ಪುನರ್ವಸತಿಗಾಗಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಖಚಿತಪಡಿಸಲಾಗಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ವಿಜಯನ್, ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಮತ್ತು ತೀವ್ರ ವಿಪತ್ತು ಎಂದು ಘೋಷಿಸಲು ಕೇರಳ ಸರ್ಕಾರವು ಕೇಂದ್ರವನ್ನು ಕೇಳಿದೆ ಎಂದು ಹೇಳಿದರು.

ದುರಂತದ ತೀವ್ರತೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ಕೇಂದ್ರ ಗೃಹ ಸಚಿವಾಲಯ ಒಂಬತ್ತು ಸದಸ್ಯರ ಸಮಿತಿಯನ್ನು ನೇಮಿಸಿದೆ ಎಂದರು .

ವಿಪತ್ತು ಎದುರಿಸಲು ಕೇಂದ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ವಿಜಯನ್ ಹೇಳಿದರು. ರಾಜ್ಯ ಸರ್ಕಾರಕ್ಕೆ ಕೇಂದ್ರದ ನೆರವು ಮತ್ತು ಸಮಗ್ರ ಪುನರ್ವಸತಿ ಪ್ಯಾಕೇಜ್ ಸಿಗುತ್ತದೆ ಮತ್ತು ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?