AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚುನಾವಣೆ: ಮೊದಲ ಹಂತದಲ್ಲಿ ಶೇ 71.59 ಮತದಾನ

ಕೇರಳದ ತಿರುವನಂತಪುರಂ, ಇಡುಕ್ಕಿ, ಕೊಲ್ಲಂ, ಪತ್ತನಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು ಮಂಗಳವಾರ ಮತದಾರರು ಮತ ಚಲಾಯಿಸಿದ್ದಾರೆ.

ಕೇರಳ ಚುನಾವಣೆ: ಮೊದಲ ಹಂತದಲ್ಲಿ ಶೇ 71.59 ಮತದಾನ
ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ
ರಶ್ಮಿ ಕಲ್ಲಕಟ್ಟ
|

Updated on:Dec 08, 2020 | 7:05 PM

Share

ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಮೊದಲ ಹಂತದಲ್ಲಿ ತಿರುವನಂತಪುರಂ, ಇಡುಕ್ಕಿ, ಕೊಲ್ಲಂ, ಪತ್ತನಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಮಂಗಳವಾರ ಮತದಾರರು ಮತ ಚಲಾಯಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಮತದಾರರು ಸರದಿ ಸಾಲಿನಲ್ಲಿ ಅಂತರ ಕಾಯ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿದ್ದರು.

ಮೊದಲ ಹಂತದ ಮತದಾನದಲ್ಲಿ ಸಂಜೆ 6 ಗಂಟೆ ಹೊತ್ತಿಗೆ ಶೇಕಡಾ 71.59 ಮತದಾನವಾಗಿದೆ. ಇಡುಕ್ಕಿಯಲ್ಲಿ ಶೇಕಡಾ 73.08, ಕೊಲ್ಲಂ- ಶೇ. 72.07, ಪತ್ತನಂತಿಟ್ಟದಲ್ಲಿ ಶೇ. 69.02, ತಿರುವನಂತಪುರಂನಲ್ಲಿ 68.9 ಮತ್ತು ಆಲಪ್ಪುಳದಲ್ಲಿ ಶೇ. 76.3 ಮತದಾನ ದಾಖಲಾಗಿದೆ. ಜನರು ಕೋವಿಡ್ ಭಯಬಿಟ್ಟು ಮತದಾನಕ್ಕೆ ಬಂದಿರುವುದು ಇಲ್ಲಿ ಕಾಣುತ್ತದೆ.

ಕೇರಳದ ವಿಪಕ್ಷ ನೇತಾರ ರಮೇಶ್ ಚೆನ್ನಿತ್ತಲ, ದೇವಸ್ವಂ ಮತ್ತು ಪ್ರವಾಸೋದ್ಯಮ ಸಚಿವ ಕಡಂಕಂಪಳ್ಳಿ ಸುರೇಂದ್ರನ್, ಮೀನುಗಾರಿಕಾ ಇಲಾಖೆ ಸಚಿವೆ ಮೆರ್ಸಿಕುಟ್ಟಿ ಅಮ್ಮ, ಸಂಸದ ಆ್ಯಂಟೊ ಆ್ಯಂಟನಿ, ಎಎಂ ಆರಿಫ್, ಕೇರಳ ಕಾಂಗ್ರೆಸ್ (ಜೆ) ಮುಖ್ಯಸ್ಥ ಪಿಜೆ ಜೋಸೆಫ್ ಮೊದಲಾದವರು ಬೆಳಗ್ಗೆ ಮತಚಲಾಯಿಸಿದ್ದಾರೆ.

ಪತ್ತನಂತಿಟ್ಟ ಜಿಲ್ಲೆಯ ಮತಗಟ್ಟೆಯೊಂದರ ಆವರಣದಲ್ಲಿ ಪ್ರಜ್ಞೆತಪ್ಪಿ ಬಿದ್ದು 90ರಹರೆಯದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ತಿರುವನಂತಪುರಂನ ಬಾಲರಾಮಪುರಂ ಗ್ರಾಮ ಪಂಚಾಯತಿನ ಸ್ವತಂತ್ರ ಅಭ್ಯರ್ಥಿ ಎಸ್. ಫ್ರಾನ್ಸಿಸ್ ಕೋವಿಡ್ ರೋಗದಿಂದ ನಿಧನರಾಗಿದ್ದಾರೆ.

ಈ ಐದು ಜಿಲ್ಲೆಗಳಲ್ಲಿ 395 ಪಂಚಾಯತ್ ಗಳ 6,910 ವಾರ್ಡ್​ಗಳಿಗೆ ಚುನಾವಣೆ ನಡೆಯುತ್ತಿದೆ. 88.26 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮೊದಲನೇ ಹಂತದ ಚುನಾವಣೆಯಲ್ಲಿ 11,225 ಮತಗಟ್ಟೆಗಳಿವೆ.

ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ: 5 ಜಿಲ್ಲೆಗಳಲ್ಲಿ ಇಂದು ಮತದಾನ

Published On - 5:12 pm, Tue, 8 December 20

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?