AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಪಡೆದಿಲ್ಲ ಎಂಬ ಘೋಷಣಾ ಪತ್ರ ಸಲ್ಲಿಸಿ; ಕೇರಳದ ಎಲ್ಲ ಸರ್ಕಾರಿ ಪುರುಷ ಉದ್ಯೋಗಿಗಳಿಗೆ ಸುತ್ತೋಲೆ ಮೂಲಕ ಸೂಚನೆ

ವರದಕ್ಷಿಣೆ ಪಡೆಯುವುದು ಮತ್ತು ನೀಡುವುದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ. 5 ವರ್ಷಗಳಿಗೂ ಹೆಚ್ಚಿನ ಅವಧಿಯ ಜೈಲು ಶಿಕ್ಷೆ ನೀಡಬಹುದು. 15,000 ರೂ.ವರೆಗೂ ದಂಡ ವಿಧಿಸಬಹುದು ಎಂದೂ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ವರದಕ್ಷಿಣೆ ಪಡೆದಿಲ್ಲ ಎಂಬ ಘೋಷಣಾ ಪತ್ರ ಸಲ್ಲಿಸಿ; ಕೇರಳದ ಎಲ್ಲ ಸರ್ಕಾರಿ ಪುರುಷ ಉದ್ಯೋಗಿಗಳಿಗೆ ಸುತ್ತೋಲೆ ಮೂಲಕ ಸೂಚನೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Jul 25, 2021 | 5:02 PM

Share

ಕೇರಳ ಸರ್ಕಾರಿ ಉದ್ಯೋಗದಲ್ಲಿರುವ ಪುರುಷ ಉದ್ಯೋಗಿಗಳು, ತಾವು ಮದುವೆಯಾದ ವರ್ಷ, ದಿನಾಂಕ ಮತ್ತು ಮದುವೆ ಸಂದರ್ಭದಲ್ಲಿ ವಧುವಿನ ಕುಟುಂಬದಿಂದ ಯಾವುದೇ ರೀತಿಯ ವರದಕ್ಷಿಣೆ ಪಡೆದಿಲ್ಲ ಎಂಬ ಘೋಷಣಾ ಪತ್ರ (Declaration)ವನ್ನು ಸಲ್ಲಿಸಬೇಕು. ಆ ಲಿಖಿತ ಘೋಷಣಾ ಪತ್ರದ ಮೇಲೆ ಉದ್ಯೋಗಿಯ ತಂದೆ, ಪತ್ನಿ ಮತ್ತು ಪತ್ನಿಯ ಅಪ್ಪ (ಮಾವ)ನ ಸಹಿ ಇರಬೇಕು. ಇನ್ನೊಂದು ತಿಂಗಳೊಳಗೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ಪುರುಷ ಉದ್ಯೋಗಿಯೂ ದಾಖಲೆ ಸಲ್ಲಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಇಂಥ ಒಂದು ಸುತ್ತೋಲೆಯನ್ನು ಕೇರಳ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೊರಡಿಸಿದೆ. ಇದರ ನಿರ್ದೇಶಕರಾದ ಟಿ.ವಿ.ಅನುಪಮಾ ಅವರ ಹೆಸರು, ಸಹಿ ಇರುವ ಸುತ್ತೋಲೆಯಲ್ಲಿ, ಸರ್ಕಾರಿ ಪುರುಷ ಉದ್ಯೋಗಿಗಳು ನೀಡುವ, ವರದಕ್ಷಿಣೆ ಪಡೆದಿಲ್ಲ ಮತ್ತು ವರದಕ್ಷಿಣೆ ಕೇಳಿಲ್ಲ ಎಂಬ ಘೋಷಣಾ ಪತ್ರವನ್ನು ಸಂಗ್ರಹಿಸುವಂತೆ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಹಾಗೇ, ಆಯಾ ಜಿಲ್ಲಾ ವರದಕ್ಷಿಣೆ ನಿಷೇಧ ಅಧಿಕಾರಿಗಳ ಹೆಗಲಿಗೆ ಈ ಜವಾಬ್ದಾರಿ ವಹಿಸಲಾಗಿದೆ.

ವರದಕ್ಷಿಣೆ ಪಡೆಯುವುದು ಮತ್ತು ನೀಡುವುದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ. 5 ವರ್ಷಗಳಿಗೂ ಹೆಚ್ಚಿನ ಅವಧಿಯ ಜೈಲು ಶಿಕ್ಷೆ ನೀಡಬಹುದು. 15,000 ರೂ.ವರೆಗೂ ದಂಡ ವಿಧಿಸಬಹುದು ಎಂದೂ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿ ವರದಕ್ಷಿಣೆ ಕಿರುಕುಳ ಸಂಬಂಧ ಹಲವು ಯುವತಿಯರು ಮೃತಪಟ್ಟ ವರದಿಯಾದ ಬೆನ್ನಲ್ಲೇ ಇತ್ತೀಚೆಗೆ ಕೇರಳ ಸರ್ಕಾರ, ವರದಕ್ಷಿಣೆ ನಿಷೇಧ ಕಾಯ್ದೆಯನ್ನು ತಿದ್ದುಪಡಿ ಮಾಡಿದೆ. ಅದರಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರೇ, ವರದಕ್ಷಿಣೆ ನಿಷೇಧ ಮುಖ್ಯ ಅಧಿಕಾರಿಯೂ ಆಗಿರುತ್ತಾರೆ.

ಇದನ್ನೂ ಓದಿ: Virender Sehwag: ಟೀಮ್ ಇಂಡಿಯಾದ ಇಬ್ಬರು ಆಟಗಾರರ ವಿರುದ್ಧ ಅಸಮಾಧಾನ ಹೊರಹಾಕಿದ ಸೆಹ್ವಾಗ್

Kerala male Government employees to submit no dowry declarations By one month

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ