AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆ: ಎರಡನೇ ಹಂತದಲ್ಲಿ ಶೇ 76 ಮತದಾನ

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಕೋಟ್ಟಯಂ, ಎರ್ನಾಕುಳಂ, ತ್ರಿಶ್ಶೂರ್, ಪಾಲಕ್ಕಾಡ್, ವಯನಾಡ್ ಜಿಲ್ಲೆಗಳ ಜನರು ಗುರುವಾರ ಮತಚಲಾಯಿಸಿದ್ದಾರೆ.

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆ: ಎರಡನೇ ಹಂತದಲ್ಲಿ ಶೇ 76 ಮತದಾನ
ಸಾಂದರ್ಭಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Edited By: |

Updated on: Dec 10, 2020 | 8:29 PM

Share

ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆದಿದ್ದು ಶೇ 76 ಮತದಾನವಾಗಿದೆ. ಕೋಟ್ಟಯಂ, ಎರ್ನಾಕುಳಂ, ತ್ರಿಶ್ಶೂರ್, ಪಾಲಕ್ಕಾಡ್, ವಯನಾಡ್ ಜಿಲ್ಲೆಗಳ ಜನರು ಗುರುವಾರ ಮತಚಲಾಯಿಸಿದ್ದಾರೆ.

ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರಗೆ ಎಲ್ಲರಿಗೂ ಮತದಾನ ಮಾಡುವ ಅವಕಾಶ ಕಲ್ಪಿಸಿದ್ದು , 6 ಗಂಟೆಯಿಂದ 7 ಗಂಟೆವರೆಗೆ ಕೋವಿಡ್ ರೋಗಿಗಳಿಗೆ ಮತ್ತು ಕ್ವಾರಂಟೈನ್ ನಲ್ಲಿರುವವರಿಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಸಂಜೆ 6.30ರವರೆಗೆ ಕೋಟ್ಟಯಂನಲ್ಲಿ ಶೇ 73.72, ಎರ್ನಾಕುಳಂನಲ್ಲಿ ಶೇ 76.74, ತ್ರಿಶ್ಶೂರ್​ನಲ್ಲಿ ಶೇ 74.58, ಪಾಲಕ್ಕಾಡ್​ನಲ್ಲಿ ಶೇ 77.53, ವಯನಾಡ್​ನಲ್ಲಿ ಶೇ 79.22ರಷ್ಟು ಮತದಾನವಾಗಿದೆ. ಕೊಚ್ಚಿ, ತ್ರಿಶ್ಶೂರ್ ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ ಕ್ರಮವಾಗಿ ಶೇ 61.45, ಶೇ 63.39ರಷ್ಟು ಮತದಾನ ದಾಖಲಾಗಿದೆ.

ಎರಡನೇ ಹಂತದ ಮತದಾನದಲ್ಲಿ 47,28,489 ಪುರುಷರು, 51,28,361 ಮಹಿಳೆಯರು, 93  ಟ್ರಾನ್ಸ್ ಜೆಂಡರ್, 265-ಅನಿವಾಸಿ ಭಾರತೀಯರು ಸೇರಿದಂತೆ 98,57,208 ಮತದಾರರಿದ್ದರು.  12,643 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.

ಕೇರಳ ಚುನಾವಣೆ: ಮೊದಲ ಹಂತದಲ್ಲಿ ಶೇ 71.59 ಮತದಾನ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ