AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಪ್ರಯಾಣದ ನಡುವೆ ಸಿಗರೇಟ್ ಸೇದಿದ್ದ ಕೇರಳದ ವ್ಯಕ್ತಿಯ ಬಂಧನ

ಪೊಲೀಸರ ಪ್ರಕಾರ, ತ್ರಿಶೂರ್ ನಿವಾಸಿ ಸುಕುಮಾರನ್ ವಿರುದ್ಧ ವಿಮಾನ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜನವರಿ 29 ರಂದು ಪ್ರಕರಣ ದಾಖಲಾಗಿದ್ದು, ವ್ಯಕ್ತಿಯನ್ನು ಬಂಧಿಸಲಾಗಿದೆ

ವಿಮಾನ ಪ್ರಯಾಣದ ನಡುವೆ ಸಿಗರೇಟ್ ಸೇದಿದ್ದ ಕೇರಳದ ವ್ಯಕ್ತಿಯ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 31, 2023 | 8:38 PM

Share

ಕೊಚ್ಚಿ: ಜನವರಿ 29 ರಂದು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಖಾಸಗಿ ಏರ್‌ಲೈನ್ಸ್‌ನ ಶೌಚಾಲಯದೊಳಗೆ ಸಿಗರೇಟ್ ಸೇದಿದ ಆರೋಪದ ಮೇಲೆ ಕೇರಳದ 62 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ತ್ರಿಶೂರ್ ನಿವಾಸಿ ಸುಕುಮಾರನ್ ವಿರುದ್ಧ ವಿಮಾನ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜನವರಿ 29 ರಂದು ಪ್ರಕರಣ ದಾಖಲಾಗಿದ್ದು, ವ್ಯಕ್ತಿಯನ್ನು ಬಂಧಿಸಲಾಗಿದೆ. ನಂತರ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಅವರು ಹೇಳಿದರು.

ವಿಮಾನದ ಹಾರಾಟದಲ್ಲಿರುವಾಗಲೇ ಸ್ಪೈಸ್‌ಜೆಟ್ ಏರ್‌ವೇಸ್‌ನ ಶೌಚಾಲಯದೊಳಗೆ ವ್ಯಕ್ತಿ ಧೂಮಪಾನ ಮಾಡುತ್ತಿರುವುದು ಕಂಡುಬಂದಿದೆ ಮತ್ತು ಸಿಬ್ಬಂದಿ ಆತನನ್ನು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ ಎಂದು ಎಫ್ಐಆರ್ ಹೇಳಿದೆ.

ದುಬೈನಿಂದ ಕೊಚ್ಚಿಗೆ ಬರುವ ಸ್ಪೈಸ್‌ಜೆಟ್ ವಿಳಂಬ

ದುಬೈನಿಂದ ಕೊಚ್ಚಿಗೆ ಬರುವ ಸ್ಪೈಸ್‌ಜೆಟ್ ವಿಮಾನ ತಡವಾಗಿದೆ. ಮಂಗಳವಾರ ಮಧ್ಯಾಹ್ನ 12.10ಕ್ಕೆ ಹೊರಡಬೇಕಿದ್ದ ವಿಮಾನ ಇನ್ನೂ ಟೇಕಾಫ್ ಆಗಿಲ್ಲ. ಬುಧವಾರ ಬೆಳಗ್ಗೆ 7.30ಕ್ಕೆ ಹೊರಡಲಿದೆ ಎಂಬುದು ಅಧಿಸೂಚನೆ  ಲಭಿಸಿದೆ. ವಿಮಾನ ವಿಳಂಬವಾಗಲು ತಾಂತ್ರಿಕ ದೋಷವೇ ಕಾರಣ ಎನ್ನಲಾಗಿದೆ.

ಸುಮಾರು 150 ಪ್ರಯಾಣಿಕರಿದ್ದಾರೆ. ತಂ ಪರ್ಯಾಯ ಸೌಲಭ್ಯ ಕಲ್ಪಿಸಿಲ್ಲ ಎಂದು ಪ್ರಯಾಣಿಕರು ದೂರಿದ್ದು,ಪ್ರಯಾಣಿಕರು ವಿಮಾನ ನಿಲ್ದಾಣ ಅಥವಾ ಹೋಟೆಲ್‌ನಲ್ಲಿ ರಾತ್ರಿ ಕಳೆಯಬೇಕಾಗಿದೆ.

ಕಳೆದ ದಿನ, ಶಾರ್ಜಾದಿಂದ ಕೋಯಿಕ್ಕೋಡ್​​ಗೆ  ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಅಸಮರ್ಪಕ ಕಾರ್ಯದಿಂದಾಗಿ ಹಿಂತಿರುಗಿಸಲಾಗಿತ್ತು. ಈ ವಿಮಾನದ ಪ್ರಯಾಣಿಕರನ್ನು 38 ಗಂಟೆಗಳ ನಂತರ ಮನೆಗೆ ಕಳುಹಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:26 pm, Tue, 31 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ